ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆ ಕಟ್ಟಡ ಕುಸಿತ ಆತಂಕ ಪ್ರಕರಣ ಸಂಬಂಧಪಟ್ಟಂತೆ ಪಬ್ಲಿಕ್ ಟಿವಿ ವರದಿಯಿಂದ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಇಂದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಆರೋಗ್ಯ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಲ್ಲದೆ ಶಾಶ್ವತ ಪರಿಹಾರಕ್ಕಾಗಿ ಇಲಾಖೆಗೆ ಹಣದ ಅನುಮೋದನೆಗಾಗಿ ಪತ್ರ ರವಾನೆ ಮಾಡಿದ್ದು, ಅದಷ್ಟು ಬೇಗ ಶಾಶ್ವತ ಪರಿಹಾರ ಕಾರ್ಯ ಮಾಡುವುದಾಗಿ ಎಇಇ ಶಿವಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ಅಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ರಮೇಶ್ ಮಾತನಾಡಿ, ಸಮಸ್ಯೆ ಬಗ್ಗೆ ಗಮನ ಹರಿಸಿದ್ದು ಆದಷ್ಟು ಬೇಗ ಬಗೆಹರಿಸುವ ಭರವಸೆ ನೀಡಿದ್ರು.



