Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PublicTV Explainer: ಗೃಹಜ್ಯೋತಿ ಗ್ಯಾರಂಟಿ- ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

PublicTV Explainer: ಗೃಹಜ್ಯೋತಿ ಗ್ಯಾರಂಟಿ- ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

Public TV
Last updated: June 17, 2023 8:50 pm
Public TV
Share
4 Min Read
Congress Guarantee Electricity
SHARE

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿಗಳ ಪೈಕಿ ಈಗಾಗಲೇ ಒಂದನ್ನು ಬಸ್ ಫ್ರೀ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದೆ. ಸದ್ಯ ಗೃಹ ಜ್ಯೋತಿ ಯೋಜನೆಯ ಗ್ಯಾರಂಟಿ ಜಾರಿಗೆ ಮುಂದಾಗಿದೆ.

ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಫ್ರೀ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ಈ ಯೋಜನೆ ಜಾರಿ, ಅರ್ಜಿ ಸಲ್ಲಿಕೆ ಹೇಗೆ, ಯಾರ್ಯಾರು ಸಲ್ಲಿಸಬೇಕು, ಅರ್ಜಿ ಸಲ್ಲಿಕೆಗೆ ಇರುವ ನಿಯಮಗಳೇನು ಎಂಬ ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

* ಏನಿದು ಗೃಹಜ್ಯೋತಿ ಯೋಜನೆ?: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆಯೂ ಒಂದಾಗಿದೆ. ಪ್ರತಿ ಮನೆಗೆ 200 ಯೂನಿಟ್ (200 Unit Electricity) ವರೆಗೆ ವಿದ್ಯುತ್ ಉಚಿತವಾಗಿ ನೀಡುವುದು ಯೋಜನೆ ಉದ್ದೇಶ. ಆಗಸ್ಟ್ 1 ರಿಂದ ಯೋಜನೆ ಜಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: PublicTV Explainer: ರಕ್ಷಾ ‘ಕವಚ’ ಇದ್ದಿದ್ರೆ ಒಡಿಶಾ ರೈಲು ದುರಂತ ತಪ್ಪಿಸಬಹುದಿತ್ತೆ?

* ಅರ್ಜಿ ಸಲ್ಲಿಕೆ ಮಾಡೋದು ಹೇಗೆ?: ಉಚಿತ್ ವಿದ್ಯುತ್‍ಗಾಗಿ ನಾಳೆಯಿಂದಲೇ ಜನರು ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಾಯಿಸಲು ಅವಕಾಶವಿದೆ. ಅದಕ್ಕಾಗಿ ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಲಾಗಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್ ಅಥವಾ ಮೊಬೈಲ್ ಂಠಿಠಿ ಮೂಲಕ ಸರ್ಜಿ ಸಲ್ಲಿಸಲು ಅವಕಾಶ ಇದೆ. ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸುವವರು ಆಧಾರ್ ಸಂಖ್ಯೆ, ಕರೆಂಟ್ ಬಿಲ್‍ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ ಖಾತೆ ಸಂಖ್ಯೆ ಬಾಡಿಗೆ/ ಭೋಗ್ಯದ ಕರಾರು ಪತ್ರ (ಬಾಡಿಗೆ/ಭೋಗ್ಯದಾರರಾಗಿದ್ದಲ್ಲಿ) ಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಆಗಸ್ಟ್ 1, 2023 ರಿಂದ (ಜುಲೈ 2023 ರ ಬಳಕೆಯ ಪ್ರಮಾಣ) ಜಾರಿಗೆ ಬರಲಿದೆ.

* ಷರತ್ತುಗಳೇನು?: ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ಕೊಡಲಾಗುವುದು. ಉದಾಹರಣೆಗೆ, 70 ಯೂನಿಟ್ ಬಳಸುವವರು ಅದಕ್ಕೆ 10% (ಅಂದರೆ ಒಟ್ಟು 80%) ಬಳಕೆ ಮಾಡಬಹುದು. ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸಿದ್ದವರು ಈಗ 110 ಯೂನಿಟ್ ಬಳಸಿದ್ರೆ ವಿದ್ಯುತ್ ಉಚಿತವಾಗಿ ಸಿಗುತ್ತದೆ. ಒಂದು ವೇಳೆ 110ಕ್ಕಿಂತ ಹೆಚ್ಚು ಯೂನಿಟ್ ಬಳಸಿದ್ರೆ ಹೆಚ್ಚುವರಿ ಯೂನಿಟ್‍ಗೆ ಬಿಲ್ ಕಟ್ಟಬೇಕು. ಹೀಗೆ 200 ಯೂನಿಟ್ ವರೆಗೆ ವಿದ್ಯುತ್ ಬಳಸುವವರು ಬಿಲ್ ಕಟ್ಟುವಂತಿಲ್ಲ. 200 ಯೂನಿಟ್ ಉಚಿತ ಅಂತ ಎಲ್ಲರೂ ಬೇಕಾಬಿಟ್ಟಿ ವಿದ್ಯುತ್ ಬಳಸುವಂತಿಲ್ಲ.

* ವಿದ್ಯುತ್ ಬಿಲ್ ಬಾಕಿ ಇರೋರು ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾ?: ವಿದ್ಯುತ್ ಬಿಲ್ ಬಾಕಿ ಇಟ್ಟುಕೊಂಡವರು ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು. ಆದರೆ ಬಾಕಿ ಬಿಲ್ ಪಾವತಿಗೆ ಮೂರು ತಿಂಗಳ ಗಡುವು ಇದೆ. ಸೆಪ್ಟೆಂಬರ್ ವರಗೆ ಹಿಂಬಾಕಿ ಕಟ್ಟಲು ಇಂಧನ ಇಲಾಖೆ ಅವಕಾಶ ಕೊಟ್ಟಿದೆ. ಈ ಬಾರಿ ದುಪ್ಪಟ್ಟು ಬಿಲ್ ಬಂದಿದೆ. ಹೀಗಾಗಿ ಮೂರು ತಿಂಗಳ ಗಡುವು ನೀಡಲಾಗಿದೆ.

* ವಿದ್ಯುತ್ ಬಿಲ್ ನಿಧನರಾದವರ ಹೆಸರಿನಲ್ಲಿ ಇದ್ರೆ ನೋಂದಣಿ ಹೇಗೆ?: ವಿದ್ಯುತ್ ಬಿಲ್ ನಿಧನರಾದವರ ಹೆಸರಿನಲ್ಲಿ ಬಂದಿದ್ರೇ ಗೃಹಜ್ಯೋತಿಗೆ ಬೇರೆಯವರು ನೋಂದಣಿ ಮಾಡಿಕೊಳ್ಳಬಹುದು. ವಿದ್ಯುತ್ ಸಂಪರ್ಕವನ್ನು ಅರ್ಜಿ ಸಲ್ಲಿಕೆ ಮಾಡುವ ಹೆಸರಿಗೆ ವರ್ಗಾವಣೆ ಮಾಡಲೇಬೇಕು. ಅದಾದ ಬಳಿಕ ಅರ್ಜಿ ಸಲ್ಲಿಕೆ ಮಾಡಬಹುದು. ಎಲ್ಲಾ ಎಸ್ಕಾಂ ಉಪವಿಭಾಗಗಳಲ್ಲಿ ಹೆಸರಿನ ಬದಲಾವಣೆಯನ್ನು ಮಾಡಿಕೊಡ್ತಾರೆ.

* ಬಾಡಿಗೆದಾರ ಫಲಾನುಭವಿ ಆಗಬಹುದಾ?: ಹೌದು, ಯೋಜನೆಗೆ ಫಲಾನುಭವಿ ಆಗಲು ಬಾಡಿಗೆ ಮನೆಯಲ್ಲಿ ವಾಸ ಇರುವ ಪೂರಕ ದಾಖಲಾತಿ ಅಂದ್ರೆ ಅದೇ ವಿಳಾಸದ ವೋಟರ್ ಐಡಿ, ಆಧಾರ್, ಅಥವಾ ಬಾಡಿಗೆ ಕರಾರು ಪತ್ರ ಇದ್ದರೆ ಫಲಾನುಭವಿ ಆಗಬಹುದು. ಆಧಾರ್ ಸಂಖ್ಯೆ, ಬಿಲ್ಲಿನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ/ಭೋಗ್ಯದ ಕರಾರು ಪತ್ರ (ಬಾಡಿಗೆ/ಭೋಗ್ಯದಾರರಾಗಿದ್ದಲ್ಲಿ) ಸಲ್ಲಿಸಬೇಕು. ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು.

* ಹೊಸ ಮನೆ ಮಾಡಿರುವವರಿಗೆ ಯೋಜನೆ ಲಾಭ ಸಿಗುತ್ತಾ?: ಎರಡು ತಿಂಗಳ ಹಿಂದೆ ಅಥವಾ ಹೊಸ ಮನೆ ಬದಲಾವಣೆ ಮಾಡಿರುವವರಿಗೂ ಯೋಜನೆ ಲಾಭ ಸಿಗುತ್ತೆ. ಹೊಸ ನಿವಾಸ ಹಾಗೂ 12 ತಿಂಗಳಿಗಿಂತ ಕಡಿಮೆ ವಾಸವಿರುವವರಿಗೆ ಉಚಿತ ಸೇವೆ ಸಿಗಲಿದೆ. ಸರಾಸರಿ 53 ಯೂನಿಟ್ ಜೊತೆಗೆ 10% ಅಂದ್ರೆ 58 ರಿಂದ 59 ಯೂನಿಟ್ ಮಾತ್ರ ಇವರಿಗೆ ಉಚಿತವಾಗಿ ಸಿಗಲಿದೆ. ಹೆಚ್ಚುವರಿಗೆ ಬಿಲ್ ಕಟ್ಟಬೇಕು.

* ಹೊರ ರಾಜ್ಯದ ಆಧಾರ್ ಇದ್ದು, ಕರ್ನಾಟಕದಲ್ಲಿ ವಾಸ ಆಗಿದ್ರೆ?: ಇವರಿಗೂ ಯೋಜನೆ ಅನ್ವಯ ಆಗುತ್ತೆ. ಆದರೆ ಬಾಡಿಗೆ ಮನೆಯಲ್ಲಿ ವಾಸವಾಗಿರುವ ದಾಖಲಾತಿ ಸಲ್ಲಿಸಬೇಕು.

Share This Article
Facebook Whatsapp Whatsapp Telegram
Previous Article Dinesh Gundu Rao 3 ಮೂರು ತಿಂಗಳೊಳಗೆ 108 ಆರೋಗ್ಯ ಸೇವೆಗೆ ಹೊಸ ರೂಪ – ದಿನೇಶ್ ಗುಂಡೂರಾವ್
Next Article TUMKUR MURDER ಪಾತ್ರೆ ತೊಳೆದ ನೀರು ಪಕ್ಕದ ಮನೆಯತ್ತ ಹರಿದಿದ್ದಕ್ಕೆ ಜಗಳ- ಯುವಕನ ಕೊಲೆ

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

11 minutes ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

42 minutes ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

56 minutes ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2 hours ago
Kemmanugundi Teacher Death
Chikkamagaluru

ಕೆಮ್ಮಣ್ಣುಗುಂಡಿ | ಪತ್ನಿ ಜೊತೆ ಸೆಲ್ಫಿ ತೆಗೆಯಲು ಹೋಗಿ 60 ಅಡಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?