Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Explainer

PublicTV Explainer: ತೃತೀಯಲಿಂಗಿಗಳು, ಸಲಿಂಗಕಾಮಿಗಳು ರಕ್ತದಾನ ಮಾಡುವಂತಿಲ್ಲ – ಯಾಕೆ ಗೊತ್ತಾ?

Public TV
Last updated: March 15, 2023 11:43 pm
Public TV
Share
5 Min Read
FotoJet 58
SHARE

ಈ ಸಮಾಜದಲ್ಲಿ ರಕ್ತದಾನಕ್ಕೆ (Blood Donation) ಅದರದ್ದೇ ಆದ ಮಹತ್ವವಿದೆ. ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾದದ್ದು. ಜೀವಕ್ಕೆ ಸಂಜೀವಿನಿಯಿದ್ದಂತೆ. ಮಾನವ ದೇಹದ ಜೀವಸೆಲೆಯಾಗಿರುವ ರಕ್ತವನ್ನು ದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಬಹುದು. ಕೇವಲ ರಕ್ತ ಪಡೆಯುವವರಿಗಷ್ಟೇ ಅಲ್ಲ, ರಕ್ತದಾನ ಮಾಡುವವರಿಗೂ ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ರಕ್ತದಾನ ಮಾಡಿದರೆ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳನ್ನೂ ನಿಯಂತ್ರಿಸಬಹುದು ಎಂಬುದು ನಿಮ್ಮ ಗಮನಕ್ಕಿರಲಿ.

ರಕ್ತದಾನ ಮಾಡುವುದಕ್ಕೂ ವೈದ್ಯಕೀಯ ಮಾರ್ಗಸೂಚಿಯಿರುತ್ತೆ. ಇಂತಹವರು ರಕ್ತದಾನ ಮಾಡಬೇಕು, ಮಾಡಬಾರದು ಎಂಬ ನಿಯಮವಿದೆ. ಯಾವುದೇ ದಾನ ಇನ್ನೊಬ್ಬರ ಜೀವಕ್ಕೆ ಆಸರೆಯಾಗಬೇಕೇ ಹೊರತು ಕೆಡುಕುಂಟು ಮಾಡಬಾರದು. ಹೀಗಾಗಿ ರಕ್ತದಾನ ಮಾಡುವಾಗ ವೈದ್ಯಕೀಯ ನಿಯಮ ಪಾಲಿಸುವುದು ತುಂಬಾ ಮುಖ್ಯ. ಆ ಮಾರ್ಗಸೂಚಿಯೇನು? ಅದನ್ನು ಯಾಕೆ ಪಾಲಿಸಬೇಕು? ಯಾರ‍್ಯಾರು ರಕ್ತದಾನ ಮಾಡಬಾರದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದನ್ನೂ ಓದಿ: PublicTV Explainer: ಆಧುನಿಕ ಭಾರತದ ಮೊದಲ ಸಾಂಕ್ರಾಮಿಕ ರೋಗ ಯಾವುದು ಗೊತ್ತಾ?

Supreme Court 1

ಮಾರಕ ಕಾಯಿಲೆಗಳ ವಿಚಾರವಾಗಿ ವೈದ್ಯಕೀಯ ಕ್ಷೇತ್ರ ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದೆ. ರಕ್ತದಾನದ ವಿಚಾರದಲ್ಲೂ ಇಂತಹ ಕ್ರಮಕೈಗೊಂಡಿರುವ ವಿಚಾರವನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ (Supreme Court) ಮುಂದಿಟ್ಟಿದೆ. ಸೋಂಕು ಹರಡುವಿಕೆ ನಿಯಂತ್ರಣ, ಇತರರ ಆರೋಗ್ಯದ ದೃಷ್ಟಿಯಿಂದ ಮಹಿಳಾ ಲೈಂಗಿಕ ಕಾರ್ಯಕರ್ತೆಯರು (Women Sex Workers) ರಕ್ತದಾನ ಮಾಡಬಾರದು ಎಂಬ ಮಾರ್ಗಸೂಚಿಯಿದೆ. ಈ ಸಾಲಿಗೆ ತೃತೀಯಲಿಂಗಿಗಳು (Transgenders) ಹಾಗೂ ಸಲಿಂಗಕಾಮಿಗಳನ್ನೂ (Gay) ಸೇರಿಸಲಾಗಿದೆ. ಯಾಕೆ ಇವರು ರಕ್ತದಾನ ಮಾಡುವಂತಿಲ್ಲ ಎಂಬುದಕ್ಕೆ ವೈದ್ಯಕೀಯ ಪುರಾವೆಗಳನ್ನೂ ಕೇಂದ್ರ, ಸುಪ್ರೀಂ ಮುಂದಿಟ್ಟಿದೆ. ಇದೇನು ಹೊಸ ಮಾರ್ಗಸೂಚಿಯಲ್ಲ. 2017ರಲ್ಲೇ ಈ ಮಾರ್ಗಸೂಚಿ ಹೊರಡಿಸಲಾಗಿತ್ತು. ಹಾಗಾದರೆ, ಈಗ ಏಕೆ ಈ ಬಗ್ಗೆ ಚರ್ಚೆಯಾಗುತ್ತಿದೆ ಎಂಬುದನ್ನು ತಿಳಿಯೋಣ.

ತೃತೀಯಲಿಂಗಿಗಳು, ಸಲಿಂಗಕಾಮಿಗಳು ರಕ್ತದಾನ ಮಾಡುವಂತಿಲ್ಲ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಅದರಲ್ಲಿ “ಲಿಂಗಪರಿವರ್ತಕರು, ಸಲಿಂಗಕಾಮಿಗಳು ಮತ್ತು ಮಹಿಳಾ ಲೈಂಗಿಕ ಕಾರ್ಯಕರ್ತರನ್ನು ಎಚ್‌ಐವಿ ʼಅಪಾಯಕಾರಿʼ ವರ್ಗಕ್ಕೆ ಸೇರಿಸಲಾಗಿದೆ. ಹೀಗಾಗಿ ಅವರನ್ನು ರಕ್ತದಾನಿಗಳ ವರ್ಗದಿಂದ ದೂರ ಇಡಲಾಗಿದೆ” ಎಂದು ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: PublicTV Explainer: ಕೋವಿಡ್ ಬೆನ್ನಲ್ಲೇ ಭೀತಿ ಹುಟ್ಟಿಸಿದ ಮೆದುಳು ತಿನ್ನುವ ಅಮೀಬಾ – ಏನು ಈ ರೋಗ?

transgender

ರಾಷ್ಟ್ರೀಯ ರಕ್ತ ವರ್ಗಾವಣೆ ಕೌನ್ಸಿಲ್ (NBTC) ಮತ್ತು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯು 2017ರ ಅಕ್ಟೋಬರ್‌ 11 ರಂದು “ರಕ್ತದಾನಿ ಆಯ್ಕೆ ಮತ್ತು ರಕ್ತದಾನಿಗಳ ಮಾರ್ಗಸೂಚಿ” 12 ಮತ್ತು 51ನೇ ವಿಧಿ ಅಡಿಯಲ್ಲಿ ಸಲಿಂಗಕಾಮಿ ಮತ್ತು ತೃತೀಯಲಿಂಗಿಗಳು ರಕ್ತದಾನ ಮಾಡುವಂತಿಲ್ಲ ಎಂದಿದೆ. ಇದನ್ನು ವಿರೋಧಿಸಿ ತೃತೀಯಲಿಂಗಿ ಸಮುದಾಯದ ಥಂಗ್‌ಜಮ್ ಸಂತಾ ಸಿಂಗ್ ಎಂಬವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಮಾರ್ಗಸೂಚಿಗೆ ತಡೆ ನೀಡಬೇಕು ಎಂದು ಕೋರಿದ್ದರು. ಅದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

2017ರ ಮಾರ್ಗಸೂಚಿಗಳು ಏನು ಹೇಳುತ್ತವೆ?
ರಕ್ತ ವರ್ಗಾವಣೆ ವ್ಯವಸ್ಥೆಯು (ಬಿಟಿಎಸ್) ದೇಶದ ರಕ್ತದಾನ ವಿಧಾನವನ್ನು ಅವಲಂಬಿಸಿದೆ. ದೇಶದಾದ್ಯಂತ ಗುಣಮಟ್ಟದ ಆರೋಗ್ಯ ವ್ಯವಸ್ಥೆಯನ್ನು ಗಮನದಲ್ಲಿ ಇರಿಸಿಕೊಂಡು ನಿಯಮಾವಳಿಗಳನ್ನು ರೂಪಿಸಲಾಗಿದೆ. ಸುರಕ್ಷಿತ ರಕ್ತ ಹಾಗೂ ಅದನ್ನು ಸಕಾಲದಲ್ಲಿ ದೊರೆಯುವಂತೆ ಮಾಡುವುದು ಸಾರ್ವಜನಿಕ ಆರೋಗ್ಯ ಕ್ಷೇತ್ರದ ಅತಿದೊಡ್ಡ ಜವಾಬ್ದಾರಿಯಾಗಿದೆ ಎಂದು ಹೇಳಿದೆ. ಇದನ್ನೂ ಓದಿ: PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

ಯಾಕೆ ರಕ್ತದಾನ ಮಾಡುವಂತಿಲ್ಲ?
ಮಾರ್ಗಸೂಚಿಗಳ 12 ನೇ ವಿಧಿಯು “ರಕ್ತ ದಾನಿಗಳ ಆಯ್ಕೆ ಮಾನದಂಡ”ದ ಅಡಿಯಲ್ಲಿ ಬರುತ್ತದೆ. ರಕ್ತ ಕೊಡುವ ದಾನಿ ಕಾಯಿಲೆಗಳಿಂದ ಮುಕ್ತವಾಗಿರಬೇಕು. ಮುಖ್ಯವಾಗಿ HIV, ಹೆಪಟೈಟಿಸ್ ಬಿ ಸೋಂಕಿತರು ರಕ್ತದಾನ ಮಾಡುವಂತಿಲ್ಲ ಎಂದಿದೆ. ಇದರಿಂದ ರಕ್ತ ಪಡೆಯುವವರೂ ಸೋಂಕಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲದೇ 15 ನೇ ವಿಧಿಯು ಸಲಿಂಗಕಾಮಿ ಮತ್ತು ತೃತೀಯಲಿಂಗಿಗಳು ಹಾಗೂ HIV ಸೋಂಕಿನ ಅಪಾಯದಲ್ಲಿರುವವರನ್ನು ರಕ್ತದಾನದಿಂದ ಶಾಶ್ವತವಾಗಿ ದೂರವಿಟ್ಟಿದೆ. ಪರ್ಮನೆಂಟ್ ಡೆಫರಲ್ ಎಂದರೆ ರಕ್ತದಾನ ಮಾಡಲು ಎಂದಿಗೂ ಅವರನ್ನು ಅನುಮತಿಸುವುದಿಲ್ಲ.

doctor

ಸುಪ್ರೀಂನಲ್ಲಿರುವ ಮನವಿ ಏನು?
ರಕ್ತದಾನ ವಿಚಾರ ಕುರಿತಂತೆ, ಮಣಿಪುರದ ಥಂಗ್‌ಜಮ್ ಸಂತಾ ಸಿಂಗ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, 2021ರ ಮಾ.5ರಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು. 2017ರ ಮಾರ್ಗಸೂಚಿಯ ಸಿಂಧುತ್ವವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಗಸೂಚಿಯಲ್ಲಿ ಗುರುತಿಸಲಾಗಿರುವ ಈ ವರ್ಗದ ಜನರನ್ನು ಎಚ್‌ಐವಿ ಮತ್ತು ಏಡ್ಸ್‌ನ ಸೋಂಕಿಗೆ ಒಳಗಾಗುವ ಅಪಾಯ ಹೆಚ್ಚಿರುವ ವರ್ಗಕ್ಕೆ ಸೇರಿಸಿರುವುದು ಸಂವಿಧಾನದ 14, 15 ಹಾಗೂ 21ನೇ ವಿಧಿಯ ಪ್ರಕಾರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. ಲಿಂಗ ಹಾಗೂ ಲೈಂಗಿಕತೆ ಆಧಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ‘ನವತೇಜ್ ಜೋಹರ್’ ಮತ್ತು ‘ನಲ್ಸಾ’ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ ತೀರ್ಪುಗಳನ್ನು ಈ ಮಾರ್ಗಸೂಚಿಗಳು ಉಲ್ಲಂಘಿಸುತ್ತವೆ ಎಂದು ಹೇಳಲಾಗಿತ್ತು.

ಏನಿದು ನವತೇಜ್‌ ಜೋಹರ್‌, ನಲ್ಸಾ ಪ್ರಕರಣ?
ಲಿಂಗ ತಾರತಮ್ಯ ಮಾಡುವುದು ಸರಿಯಲ್ಲ ಎಂದು ನಲ್ಸಾ (2014) ಹಾಗೂ ನವತೇಜ್‌ ಸಿಂಗ್‌ ಜೋಹರ್‌ (2018) ಪ್ರಕರಣಗಳಲ್ಲಿ ತೀರ್ಪು ನೀಡಿತ್ತು. ಇದನ್ನೂ ಓದಿ: PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

ನಮ್ಮ ದೃಷ್ಟಿಯಲ್ಲಿ ಲಿಂಗ ಗುರುತಿಸುವಿಕೆ ಲೈಂಗಿಕತೆಯ ಅವಿಭಾಜ್ಯ ಅಂಗವಾಗಿದೆ. ತೃತೀಯಲಿಂಗಿಗಳನ್ನೂ ಒಳಗೊಂಡಂತೆ ಲಿಂಗ ಗುರುತಿನ ಆಧಾರದ ಮೇಲೆ ಯಾವುದೇ ನಾಗರಿಕರನ್ನು ತಾರತಮ್ಯ ಮಾಡುವುದು ಸರಿಯಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

blood donation

ರಕ್ತದಾನದಿಂದ ಇವರನ್ನು ಹೊರಗಿಡುವುದಕ್ಕೆ ಸರ್ಕಾರದ ವಾದವೇನು?
ತೃತೀಯಲಿಂಗಿಗಳು, ಪುರುಷರ ಜತೆ ಲೈಂಗಿಕ ಕ್ರಿಯೆ ನಡೆಸುವ ಪುರುಷರು (ಎಂಎಸ್ಎಂ) ಮತ್ತು ಲೈಂಗಿಕ ಕಾರ್ಯಕರ್ತೆಯರು ರಕ್ತದಾನ ಮಾಡುವುದನ್ನು ನಿರ್ಬಂಧಿಸಿರುವ 2017ರ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದೆ. ಈ ಮಾರ್ಗಸೂಚಿಗಳು ವೈಜ್ಞಾನಿಕ ಪುರಾವೆಗಳನ್ನು ಆಧರಿಸಿದ್ದು, ತಜ್ಞರಿಂದ ಜಾಗತಿಕವಾಗಿ ಮಾನ್ಯತೆ ಪಡೆದಿವೆ ಎಂದು ತಿಳಿಸಿದೆ.

ಯುರೋಪಿಯನ್ ರಾಷ್ಟ್ರಗಳು ಲೈಂಗಿಕವಾಗಿ ಸಕ್ರಿಯವಾಗಿರುವ ಸಲಿಂಗಕಾಮಿಗಳು ರಕ್ತದಾನ ಮಾಡುವುದನ್ನು ನಿಷೇಧಿಸಿವೆ. ಯುರೋಪಿಯನ್ ಪುರುಷರು-ಪುರುಷರೊಂದಿಗೆ ಲೈಂಗಿಕತೆ ಹೊಂದಿರುವ ಬಗ್ಗೆ ಇಂಟರ್ನೆಟ್‌ ಸಮೀಕ್ಷೆ ಆಧರಿಸಿ ಈ ಕ್ರಮಕೈಗೊಂಡಿವೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್‌ನಲ್ಲಿ ತಿಳಿಸಿದೆ. ಭಾರತದ ರಕ್ತ ವರ್ಗಾವಣೆ ವ್ಯವಸ್ಥೆಯನ್ನು ಬಲಪಡಿಸಲು ಪೂರಕವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಕ್ತದಾನ ವ್ಯವಸ್ಥೆಯ ಮೇಲೆ ನಂಬಿಕೆ ಇರಿಸಿ, ಅದನ್ನು ಬಳಕೆ ಮಾಡುವ ಜನರಲ್ಲಿ ವಿಶ್ವಾಸ ಮೂಡಿಸುವುದು ಬಹಳ ಮುಖ್ಯ. ಜೀವವೊಂದು ಸಂಕಷ್ಟದಲ್ಲಿರುವ ಸಮಯದಲ್ಲಿ ರಕ್ತದಾನ ವ್ಯವಸ್ಥೆಯ ಹೊರತು ಜನರಿಗೆ ಬೇರೆ ಆಯ್ಕೆಗಳಿರುವುದು ಕಡಿಮೆ. ಸಂಗ್ರಹಿಸಲಾದ ರಕ್ತದ ಮಾದರಿಯು ಸುರಕ್ಷಿತ ಹಾಗೂ ಪರಿಣಾಮಕಾರಿ ಎಂಬ ಬಗ್ಗೆ ರಕ್ತದಾನ ಮಾಡುವವರು ಹಾಗೂ ರಕ್ತವನ್ನು ಪಡೆಯುವವರು ಸಂಪೂರ್ಣ ವಿಶ್ವಾಸ ಇರಿಸುವುದು ಅಗತ್ಯ ಎಂದು ಸರ್ಕಾರ ಹೇಳಿದೆ. ಇದನ್ನೂ ಓದಿ: Public TV Explainer: ಭಾರತದಲ್ಲಿ ಲ್ಯಾಬ್‌ನಲ್ಲೇ ತಯಾರಾಗುತ್ತಾ ವಜ್ರ? – ಕೃತಕ ವಜ್ರ ಹೇಗೆ ತಯಾರಿಸ್ತಾರೆ ಗೊತ್ತಾ?

ರಕ್ತ ವರ್ಗಾವಣೆ ವಿಚಾರದಲ್ಲಿ ಪಾಶ್ಚಾತ್ಯ ದೇಶಗಳು ನ್ಯೂಕ್ಲಿಯಿಕ್ ಆ್ಯಸಿಡ್ ಟೆಸ್ಟಿಂಗ್ (ಎನ್‌ಎಟಿ) ವಿಧಾನವನ್ನು ಅನುಸರಿಸುತ್ತವೆ. ಈ ವಿಧಾನದಿಂದ, ವರ್ಗಾವಣೆಯಿಂದ ಹರಡುವ ಸೋಂಕುಗಳನ್ನು (ಟಿಟಿಐ) ಗಣನೀಯವಾಗಿ ಕಡಿಮೆ ಮಾಡಬಹುದು. ಭಾರತದಲ್ಲಿ 3,866 ರಕ್ತನಿಧಿ ಕೇಂದ್ರಗಳಲ್ಲಿ ಮಾತ್ರ ಎನ್‌ಎಟಿ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಈ ತಂತ್ರಜ್ಞಾನವೂ ದುಬಾರಿ. ಇದನ್ನು ನಿರ್ವಹಿಸಲು ತರಬೇತಿ ಪಡೆದ ಸಿಬ್ಬಂದಿ ಹಾಗೂ ವಿಶೇಷ ಉಪಕರಣಗಳು, ಸರಿಯಾದ ನಿರ್ವಹಣೆ ಅತ್ಯಗತ್ಯ ಎಂದು ಕೇಂದ್ರ ತಿಳಿಸಿದೆ.

TAGGED:Blood DonateCentral GovernmentGaysSupreme CourtTransgendersಕೇಂದ್ರ ಸರ್ಕಾರತೃತೀಯಲಿಂಗಿಗಳುರಕ್ತದಾನಸಲಿಂಗಕಾಮಿಗಳುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

vivek oberoi
ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?
14 hours ago
prabhas tripti dimri
‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ
15 hours ago
karunya ram
ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ
16 hours ago
RAGINI 4
‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
18 hours ago

You Might Also Like

Mysuru Suicide
Crime

ಮಗಳಿಗೆ ಆಸ್ತಿ ಕೊಡಲೇಬೇಡಿ, ಸಾಯುವ ಹಿಂದಿನ ದಿನ ಸ್ನೇಹಿತರಿಗೆ GPay- ಕಿರಿಮಗಳ ಕೈಯಲ್ಲಿ ಡೆತ್‍ನೋಟ್ ಬರೆಸಿದ್ದ ತಂದೆ

Public TV
By Public TV
17 minutes ago
Covid Test
Bengaluru City

ಮತ್ತೆ ಬೆಂಗಳೂರಿನ ಮೂವರಲ್ಲಿ ಕಾಣಿಸಿಕೊಂಡ ಕೊರೊನಾ

Public TV
By Public TV
17 minutes ago
KRS Dam
Karnataka

ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

Public TV
By Public TV
34 minutes ago
Pakistans PM Shehbaz Sharif gifts Asim Munir a 2017 Chinese drill photo calling it Operation Bunyan Al Marsus
Latest

ಮುನೀರ್‌ಗೆ ಬೆಂಕಿ ಫೋಟೋ ಗಿಫ್ಟ್‌ ನೀಡಿ ಜಗತ್ತಿನ ಮುಂದೆ ಮತ್ತೆ ಬೆತ್ತಲಾದ ಪಾಕ್‌!

Public TV
By Public TV
1 hour ago
Delivery Boy Attack on customer in berngaluru
Bengaluru City

ಅಡ್ರೆಸ್ ತಪ್ಪಾಗಿದ್ದಕ್ಕೆ ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿತ ಕೇಸ್ – ಡೆಲಿವರಿ ಬಾಯ್ ಅರೆಸ್ಟ್

Public TV
By Public TV
1 hour ago
Koramangala Drink and Drive
Bengaluru City

ಕುಡಿದ ಮತ್ತಲ್ಲಿ ಒನ್‌ವೇಗೆ ನುಗ್ಗಿದ ಕಾರಿನ ಚಾಲಕ – ಬ್ಯಾರಿಕೇಡ್‌ಗೆ ಗುದ್ದಿ ಪೊಲೀಸರಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?