Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಿಕ್ಷಕಿಯ ಕಡ್ಡಾಯ ವರ್ಗಾವಣೆ ರದ್ದು

Public TV
Last updated: December 12, 2019 12:16 am
Public TV
Share
2 Min Read
rcr teacher transfer collage copy 1
SHARE

– ಕೊಟ್ಟ ಮಾತು ಉಳಿಸಿಕೊಂಡ ಶಿಕ್ಷಣ ಸಚಿವರು
– ತಪ್ಪನ್ನ ತಿದ್ದಿಕೊಂಡ ಶಿಕ್ಷಣ ಇಲಾಖೆ

ರಾಯಚೂರು: ಬುದ್ಧಿಮಾಂದ್ಯ ಮಗಳ ಆರೈಕೆಗಾಗಿ ವರ್ಗಾವಣೆ ರದ್ದು ಕೋರಿ ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದ ರಾಯಚೂರಿನ ಶಿಕ್ಷಕಿ ಶಾಂತಲಕ್ಷ್ಮಿ ಅವರ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಮೂಲಕ ಅವರ ಕಷ್ಟಕ್ಕೆ ಕೊನೆಗೂ ಪರಿಹಾರ ಸಿಕ್ಕಿದೆ.

Public Tv IMPACT ನಗರದ ಜಹಿರಾಬಾದ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಶಾಂತಲಕ್ಷ್ಮಿ ಅವರಿಗೆ ಶಿಕ್ಷಣ ಸಚಿವರ ಭರವಸೆಯಂತೆ ಕಡ್ಡಾಯ ವರ್ಗಾವಣೆ ರದ್ದಾಗಿದ್ದು, ಹಾಲಿ ಸ್ಥಳದಲ್ಲೇ ಮುಂದುವರಿಯುವ ಅವಕಾಶ ಸಿಕ್ಕಿದೆ. ಬುದ್ಧಿಮಾಂದ್ಯ ಮಗಳನ್ನು ಕರೆದುಕೊಂಡು ಅಧಿಕಾರಿಗಳ ಬಳಿ ತನ್ನ ಕಷ್ಟ ಹೇಳಿಕೊಂಡು ಸಾಕಾಗಿದ್ದ ಶಾಂತಲಕ್ಷ್ಮಿ ಕುರಿತು ಪಬ್ಲಿಕ್ ಟಿವಿ ವರದಿಯನ್ನ ಪ್ರಸಾರ ಮಾಡಿತ್ತು. ವರದಿಗೆ ಎಚ್ಚೆತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ವತಃ ಶಿಕ್ಷಕಿಯ ಜೊತೆ ದೂರವಾಣಿಯಲ್ಲಿ ಮಾತನಾಡಿ ಅವರ ಕಷ್ಟವನ್ನ ಆಲಿಸಿ, ವರ್ಗಾವಣೆ ರದ್ದುಗೊಳಿಸುವ ಬಗ್ಗೆ ಭರವಸೆಯನ್ನ ನೀಡಿದ್ದರು. ಇದನ್ನೂ ಓದಿ: ಬುದ್ಧಿಮಾಂದ್ಯ ಮಗಳ ಆರೈಕೆಗಾಗಿ ಶಿಕ್ಷಕಿ ಪರದಾಟ – ವರ್ಗಾವಣೆ ರದ್ದು ಮಾಡದೆ ಸತಾಯಿಸ್ತಿರುವ ಶಿಕ್ಷಣ ಇಲಾಖೆ

collage rcr teacher 1

ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರ್ಗಿ ಅಪರ ಆಯುಕ್ತ ನಳಿನ್ ಅತುಲ್ ಕೂಡಲೇ ವರ್ಗಾವಣೆ ರದ್ದುಗೊಳಿಸಿ ಹಿಂದಿನ ಸ್ಥಳದಲ್ಲೇ ಶಿಕ್ಷಕಿ ಶಾಂತಲಕ್ಷ್ಮಿ ಅವರನ್ನು ಮುಂದುವರಿಸುವಂತೆ ಆದೇಶಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು ಉಪನಿರ್ದೇಶಕರಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಈ ಮೂಲಕ ನಿಯಮಬಾಹಿರವಾಗಿ ವರ್ಗಾವಣೆಯ ಶಿಕ್ಷೆಗೆ ಗುರಿಯಾಗಿದ್ದ ಶಿಕ್ಷಕಿ ಶಾಂತಲಕ್ಷ್ಮಿ ಅವರಿಗೆ ನ್ಯಾಯ ದೊರಕಿದೆ. ಇದನ್ನೂ ಓದಿ: ಶಿಕ್ಷಕಿಗೆ ಕರೆ ಮಾಡಿ ಕಷ್ಟ ಆಲಿಸಿದ ಸುರೇಶ್

ಬುದ್ಧಿಮಾಂದ್ಯ ಮಗಳ ಆರೈಕೆ ಹಾಗೂ ವಿಧವೆಯಾಗಿರುವ ಕಾರಣ ನಿಯಮಾನುಸಾರ ಕಡ್ಡಾಯ ವರ್ಗಾವಣೆಯಲ್ಲಿ ಶಿಕ್ಷಕಿ ಹೆಸರು ನಮೂದಿಸಬಾದರಿತ್ತು. ಶಿಕ್ಷಕಿಗೆ ಆದ ಅನಾನೂಕೂಲ ಪರಿಗಣೆನೆಗೆ ತೆಗೆದುಕೊಂಡು ಮೂಲ ಶಾಲೆಯಲ್ಲಿ ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರು ಆದೇಶಿಸಿದ್ದಾರೆ. ತೆರವಾದ ಸ್ಥಳಕ್ಕೆ ಹಾಜರಾದ ಶಿಕ್ಷಕಿ ಶ್ರೀದೇವಿ ಅವರನ್ನ ನಿಮ್ಮ ಹಂತದಲ್ಲೇ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಿ ಅಂತ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಳೀನ್ ಅತುಲ್ ಸೂಚಿಸಿದ್ದಾರೆ.

rcr teacher transfer

ಏನಿದು ವರ್ಗಾವಣೆ ಪ್ರಕರಣ.?
ಶಿಕ್ಷಕಿ ಶಾಂತಾಲಕ್ಷ್ಮಿ ಅವರನ್ನ ರಾಯಚೂರಿನಿಂದ ಸುಮಾರು 25 ಕಿ.ಮೀ ದೂರದ ಮಟಮಾರಿ ಗ್ರಾಮಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ ಪತಿಯನ್ನು ಕಳೆದುಕೊಂಡ ಶಿಕ್ಷಕಿ ವೃತ್ತಿ ಮಾಡುತ್ತಲೇ ಮಾನಸಿಕ ಅಸ್ವಸ್ಥ ಮಗಳನ್ನು ಸಾಕುತ್ತಿದ್ದಾರೆ. ಈಗ ಏಕಾಏಕಿ ವರ್ಗಾವಣೆಯನ್ನ ವಿರೋಧಿಸಿ, ವರ್ಗಾವಣೆ ರದ್ದುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಅಲ್ಲದೆ ಕಡ್ಡಾಯ ವರ್ಗಾವಣೆ ಮಾಡಬೇಕಾದರೂ ಒಂದೇ ಜಾಗದಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರಬೇಕು. ಆದ್ರೆ ಶಾಂತಲಕ್ಷ್ಮಿ 8 ವರ್ಷಗಳಿಂದ ಸೇವೆ ಮಾಡುತ್ತಿದ್ದು, ಎರಡು ವರ್ಷ ಬಾಕಿಯಿರುವಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿ ವರ್ಗಾವಣೆ ಮಾಡಿರುವುದು ಸರಿಯಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದರು.

ನಗರ ಪ್ರದೇಶದಿಂದ ನಿಯಮ ಉಲ್ಲಂಘಿಸಿ ಗ್ರಾಮೀಣ ಭಾಗಕ್ಕೆ ವರ್ಗಾವಣೆ ಮಾಡಿದ್ದರ ಕುರಿತು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಇದನ್ನ ಗಮನಿಸಿದ ಶಿಕ್ಷಣ ಸಚಿವ ಕೂಡಲೇ ಸ್ಪಂದಿಸಿ ವರ್ಗಾವಣೆ ರದ್ದುಗೊಳಿಸುವ ಭರವಸೆ ನೀಡಿದ್ದರು.

ಈಗ ತಾನೆ ಶಿಕ್ಷಕಿ ಶ್ರೀಮತಿ ಶಾಂತಲಕ್ಷ್ಮಿಯವರ ಜೊತೆ ಮಾತನಾಡಿದೆ.

ಅವರು ಎದುರಿಸುತ್ತಿರುವ ಕಷ್ಟಗಳ ಕುರಿತು ವಿಚಾರಿಸಿದೆ.

ದಯವಿಟ್ಟು ವಿವರಗಳನ್ನು ನನಗೆ ಕಳಿಸಿ ಎಂದು ತಿಳಿಸಿದ್ದೇನೆ,

ಅವರ ಕಷ್ಟವನ್ನು ದೂರ ಮಾಡಿ ಅವರು ಬಯಸಿರುವ ಸ್ಥಳಕ್ಕೇ ಅವರನ್ನು ಉಳಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದೇನೆ.https://t.co/6Fe3vOosKF

— S.Suresh Kumar (@nimmasuresh) December 7, 2019

TAGGED:Department of EducationPublic TVraichursuresh kumarteachertransferಇಂಪ್ಯಾಕ್ಟ್ಪಬ್ಲಿಕ್ ಟಿವಿಪ್ರಾಥಮಿಕ ಶಿಕ್ಷಣ ಸಚಿವರುರಾಯಚೂರುಶಿಕ್ಷಣ ಇಲಾಖೆಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
16 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
16 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
17 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
18 hours ago

You Might Also Like

2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
5 hours ago
1
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-2

Public TV
By Public TV
5 hours ago
3
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-3

Public TV
By Public TV
5 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
5 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
5 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?