ಮಡಿಕೇರಿ: ಗುರುವಾರ ಪಬ್ಲಿಕ್ ಟಿವಿ ವೆಬ್ನಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆಯಲ್ಲಿ ಉಪಯೋಗಕ್ಕೆ ಬಾರದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ ಎಂದು ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಸರಿಪಡಿಸಲು ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮುಂದಾಗಿದ್ದಾರೆ.

ಈ ವರದಿಯಿಂದ ಎಚ್ಚೇತ್ತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸರಿಪಡಿಸುತ್ತಿದ್ದಾರೆ. ಏನೇ ಆಗಲಿ ಈ ವ್ಯಾಪ್ತಿಯ ಗ್ರಾಹಕರು ಕಾರ್ಡನ್ನು ಗ್ರಾಮ ಪಂಚಾಯಿತಿಗೆ ಹಿಂತಿರುಗಿಸಲು ನಿರ್ಧರಿಸಿದರು. ಆದರೆ ಗುರುವಾರ ವರದಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಪಡಿಸಲು ಮುಂದಾಗಿದ್ದಾರೆ.
ಸದ್ಯ ಪಬ್ಲಿಕ್ ಟಿವಿ ವರದಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


