ಯಾದಗಿರಿ: ಕೊರೊನಾ ಗ್ರೀನ್ ಝೋನ್ ಇರುವ ಕಾರಣ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಂಪೂರ್ಣವಾಗಿ ಮರೆತು ಜನರನ್ನು ರಸ್ತೆಗಿಳಿಸಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು.
ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಯಾದಗಿರಿ ಪೊಲೀಸ್ ಇಲಾಖೆ, ನಗರದ ಪ್ರಮುಖ ರಸ್ತೆಗಳನ್ನೆಲ್ಲ ಬಂಬು ಮತ್ತು ಬ್ಯಾರಿಕೇಡ್ ನಿಂದ ರಸ್ತೆ ಬ್ಲಾಕ್ ಮಾಡಿದೆ. ಇನ್ನೂ ಕೆಲವು ಕಡೆ ರಸ್ತೆಗಳಿಗೆ ಮುಳ್ಳು ಬೇಲಿ ಹಾಕಲಾಗಿದೆ.
ನಗರದಲ್ಲಿ ಎಲ್ಲಾ ರಸ್ತೆಗಳು ಒನ್ ವೇ ಮಾಡಿ, ಅನಾವಶ್ಯಕವಾಗಿ ರಸ್ತೆಗಿಳಿಯುವ ವಾಹನಗಳನ್ನು ತಪಾಸಣೆ ಮಾಡಿ ಅವುಗಳ ಮೇಲೆ ಪ್ರಕರಣ ದಾಖಲಿಸಿ, ಸೀಜ್ ಮಾಡಲಾಗುತ್ತಿದೆ. ರಸ್ತೆ ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.