Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಿಕ್ಷಕಿಯ ಕಡ್ಡಾಯ ವರ್ಗಾವಣೆ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಿಕ್ಷಕಿಯ ಕಡ್ಡಾಯ ವರ್ಗಾವಣೆ ರದ್ದು

Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಿಕ್ಷಕಿಯ ಕಡ್ಡಾಯ ವರ್ಗಾವಣೆ ರದ್ದು

Public TV
Last updated: December 12, 2019 12:16 am
Public TV
Share
2 Min Read
rcr teacher transfer collage copy 1
SHARE

– ಕೊಟ್ಟ ಮಾತು ಉಳಿಸಿಕೊಂಡ ಶಿಕ್ಷಣ ಸಚಿವರು
– ತಪ್ಪನ್ನ ತಿದ್ದಿಕೊಂಡ ಶಿಕ್ಷಣ ಇಲಾಖೆ

ರಾಯಚೂರು: ಬುದ್ಧಿಮಾಂದ್ಯ ಮಗಳ ಆರೈಕೆಗಾಗಿ ವರ್ಗಾವಣೆ ರದ್ದು ಕೋರಿ ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದ ರಾಯಚೂರಿನ ಶಿಕ್ಷಕಿ ಶಾಂತಲಕ್ಷ್ಮಿ ಅವರ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಮೂಲಕ ಅವರ ಕಷ್ಟಕ್ಕೆ ಕೊನೆಗೂ ಪರಿಹಾರ ಸಿಕ್ಕಿದೆ.

Public Tv IMPACT ನಗರದ ಜಹಿರಾಬಾದ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಶಾಂತಲಕ್ಷ್ಮಿ ಅವರಿಗೆ ಶಿಕ್ಷಣ ಸಚಿವರ ಭರವಸೆಯಂತೆ ಕಡ್ಡಾಯ ವರ್ಗಾವಣೆ ರದ್ದಾಗಿದ್ದು, ಹಾಲಿ ಸ್ಥಳದಲ್ಲೇ ಮುಂದುವರಿಯುವ ಅವಕಾಶ ಸಿಕ್ಕಿದೆ. ಬುದ್ಧಿಮಾಂದ್ಯ ಮಗಳನ್ನು ಕರೆದುಕೊಂಡು ಅಧಿಕಾರಿಗಳ ಬಳಿ ತನ್ನ ಕಷ್ಟ ಹೇಳಿಕೊಂಡು ಸಾಕಾಗಿದ್ದ ಶಾಂತಲಕ್ಷ್ಮಿ ಕುರಿತು ಪಬ್ಲಿಕ್ ಟಿವಿ ವರದಿಯನ್ನ ಪ್ರಸಾರ ಮಾಡಿತ್ತು. ವರದಿಗೆ ಎಚ್ಚೆತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ವತಃ ಶಿಕ್ಷಕಿಯ ಜೊತೆ ದೂರವಾಣಿಯಲ್ಲಿ ಮಾತನಾಡಿ ಅವರ ಕಷ್ಟವನ್ನ ಆಲಿಸಿ, ವರ್ಗಾವಣೆ ರದ್ದುಗೊಳಿಸುವ ಬಗ್ಗೆ ಭರವಸೆಯನ್ನ ನೀಡಿದ್ದರು. ಇದನ್ನೂ ಓದಿ: ಬುದ್ಧಿಮಾಂದ್ಯ ಮಗಳ ಆರೈಕೆಗಾಗಿ ಶಿಕ್ಷಕಿ ಪರದಾಟ – ವರ್ಗಾವಣೆ ರದ್ದು ಮಾಡದೆ ಸತಾಯಿಸ್ತಿರುವ ಶಿಕ್ಷಣ ಇಲಾಖೆ

collage rcr teacher 1

ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರ್ಗಿ ಅಪರ ಆಯುಕ್ತ ನಳಿನ್ ಅತುಲ್ ಕೂಡಲೇ ವರ್ಗಾವಣೆ ರದ್ದುಗೊಳಿಸಿ ಹಿಂದಿನ ಸ್ಥಳದಲ್ಲೇ ಶಿಕ್ಷಕಿ ಶಾಂತಲಕ್ಷ್ಮಿ ಅವರನ್ನು ಮುಂದುವರಿಸುವಂತೆ ಆದೇಶಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು ಉಪನಿರ್ದೇಶಕರಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಈ ಮೂಲಕ ನಿಯಮಬಾಹಿರವಾಗಿ ವರ್ಗಾವಣೆಯ ಶಿಕ್ಷೆಗೆ ಗುರಿಯಾಗಿದ್ದ ಶಿಕ್ಷಕಿ ಶಾಂತಲಕ್ಷ್ಮಿ ಅವರಿಗೆ ನ್ಯಾಯ ದೊರಕಿದೆ. ಇದನ್ನೂ ಓದಿ: ಶಿಕ್ಷಕಿಗೆ ಕರೆ ಮಾಡಿ ಕಷ್ಟ ಆಲಿಸಿದ ಸುರೇಶ್

ಬುದ್ಧಿಮಾಂದ್ಯ ಮಗಳ ಆರೈಕೆ ಹಾಗೂ ವಿಧವೆಯಾಗಿರುವ ಕಾರಣ ನಿಯಮಾನುಸಾರ ಕಡ್ಡಾಯ ವರ್ಗಾವಣೆಯಲ್ಲಿ ಶಿಕ್ಷಕಿ ಹೆಸರು ನಮೂದಿಸಬಾದರಿತ್ತು. ಶಿಕ್ಷಕಿಗೆ ಆದ ಅನಾನೂಕೂಲ ಪರಿಗಣೆನೆಗೆ ತೆಗೆದುಕೊಂಡು ಮೂಲ ಶಾಲೆಯಲ್ಲಿ ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರು ಆದೇಶಿಸಿದ್ದಾರೆ. ತೆರವಾದ ಸ್ಥಳಕ್ಕೆ ಹಾಜರಾದ ಶಿಕ್ಷಕಿ ಶ್ರೀದೇವಿ ಅವರನ್ನ ನಿಮ್ಮ ಹಂತದಲ್ಲೇ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಿ ಅಂತ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಳೀನ್ ಅತುಲ್ ಸೂಚಿಸಿದ್ದಾರೆ.

rcr teacher transfer

ಏನಿದು ವರ್ಗಾವಣೆ ಪ್ರಕರಣ.?
ಶಿಕ್ಷಕಿ ಶಾಂತಾಲಕ್ಷ್ಮಿ ಅವರನ್ನ ರಾಯಚೂರಿನಿಂದ ಸುಮಾರು 25 ಕಿ.ಮೀ ದೂರದ ಮಟಮಾರಿ ಗ್ರಾಮಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ ಪತಿಯನ್ನು ಕಳೆದುಕೊಂಡ ಶಿಕ್ಷಕಿ ವೃತ್ತಿ ಮಾಡುತ್ತಲೇ ಮಾನಸಿಕ ಅಸ್ವಸ್ಥ ಮಗಳನ್ನು ಸಾಕುತ್ತಿದ್ದಾರೆ. ಈಗ ಏಕಾಏಕಿ ವರ್ಗಾವಣೆಯನ್ನ ವಿರೋಧಿಸಿ, ವರ್ಗಾವಣೆ ರದ್ದುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಅಲ್ಲದೆ ಕಡ್ಡಾಯ ವರ್ಗಾವಣೆ ಮಾಡಬೇಕಾದರೂ ಒಂದೇ ಜಾಗದಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರಬೇಕು. ಆದ್ರೆ ಶಾಂತಲಕ್ಷ್ಮಿ 8 ವರ್ಷಗಳಿಂದ ಸೇವೆ ಮಾಡುತ್ತಿದ್ದು, ಎರಡು ವರ್ಷ ಬಾಕಿಯಿರುವಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿ ವರ್ಗಾವಣೆ ಮಾಡಿರುವುದು ಸರಿಯಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದರು.

ನಗರ ಪ್ರದೇಶದಿಂದ ನಿಯಮ ಉಲ್ಲಂಘಿಸಿ ಗ್ರಾಮೀಣ ಭಾಗಕ್ಕೆ ವರ್ಗಾವಣೆ ಮಾಡಿದ್ದರ ಕುರಿತು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಇದನ್ನ ಗಮನಿಸಿದ ಶಿಕ್ಷಣ ಸಚಿವ ಕೂಡಲೇ ಸ್ಪಂದಿಸಿ ವರ್ಗಾವಣೆ ರದ್ದುಗೊಳಿಸುವ ಭರವಸೆ ನೀಡಿದ್ದರು.

ಈಗ ತಾನೆ ಶಿಕ್ಷಕಿ ಶ್ರೀಮತಿ ಶಾಂತಲಕ್ಷ್ಮಿಯವರ ಜೊತೆ ಮಾತನಾಡಿದೆ.

ಅವರು ಎದುರಿಸುತ್ತಿರುವ ಕಷ್ಟಗಳ ಕುರಿತು ವಿಚಾರಿಸಿದೆ.

ದಯವಿಟ್ಟು ವಿವರಗಳನ್ನು ನನಗೆ ಕಳಿಸಿ ಎಂದು ತಿಳಿಸಿದ್ದೇನೆ,

ಅವರ ಕಷ್ಟವನ್ನು ದೂರ ಮಾಡಿ ಅವರು ಬಯಸಿರುವ ಸ್ಥಳಕ್ಕೇ ಅವರನ್ನು ಉಳಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದೇನೆ.https://t.co/6Fe3vOosKF

— S.Suresh Kumar (@nimmasuresh) December 7, 2019

TAGGED:Department of EducationPublic TVraichursuresh kumarteachertransferಇಂಪ್ಯಾಕ್ಟ್ಪಬ್ಲಿಕ್ ಟಿವಿಪ್ರಾಥಮಿಕ ಶಿಕ್ಷಣ ಸಚಿವರುರಾಯಚೂರುಶಿಕ್ಷಣ ಇಲಾಖೆಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
15 seconds ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
11 minutes ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
30 minutes ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
42 minutes ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
1 hour ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?