ವಿದ್ಯಾಪೀಠಕ್ಕೆ ಬನ್ನಿ – ಕಾಲೇಜ್‌, ಕೋರ್ಸ್‌ಗಳ ಬಗ್ಗೆ ಉಚಿತವಾಗಿ ಮಾಹಿತಿ ಪಡೆದುಕೊಳ್ಳಿ

Public TV
5 Min Read
PUBLIC TV VIDHYAPEETA 2021 1 main

ಬೆಂಗಳೂರು: ಈಗಿನ ಶಿಕ್ಷಣದ ಹೊಸ ಟ್ರೆಂಡ್‌ ಏನು? ಎಸ್‌ಎಸ್‌ಎಲ್‌ಸಿ, ಪಿಯುಸಿಯ ನಂತರ ಯಾವ ಕಾಲೇಜಿನಲ್ಲಿ ಯಾವ ಕೋರ್ಸ್‌ ಇದೆ? ಈ ಕೋರ್ಸ್‌ಗಳಿಗೆ ಎಷ್ಟು ಶುಲ್ಕ ಇರುತ್ತದೆ? ಈ ಕಾಲೇಜುಗಳಲ್ಲಿ ಹಾಸ್ಟೆಲ್‌ ವ್ಯವಸ್ಥೆ ಇದ್ಯಾ?…ಈ ರೀತಿಯ ಪ್ರಶ್ನೆಗಳು ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬರುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ ʼವಿದ್ಯಾಪೀಠʼದಲ್ಲಿ ಸುಲಭವಾಗಿ ಉತ್ತರ ಸಿಗಲಿದೆ.

ಪಬ್ಲಿಕ್ ಟಿವಿ ಎರಡು ದಿನಗಳ ಕಾಲ `ವಿದ್ಯಾಪೀಠ’ದ ಹೆಸರಿನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮೆಗಾ ಶೈಕ್ಷಣಿಕ ಉತ್ಸವವನ್ನು ಆಯೋಜಿಸಿದೆ. ಈ ಹಿಂದೆ ಆಯೋಜಿಸಿದ ಮೂರು ಮೆಗಾ ಶೈಕ್ಷಣಿಕ ಉತ್ಸವಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್‌ 18 ಮತ್ತು 19ರಂದು ನಾಲ್ಕನೇ ಆವೃತ್ತಿಯ ವಿದ್ಯಾಪೀಠ ಕಾರ್ಯಕ್ರಮ ನಡೆಯುಲಿದೆ.

PUBLIC TV VIDHYAPEETA 2021 1

ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಪೋಷರು, ವಿದ್ಯಾರ್ಥಿಗಳು ಭಾಗವಹಿಸಿ ಪದವಿ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯಮಿಕ ಕೋರ್ಸ್‌ ಗಳ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ವೇಳೆ ಕೆಸಿಇಟಿ, ನೀಟ್‌ ಮತ್ತು ಕಾಮೆಡ್‌ ಕೆ ಪರೀಕ್ಷೆಗಳಿಗಾಗಿ ಕೆಇಎ ಅಧಿಕಾರಿಗಳಿಂದ ಆಪ್ತ ಸಮಾಲೋಚನೆ, ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ಅಷ್ಟೇ ಅಲ್ಲದೇ ಎರಡೂ ದಿನ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಅರ್ಧಗಂಟೆ ಉಪನ್ಯಾಸ ನಡೆದ ಬಳಿಕ 15 ನಿಮಿಷ ಪ್ರಶ್ನೋತ್ತರಕ್ಕೂ ಅವಕಾಶವಿದೆ. ಈ ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ. ಇದನ್ನೂ ಓದಿ: ಬೈಕ್‍ಗಳಲ್ಲಿ ಐಫೋನ್ ಬಳಸಬೇಡಿ – ಗ್ರಾಹಕರಿಗೆ ಆಪಲ್ ಎಚ್ಚರಿಕೆ

ಯಾರೆಲ್ಲ ಭಾಗವಹಿಸುತ್ತಾರೆ?
ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.

ಯಾರೆಲ್ಲ ಆಗಮಿಸಬಹುದು?
ಕೌನ್ಸೆಲರ್‌ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು

PUBLIC TV VIDHYAPEETA 2021 3

ದಿನಾಂಕ : ಸೆಪ್ಟೆಂಬರ್‌ 18, 19
ಸ್ಥಳ : ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
ಸಮಯ : ಬೆಳಗ್ಗೆ 9:30 ರಿಂದ ಸಂಜೆ 6.00 ಗಂಟೆಯವರೆಗೆ

ಶನಿವಾರ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ ಜೊತೆ ಮುಖ್ಯ ಅತಿಥಿಗಳಾಗಿ ರೇವಾ ವಿಶ್ವವಿದ್ಯಾಲಯದ ಕುಲಪತಿ ಶ್ಯಾಮರಾಜು, ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕುಲಪತಿ ಡಾ.ವಿ.ಜಿ.ಜೋಸೆಫ್, ಕೇಂಬ್ರಿಡ್ಜ್ ಸಮೂಹ ಸಂಸ್ಥೆಯ ಮುಖ್ಯಸ್ಥ ಡಿ.ಕೆ.ಮೋಹನ್, ಆಚಾರ್ಯ ಸಂಸ್ಥೆಗಳ ಕಾರ್ಪೊರೇಟ್ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶಕ ವಿಶೇಷ ಚಂದ್ರಶೇಖರ್ ಭಾಗವಹಿಸಲಿದ್ದಾರೆ. ಇದನ್ನೂ ಓದಿ: 1 ವರ್ಷದ ಬಳಿಕ ಕೇರಳ ವಿಮಾನ ದುರಂತಕ್ಕೆ ಕಾರಣ ಸಿಕ್ತು- ತನಿಖಾ ವರದಿಯಲ್ಲಿ ಏನಿದೆ?

PUBLIC TV VIDHYAPEETA 2021 222

ಶನಿವಾರದ ಕಾರ್ಯಕ್ರಮಗಳು ಏನು?
ಬೆಳಗ್ಗೆ 11:30 ರಿಂದ 12 ಗಂಟೆಯವರೆಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ್‌ ಅವರು “ರಾಷ್ಟ್ರೀಯ ಶಿಕ್ಷಣ ನೀತಿ – 2020: ಸಮಗ್ರ ವಿಧಾನ ಮತ್ತು ಅನುಷ್ಠಾನ”ದ ಬಗ್ಗೆ ಮಾತನಾಡಲಿದ್ದಾರೆ.

ಮಧ್ಯಾಹ್ನ12 ಗಂಟೆಯಿಂದ 1 ಗಂಟೆಯವರೆಗೆ ಸಿಇಟಿ ಮತ್ತು ಕಾಮೆಡ್‌ಕೆ ಬಗ್ಗೆ ವಿಚಾರಗೋಷ್ಠಿ ನಡೆಯಲಿದೆ. ಈ ಗೋಷ್ಠಿಯಲ್ಲಿ ಕಾಮೆಡ್‌ ಕೆ ಕಾರ್ಯದರ್ಶಿ ಕುಮಾರ್‌ ಮತ್ತು ಸಿಇಟಿ ವಿಭಾಗದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಮಧ್ಯಾಹ್ನ ಭೋಜನದ ಬಳಿಕ 2 ರಿಂದ 2:45ರವರೆಗೆ ನಟ, ಯೂಥ್ ಐಕಾನ್ ರಮೇಶ್‌ ಅರವಿಂದ್‌ “ಯಶಸ್ಸಿನ ರಹಸ್ಯ”ದ ಬಗ್ಗೆ ಮಾತನಾಡಲಿದ್ದಾರೆ.

ಮಧ್ಯಾಹ್ನ 3 ರಿಂದ 3:45ರವರೆಗೆ “ನ್ಯೂ ಏಜ್‌ ಪ್ರೋಗ್ರಾಮ್ಸ್‌” ಬಗ್ಗೆ ಸಂವಾದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಟಿಯು ಕಾರ್ಯಕಾರಿ ಸಮಿತಿ ಸದಸ್ಯ ಡಾ.ರವಿಶಂಕರ್‌, ಬೆಂಗಳೂರು ವಿಶ್ವವಿದ್ಯಾಲಯದ ವೇಣು ಗೋಪಾಲ್ ಕೆ.ಆರ್, ಕೇಂಬ್ರಿಡ್ಜ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಿ.ಕೆ. ಮೋಹನ್ ಭಾಗವಹಿಸಲಿದ್ದಾರೆ. ಡಾ.ಕಿರಣ್ ಮಾಗಾವಿ ಅವರು ಸಂವಾದವನ್ನು ನಡೆಸಿಕೊಡಲಿದ್ದಾರೆ.

vlcsnap 2018 12 22 07h55m56s47 e1545445592266

 

ಭಾನುವಾರದ ಕಾರ್ಯಕ್ರಮಗಳು ಏನು?
ಬೆಳಗ್ಗೆ 10:30 ರಿಂದ 11:30ರವರೆಗೆ ಪ್ರಯೋಗ ಶಿಕ್ಷಣ ಸಂಶೋಧನೆ ಸಂಸ್ಥೆಯ ನಿರ್ದೇಶಕ – ಸಂಶೋಧಕ ಡಾ..ಕೆ.ಎಸ್.ನಾಗಭೂಷಣ್ ಮತ್ತು ಶಿಕ್ಷಣ ತಜ್ಞ ಡಾ.ಎಚ್.ಎಸ್.ನಾಗರಾಜ ಅವರು “ಶುದ್ಧ ವಿಜ್ಞಾನ ಮತ್ತು ಸಂಶೋಧನಾ ಅವಕಾಶಗಳು” ವಿಚಾರದ ಬಗ್ಗೆ ಮಾತನಾಡಲಿದ್ದಾರೆ.

ಬೆಳಗ್ಗೆ 11:45ರಿಂದ 12:45 ರವರೆಗೆ ಈಸ್ಟ್ ಪಾಯಿಂಟ್ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ಆರ್.ಶಂಖಪಾಲ್ ಅವರು “ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಮತ್ತು ಮಷೀನ್ ಲರ್ನಿಂಗ್‌ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಕೈಬರಹ ಮತ್ತು ಜ್ಞಾಪಕ ತಜ್ಞ ಡಾ.ರಫಿ ಉಲ್ಲಾ ಬೇಗ್ ಅವರು “ಕೈಬರಹದ ಮೂಲಕ ನಿಮ್ಮ ವೃತ್ತಿಯನ್ನು ಅನ್ವೇಷಿಸಿ” ವಿಷಯದ ಬಗ್ಗೆ ಮಾತನಾಡಲಿದ್ದಾರೆ.

vidhyapeeta 2

ಪ್ಲಾಟಿನಂ ಪ್ರಾಯೋಜಕರು:
ರೇವಾ ವಿಶ್ವವಿದ್ಯಾಲಯ, ರಾಮಯ್ಯ ವಿಶ್ವವಿದ್ಯಾಲಯ, ಆಚಾರ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಗಾರ್ಡನ್‌ ಸಿಟಿ ವಿಶ್ವವಿದ್ಯಾಲಯ.

ಗೋಲ್ಡ್‌ ಪ್ರಾಯೋಜಕರು:
ಈಸ್ಟ್‌ ಪಾಯಿಂಟ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌, ಕೇಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಸಿಎಂಆರ್‌ ವಿಶ್ವವಿದ್ಯಾಲಯ, ರಾಮಯ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಶ್ರೀ ವೆಂಕಟೇಶ್ವರ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ಆಕ್ಸ್‌ಫರ್ಡ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ನ್ಯೂ ಬಾಲ್ಡ್‌ವಿನ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌, ಸಪ್ತಗಿರಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌.

PUBLIC TV VIDHYAPEETA 2021 english

ಸಿಲ್ವರ್‌ ಪ್ರಾಯೋಜಕರು:
ಕೃಪಾನಿಧಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌, ಎಬಿಬಿಎಸ್‌,ಪಿಇಎಸ್‌ ವಿಶ್ವವಿದ್ಯಾಲಯ, ದಯಾನಂದ ಸಾಗರ್‌, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ, ನಾಗಾರ್ಜುನ ಎಂಜಿನಿಯರಿಂಗ್‌, ಆದಿಚುಂಚನಗಿರಿ ವಿಶ್ವವಿದ್ಯಾಲಯ, ಎಕ್ಸೆಲ್‌ ಅಕಾಡೆಮಿಕ್ಸ್‌, ಏಮ್ಸ್‌ ಇನ್‌ಸ್ಟಿಟ್ಯೂಷನ್‌.

vidhyapeeta

ಯಾವೆಲ್ಲ ಸ್ಟಾಲ್‍ಗಳು ಇರಲಿವೆ?
ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌, ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಎಂಎಸ್‌ ಎಂಜಿನಿಯರಿಂಗ್‌ ಕಾಲೇಜ್‌, ಗೋಪಾಲನ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆಂಡ್‌ ಮ್ಯಾನೇಜ್‌ಮೆಂಟ್‌, ಅಂಬೇಡ್ಕರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಎಸಿಎಸ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ರಾಜರಾಜೇಶ್ವರಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ರಾಜರಾಜೇಶ್ವರಿ ಕಾಲೇಜ್‌ ಆಫ್‌ ನರ್ಸಿಂಗ್‌, ಗೌತಮ್‌ ಕಾಲೇಜ್‌, ಐಎಫ್‌ಐಎಂ -‌ ಜಗದೀಶ್ ಶೇಠ್‌ ಸ್ಕೂಲ್‌ ಆಫ್‌ ಮ್ಯಾನೇಜ್‌ಮೆಂಟ್‌, ಕೆಎಸ್‌ಐಟಿ, ಬಿಐಟಿ, ಕ್ರಿಸ್‌ ಕೆನಾಡಿಯನ್‌, ಜ್ಯೋತಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ನಾವಿಕ್ಸ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ಕರ್ನಾಟಕ ಕಾಲೇಜ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌, ಇಂಡಿಯನ್‌ ಅಕಾಡೆಮಿ, ಕಲ್ಪತರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಆದಿತ್ಯ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್‌, ಲರ್ನ್‌ ಟೆಕ್‌, ವಿಷನ್‌ ಪಿಯು ಕಾಲೇಜ್‌, ಡಾನ್‌ ಬಾಸ್ಕೋ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ವೇಮನ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಶೇಷಾದ್ರಿಪುರಂ ಕಾಲೇಜ್‌, ಬಿವಿವಿಎಸ್‌ ಕಾಲೇಜ್‌ ಬಾಗಲಕೋಟೆ, ಐಸಿಎಫ್‌ಐ(ICFAI), ಕೆನರಾ ಬ್ಯಾಂಕ್‌, ಸರ್‌ ಎಂವಿಐಟಿ, ಸಂಭ್ರಮ್‌ ಕಾಲೇಜ್‌, ಆಟ್ರಿಯಾ, ರಾಮಯ್ಯ, ಕೆಎಸ್‌ಒಯು(KSOU), ಸೈಂಟ್‌. ಕ್ಸೇವಿಯರ್ಸ್‌ ಕಾಲೇಜ್‌.

Share This Article
Leave a Comment

Leave a Reply

Your email address will not be published. Required fields are marked *