ಬೆಂಗಳೂರು: ಕನ್ನಡದ ಸುದ್ದಿವಾಹಿನಿ ನಿಮ್ಮ ʻಪಬ್ಲಿಕ್ ಟಿವಿʼ (Public TV) ಕಚೇರಿಯಲ್ಲಿ 13ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ತೆರೆ ಎಳೆಯಲಾಯಿತು. ಭಾನುವಾರ ನಗರದ ಜೆ.ಪಿ ಪಾರ್ಕ್ ಕೆರೆಯಲ್ಲಿ ಗಣೇಶ ಮೂರ್ತಿ (Ganesha Idol) ವಿಸರ್ಜನೆ ಮಾಡಲಾಯಿತು.
ʻಪಬ್ಲಿಕ್ ಟಿವಿʼಯಲ್ಲಿ ಸತತವಾಗಿ 13 ವರ್ಷಗಳಿಂದ ಅದ್ಧೂರಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಅದರಂತೆ ಈ ಬಾರಿಯೂ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಹೋದ್ಯೋಗಿಗಳು ಹಾಡು, ಕುಣಿತ ಪ್ರದರ್ಶಿಸುವ ಮೂಲಕ ಮೆರವಣಿಗೆಯೊಂದಿಗೆ ಕೊಂಡೊಯ್ದು ಗಣೇಶಮೂರ್ತಿಯನ್ನು ಜೆ.ಪಿ ಪಾರ್ಕ್ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು. ಇದನ್ನೂ ಓದಿ: ಮಸೀದಿಯಲ್ಲಿ ಗಣೇಶನ ಪ್ರತಿಷ್ಠಾಪನೆ; ಭಾವೈಕ್ಯತೆ ಮೆರೆದ ಗ್ರಾಮಸ್ಥರು
ಈ ಬಾರಿ 5 ದಿನಗಳ ಕಾಲ ಕಚೇರಿಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಸಹೋದ್ಯೋಗಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ಸಹೋದ್ಯೋಗಿಗಳಿಗೆ ವಿಶೇಷ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು. ಭಾನುವಾರ ಬೆಳಗ್ಗೆ ಪೂಜೆ ನೆರವೇರಿಸಿದ ಬಳಿಕ ಪ್ರಸಾದ ವಿತರಣೆ ಮಾಡಿ, ಬಳಿಕ ಗಣೇಶ ಮೂರ್ತಿಯನ್ನ ವಿಸರ್ಜನೆ ಮಾಡಲಾಯಿತು. ಬಳಿಕ ಸಾರ್ವಜನಿಕರಿಗೆ ಪ್ರಸಾದ ವಿತರಿಸಲಾಯಿತು.
ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್, ಸಿಇಒ ಅರುಣ್ಕುಮಾರ್, ಸಂಪಾದಕರಾದ ಸಿ.ದಿವಾಕರ್ ಸೇರಿದಂತೆ ಪಬ್ಲಿಕ್ ಟಿವಿಯ ಎಲ್ಲಾ ಸಿಬ್ಬಂದಿ ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ʻಬಿಗ್ ಬಾಸ್ ಸೀಸನ್-12ʼನ ಬಿಗ್ ನ್ಯೂಸ್ – ಲಾಂಚ್ ಡೇಟ್ ಅನೌನ್ಸ್ ಮಾಡಿದ ಕಿಚ್ಚ ಸುದೀಪ್