ಬೆಂಗಳೂರು: ಕಾಸರಗೋಡು (Kasargod) ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ (Endowment) ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಕೇರಳದ (Kerala) ಕೊಚ್ಚಿಯಲ್ಲಿ ಭಾನುವಾರ ನಡೆಯಿತು.
ಈ ವೇಳೆ ಪಬ್ಲಿಕ್ ಟಿವಿಯ (Public TV) ಹಿರಿಯ ಪತ್ರಕರ್ತ ಬದ್ರುದ್ದೀನ್ ಮಾಣಿ (Badruddin Mani) ಅವರಿಗೆ ಕೆ.ವಿ.ಆರ್.ಠ್ಯಾಗೋರ್ ಸ್ಮರಣಾರ್ಥ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಹಾಗೂ ಡಾ.ವೆಂಕಟೇಶ್ ತುಪ್ಪಿಲ್ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಪ್ರಧಾನಿ ಮೋದಿ ನಾಲಾಯಕ್: ಪ್ರಿಯಾಂಕ್ ಖರ್ಗೆ ಮೂದಲಿಕೆ
ಬದ್ರುದ್ದೀನ್ ಮಾಣಿ ಅವರು 2014ರಿಂದ ಪಬ್ಲಿಕ್ ಟಿವಿಯಲ್ಲಿ ರಾಜಕೀಯ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಮಾಧ್ಯಮದಲ್ಲಿ (Media) ಸರಿ ಸುಮಾರು 3 ದಶಕಗಳ ಕಾಲ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ ನಟಿ ರಮ್ಯಾ
ಮಾರ್ಚ್ 21ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆಯವರು ಪ್ರಶಸ್ತಿಗಳನ್ನು ಘೋಷಿಸಿದ್ದರು. ದತ್ತಿನಿಧಿ ಪ್ರಶಸ್ತಿಗೆ 12 ಮಂದಿ ಪತ್ರಕರ್ತರು ಭಾಜನರಾಗಿದ್ದರು. ಈ ಕಾರ್ಯಕ್ರಮವು ಕೇರಳದ ಕೊಚ್ಚಿಯಲ್ಲಿ ನಡೆದಿದ್ದು, ತಲಾ 10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಭಾರೀ ಇಳಿಕೆ