ವಿಜಯಪುರ: ತಾಲೂಕಿನ ಕನ್ನೂರು (Kannur) ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸರ್ಕಾರದ ಉಚಿತ ಪುಸ್ತಕಗಳನ್ನು ಬೀದಿಪಾಲು ಮಾಡಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯರನ್ನು (Headmaster) ಅಮಾನತು ಮಾಡಲಾಗಿದೆ.
ಘಟನೆಯ ಬಗ್ಗೆ ನಿಮ್ಮ ‘ಪಬ್ಲಿಕ್ ಟಿವಿ’ ವಿಸ್ತೃತ ವರದಿಯನ್ನು ಬಿತ್ತರಿಸಿತ್ತು. ವರದಿಯ 12 ಗಂಟೆಯಲ್ಲೇ ಶಾಲೆಯ ಮುಖ್ಯೋಪಾಧ್ಯಾಯ ವಿಜಯಕುಮಾರ ಅವತಾಡೆಯನ್ನು ಅಮಾನತು ಮಾಡಲು ಡಿಡಿಪಿಐ ಟಿಎಸ್ ಕೋಲಾರ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಕಾಡ್ಗಿಚ್ಚು
ಇನ್ನು ಪಬ್ಲಿಕ್ ಟಿವಿ ವರದಿ ಆಧರಿಸಿ ವಿಜಯಕುಮಾರ ಅಮಾನತು ಎಂದು ಆದೇಶದಲ್ಲಿ ನಮೂದಿಸಲಾಗಿದೆ. ನಿರ್ಲಕ್ಷತೆ ಹಾಗೂ ಕರ್ತವ್ಯಲೋಪ ಹಿನ್ನೆಲೆ ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಬೌಂಡರಿ ಚಚ್ಚಿ ಆರ್ಸಿಬಿ ಗೆಲುವು ಕಸಿದ 16ರ ಹುಡುಗಿ – ಯಾರು ಈ ಕಮಲಿನಿ? ಮುಂಬೈ 1.6 ಕೋಟಿ ನೀಡಿದ್ದು ಯಾಕೆ?