Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Ram Mandir

PublicTV Explainer: ‘ದಶಾವತಾರಿ ರಾಮ’ನೂರಿನ ಅಯೋಧ್ಯೆ ರಾಮಮಂದಿರದ 10 ವಿಶೇಷತೆಗಳು..

Public TV
Last updated: January 21, 2024 4:44 pm
Public TV
Share
5 Min Read
ayodhya ram mandir ram lalla
SHARE

-ಅಯೋಧ್ಯೆಗೆ ಹೋಗುವಾಗ ಈ 10 ಅಂಶಗಳು ನಿಮಗೆ ತಿಳಿದಿರಲಿ..

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ದೇಶದೆಲ್ಲೆಡೆ ರಾಮಭಕ್ತರಲ್ಲಿ ಸಂಭ್ರಮ-ಸಡಗರ ಮನೆ ಮಾಡಿದೆ. 500 ವರ್ಷಗಳ ನಂತರ ಶ್ರೀರಾಮ ಮತ್ತೆ ಪಟ್ಟಕ್ಕೇರಲು ಸಿದ್ಧನಾಗಿದ್ದಾನೆ. ಸೋಮವಾರ ಪ್ರಾಣ ಪ್ರತಿಷ್ಠೆಗಾಗಿ ಅಯೋಧ್ಯೆ ಕಂಗೊಳಿಸುತ್ತಿದೆ.

ವಾಲ್ಮೀಕಿ ರಾಮಾಯಣದ ಕೇಂದ್ರಬಿಂದು, ಪುಣ್ಯಪುರುಷ ಭಗವಾನ್‌ ರಾಮನ (Lord Rama) ಜೀವನ ಚರಿತ್ರೆಯೇ ರೋಚಕ. ಅಂತೆಯೇ ಅಯೋಧ್ಯೆ ನಗರ, ಸರಯೂ ನದಿ, ಭವ್ಯ ರಾಮಮಂದಿರ, ಅದರ ಶಿಲ್ಪಿ, ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲಿರುವ ಬಾಲರಾಮನ ವಿಗ್ರಹವೂ ತನ್ನದೇ ಆದ ವಿಶೇಷತೆ ಹೊಂದಿದೆ. ಅಯೋಧ್ಯೆಗೆ ಹೋಗುವಾಗ ಈ 10 ಅಂಶಗಳ ವಿಚಾರ ನಿಮಗೆ ತಿಳಿದಿರಲಿ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠಾಪನೆ; ವಿವಿಧ ರಾಜ್ಯಗಳ 50 ವಾದ್ಯಗಳಿಂದ ಹೊಮ್ಮಲಿದೆ ಮಂಗಳ ನಾದ

sarayu river

1. ಅಯೋಧ್ಯೆ ಯಾವ ನದಿಯ ದಡದ ಮೇಲಿದೆ?
ಹಿಂದೂಗಳ ಏಳು ಪವಿತ್ರ ಕ್ಷೇತ್ರಗಳಲ್ಲಿ ಅಯೋಧ್ಯೆಯೂ ಒಂದು. ಆದಿ ಮಹಾಕಾವ್ಯ ರಾಮಾಯಣದಲ್ಲಿ ಉಲ್ಲೇಖಿಸಿದಂತೆ ಅಯೋಧ್ಯೆಯು ಕೋಸಲ ದೇಶದ ರಾಜಧಾನಿ. ಈಗ ಉತ್ತರ ಪ್ರದೇಶ ರಾಜ್ಯದ ನಗರವಾಗಿದೆ. ಅಯೋಧ್ಯೆಯು ಸರಯೂ ನದಿಯ ದಡದ ಮೇಲಿರುವ ನಗರ. 234 ಕಿಮೀ ಸುತ್ತಳತೆ ಭೂಪ್ರದೇಶ ಹೊಂದಿದೆ. ಸರಯೂ ಭಾರತದ ಒಂದು ಪುರಾತನ ನದಿ. ರಾಮಾಯಣದ ಶ್ರೀರಾಮ ರಾಜ್ಯವಾಳಿದ್ದು, ಇದೇ ಸರಯೂ ತೀರದ ಅಯೋಧ್ಯೆಯಲ್ಲಿ. ಇದು ಹಿಮಾಲಯ ಪರ್ವತದ ಒಂದು ಸರೋವರದಲ್ಲಿ ಹುಟ್ಟಿ, ಪ್ರವಹಿಸುವುದರಿಂದ ಇದಕ್ಕೆ ಸರಯೂ ಎಂಬ ಹೆಸರು ಬಂದಿದೆ. ಶ್ರೀರಾಮ ತನ್ನ ಅವತಾರವನ್ನು ಸಮಾಪ್ತಿಗೊಳಿಸುವಾಗ, ತನ್ನ ಪರಿವಾರದೊಂದಿಗೆ ಸರಯೂ ನದಿಯಲ್ಲಿ ಮುಳುಗಿದನೆಂಬ ವಿವರಣೆ ಉತ್ತರ ರಾಮಾಯಣದಲ್ಲಿ ಬರುತ್ತದೆ.

ram mandir nagara

2. ಅಯೋಧ್ಯೆ ರಾಮಮಂದಿರ ಯಾವ ಶೈಲಿಯಲ್ಲಿದೆ?
ರಾಮಮಂದಿರ ಭಾರತೀಯ ನಾಗರ ಶೈಲಿಯಲ್ಲಿದೆ. ಸಾಮಾನ್ಯವಾಗಿ ಉತ್ತರ ಭಾರತದ ಪುರಾತನ ದೇವಾಲಯಗಳೆಲ್ಲವೂ ನಾಗರ ಶೈಲಿಯಲ್ಲಿವೆ. ಗುಪ್ತರ ಕಾಲದ ದೇವಾಲಯಗಳು ಈ ಶೈಲಿಯಲ್ಲಿದ್ದವು. ನಾಗರ ಶೈಲಿಯ ವಿಶೇಷವೆಂದರೆ, ಕಲ್ಲುಗಳಿಂದ ವಿಶಾಲವಾದ ಮತ್ತು ಎತ್ತರವಾದ ವೇದಿಕೆ ನಿರ್ಮಿಸಿ ಅದರ ಮೇಲೆ ಮಂದಿರ ಕಟ್ಟಲಾಗುತ್ತದೆ. ದೊಡ್ಡ ಗೋಪುರದ ಕೆಳಗೆ ಗರ್ಭ ಗೃಹ ಇರುತ್ತದೆ. ಇದರ ಸುತ್ತ ಕೆಲವು ಮಂಟಗಳಿರುತ್ತವೆ. ಉಳಿದಂತೆ ಗೋಪುರ, ಕಳಸ ಮತ್ತು ಅದರ ಮೇಲಿನ ಧ್ವಜ ದಕ್ಷಿಣ ಭಾರತದ ದೇವಾಲಯಗಳ ಶೈಲಿಯಲ್ಲೇ ಇರುತ್ತವೆ. ಕೋನಾರ್ಕದ ಸೂರ್ಯ ದೇವಾಲಯ, ಒಡಿಶಾದ ಜಗನ್ನಾಥ ಮಂದಿರ, ಖಜುರಾಹೋದ ಲಕ್ಷ್ಮಣ ದೇವಾಲಯಗಳು ನಾಗರ ಶೈಲಿಯಲ್ಲೇ ಇವೆ. ಇದನ್ನೂ ಓದಿ: ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೆ ಸಜ್ಜಾದ ರಾಮಮಂದಿರ- ಫೋಟೋಗಳಲ್ಲಿ ನೋಡಿ..

ram mandir modi bhoomi puja

3. ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದವರು ಯಾರು?
ಅಯೋಧ್ಯೆ ರಾಮಮಂದಿರಕ್ಕೆ 2020 ರ ಆಗಸ್ಟ್ 5 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಅಲ್ಲಿಂದ ರಾಮಮಂದಿರ ನಿರ್ಮಾಣ ಪ್ರಾರಂಭವಾಯಿತು. ಭೂಮಿಪೂಜೆ ಕಾರ್ಯಕ್ರಮಕ್ಕೂ ಮುನ್ನ ಮೂರು ದಿನಗಳ ಕಾಲ ವೈದಿಕ ವಿಧಿವಿಧಾನಗಳನ್ನು ನೆರವೇರಿಸಲಾಗಿತ್ತು. ಆಗಸ್ಟ್ 5 ರಂದು ಪ್ರಧಾನಿ ಮೋದಿ ಅವರು ರಾಮಮಂದಿರದ ಶಂಕುಸ್ಥಾಪನೆಯಾಗಿ 40 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯನ್ನು ಅಡಿಗಲ್ಲು ಹಾಕಿದರು. ಭೂಮಿಪೂಜೆಗೆ ಭಾರತದ ಹಲವಾರು ಪುಣ್ಯ ದೇವಾಲಯಗಳಿಂದ ಮಣ್ಣು ಮತ್ತು ಅನೇಕ ಪವಿತ್ರ ನದಿಗಳ ನೀರನ್ನು ಅಯೋಧ್ಯೆಗೆ ಕಳುಹಿಸಲಾಗಿತ್ತು. ಜೊತೆಗೆ ಬೇರೆ ಬೇರೆ ಧರ್ಮದ ಗುರುಗಳನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ram mandir doors pillars

4. ರಾಮಮಂದಿರದಲ್ಲಿರುವ ಕಂಬಗಳು ಮತ್ತು ಬಾಗಿಲುಗಳ ಸಂಖ್ಯೆ ಎಷ್ಟು?
ಅಯೋಧ್ಯೆ ರಾಮಮಂದಿರವು ನಾಗರ ವಾಸ್ತುಶಿಲ್ಪದ ಶೈಲಿಯಾಗಿದೆ. ಮಂದಿರವು ಮೂರು ಅಂತಸ್ತಿನದ್ದಾಗಿದ್ದು, ಪ್ರತಿ ಮಹಡಿಯು 20 ಅಡಿ ಎತ್ತರವಿದೆ. ಇದು ಒಟ್ಟು 392 ಕಂಬಗಳು ಮತ್ತು 44 ಬಾಗಿಲುಗಳನ್ನು ಹೊಂದಿದೆ. ಮಂದಿರದ ಪ್ರವೇಶವು ಪೂರ್ವದಿಂದ, ಸಿಂಗ್ ದ್ವಾರದ ಮೂಲಕ 32 ಮೆಟ್ಟಿಲುಗಳನ್ನು ಏರುತ್ತದೆ. ಮಂದಿರದ ಒಟ್ಟು ಬಾಗಿಲುಗಳ ಪೈಕಿ 42 ಚಿನ್ನ ಲೇಪಿತ ಬಾಗಿಲುಗಳನ್ನು ಅಳವಡಿಸಲಾಗುವುದು. ಈಗಾಗಲೇ 13 ಚಿನ್ನದ ಬಾಗಿಲುಗಳನ್ನು ಅಳವಡಿಸಲಾಗಿದೆ. ಇದನ್ನೂ ಓದಿ: ರಾಮಲಲ್ಲಾ ವಿಗ್ರಹದ ಫೋಟೋ ವೈರಲ್‌ ಮಾಡಿದವ್ರ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನ ಅರ್ಚಕ ಒತ್ತಾಯ

ram mandir L T

5. ರಾಮಮಂದಿರ ನಿರ್ಮಾಣ ಕಂಪನಿ ಯಾವುದು?
ರಾಮಮಂದಿರ ನಿರ್ಮಾಣ ಮತ್ತು ವಿನ್ಯಾಸವನ್ನು ಎಲ್ & ಟಿ (ಅಂದರೆ, ಲಾರ್ಸೆನ್ ಮತ್ತು ಟುಬ್ರೋ) ಕಂಪನಿಗಳು ಮಾಡಲಿವೆ. ಇದರ ಮೇಲ್ವಿಚಾರಣೆ ಜವಾಬ್ದಾರಿಯನ್ನು ಕನ್ಸಲ್ಟಿಂಗ್ ಎಂಜಿನಿಯರ್ಸ್ ವಹಿಸಿಕೊಂಡಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ ಐಐಟಿಯು ತಾಂತ್ರಿಕ ನೆರವು ಒದಗಿಸಲಿದೆ.

RAM MANDIR 4

6. ರಾಮಮಂದಿರ ಎತ್ತರ ಎಷ್ಟು?
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಮಂದಿರಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಮಮಂದಿರದ ಎತ್ತರ 161 ಅಡಿ. 380 ಅಡಿ ಈ ದೇವಾಲಯದ ಉದ್ದ. 250 ಅಡಿ ಅಗಲ. 84,000 ಚದರ ಅಡಿ ದೇವಾಲಯದ ವಿಸ್ತೀರ್ಣ. ದೇವಾಲಯ ಮೂರು ಅಂತಸ್ತಿನದ್ದಾಗಿದ್ದು, ಪ್ರತಿ ಮಹಡಿ 20 ಅಡಿ ಎತ್ತರವಿದೆ. ಇದನ್ನೂ ಓದಿ: ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ನಿಲುವಿನಿಂದ ಅಸಮಾಧಾನ; ಗುಜರಾತ್‌ನ ‘ಕೈ’ ಶಾಸಕ ರಾಜೀನಾಮೆ

ram mandir chandrakanth sompura

7. ರಾಮಮಂದಿರ ವಾಸ್ತುಶಿಲ್ಪಿ ಯಾರು?
ರಾಮಮಂದಿರದ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಂಪುರ. ಇವರು ಗುಜರಾತ್‌ನ ಅಹಮದಾಬಾದ್‌ನ ಕರ್ಣಾವತಿಯವರು. ಚಂದ್ರಕಾಂತ್ ಅವರ ಅಜ್ಜ ಪ್ರಭಾಕರ್ ಸೋಂಪುರ ಗುಜರಾತ್‌ನ ಸೋಮನಾಥ ಮಂದಿರವನ್ನು ಕಟ್ಟಿದವರು. ನಾಗರ ಶೈಲಿಯಲ್ಲಿ ಮಂದಿರ ನಿರ್ಮಿಸಿದ ಶಿಲ್ಪಿ. ಗುಜರಾತ್‌ನ ಪ್ರಸಿದ್ಧ ಅಕ್ಷರಧಾಮ ದೇವಾಲಯದ ವಿನ್ಯಾಸವೂ ಇವರದೇ. ಅಂತೆಯೇ ರಾಮಮಂದಿರ ದೇವಾಲಯವು ಅತ್ಯುತ್ತಮ ಎಂಜಿನಿಯರಿಂಗ್ ಮತ್ತು ವಾಸ್ತುಶಿಲ್ಪಕ್ಕೆ ವಿಶಿಷ್ಟ ಉದಾಹರಣೆಯಾಗಿದೆ.

ram mandir mantapa

8. ರಾಮಮಂದಿರದಲ್ಲಿರುವ ಮಂಟಪಗಳ ಸಂಖ್ಯೆ ಎಷ್ಟು?
ದೇವಾಲಯವು ಐದು ಮಂಟಪಗಳನ್ನು (ಸಭಾಂಗಣ) ಒಳಗೊಂಡಿದೆ. ಅವುಗಳೆಂದರೆ ನೃತ್ಯ ಮಂಟಪ, ರಂಗ ಮಂಟಪ, ಸಭಾ ಮಂಟಪ, ಪ್ರಾರ್ಥನೆ ಮತ್ತು ಕೀರ್ತನ ಮಂಟಪ. ದೇವಾನುದೇವತೆಗಳ ಮೂರ್ತಿ ಕೆತ್ತನೆಗಳು ಕಂಬಗಳು ಮತ್ತು ಗೋಡೆಗಳನ್ನು ಅಲಂಕರಿಸಿವೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ

ram mandir 1 2

9. ದೇವಾಲಯದ ಪ್ರದೇಶದ ಬಗ್ಗೆ ನಿಮಗೆಷ್ಟು ಗೊತ್ತು?
ಭಾರತೀಯ ಸಂಪ್ರದಾಯವನ್ನು ಅನುಸರಿಸಿ ಮತ್ತು ಸ್ಥಳೀಯ ತಂತ್ರಜ್ಞಾನವನ್ನು ಬಳಸಿಕೊಂಡು ಪರಿಸರ ಸಂರಕ್ಷಣೆಯ ಮೇಲೆ ಕೇಂದ್ರೀಕರಿಸಿ ಒಟ್ಟು 70 ಎಕರೆ ಪ್ರದೇಶದಲ್ಲಿ ಈ ದೇವಾಲಯ ನಿರ್ಮಿಸಲಾಗಿದೆ. 70% ಹಸಿರು ಪ್ರದೇಶ ಇದೆ. ದೇವಾಲಯದಲ್ಲಿ ಮಣ್ಣಿನ ತೇವಾಂಶ ತಪ್ಪಿಸಲು ೨೧ ಅಡಿ ಗ್ರಾನೈಟ್ ಅಡಿಪಾಯ ನಿರ್ಮಿಸಲಾಗಿದೆ.

ram lalla arun yogiraj

10. ಅಯೋಧ್ಯೆಯ ರಾಮಲಲ್ಲಾ ವಿಗ್ರಹ ನಿರ್ಮಿಸಿದವರು ಯಾರು?
ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾನ ವಿಗ್ರಹವನ್ನು ಕೆತ್ತಿದವರು ಶಿಲ್ಪಿ ಅರುಣ್ ಯೋಗಿರಾಜ್. ಇವರು ಕರ್ನಾಟಕದ ಮೈಸೂರು ಮೂಲದ ಶಿಲ್ಪಿ. ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಮೂರ್ತಿ ಕೆತ್ತನೆ ವೇಳೆ ಕಟ್ಟುನಿಟ್ಟಿನ ಸಾತ್ವಿಕ ಆಹಾರ ಸೇವನೆ ಮಾಡುತ್ತಿದ್ದರು. ಮೂರ್ತಿ ಕೆತ್ತನೆ ವೇಳೆ ಅವರ ಕಣ್ಣಿಗೆ ತೊಂದರೆಯಾಗಿತ್ತು. ವಿಗ್ರಹ ಕೆತ್ತನೆ ಕೆಲಸ ಪೂರ್ಣಗೊಳಿಸುವವರೆಗೆ (ಸುಮಾರು 6 ತಿಂಗಳು) ತಮ್ಮ ಕುಟುಂಬದ ಸದಸ್ಯರನ್ನು ಭೇಟಿ ಮಾಡಿರಲಿಲ್ಲ. ಎಲ್ಲಾ ಅಡೆತಡೆ, ಸವಾಲುಗಳನ್ನು ಎದುರಿಸಿ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದಾರೆ. ಇದನ್ನೂ ಓದಿ: ತಲೆಗೂದಲಿಗೆ ಹಗ್ಗ ಕಟ್ಟಿಕೊಂಡೇ ರಾಮರಥ ಎಳೆದ ಸ್ವಾಮೀಜಿ; ಅಯೋಧ್ಯೆ ಕಡೆಗೆ 566 ಕಿಮೀ ಯಾತ್ರೆ

TAGGED:Ayodhya Ram MandirRam LallaRam templeಅಯೋಧ್ಯೆ ರಾಮಮಂದಿರರಾಮಮಂದಿರರಾಮಲಲ್ಲಾ ಮೂರ್ತಿ
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
1 hour ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
2 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
2 hours ago
Mallikarjun Kharge 2
Latest

ಆರ್‌ಎಸ್‌ಎಸ್‌ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ

Public TV
By Public TV
2 hours ago
Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
2 hours ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?