ನವದೆಹಲಿ: ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ನಟಿಯರಾದ ತಮನ್ನಾ ಭಾಟಿಯಾ (Tamannaah Bhatia) ಹಾಗೂ ಕಾಜಲ್ ಅಗರ್ವಾಲ್ (Kajal Aggarwal) ಅವರನ್ನು ವಿಚಾರಣೆ ನಡೆಸಲು ಪುದುಚೇರಿ ಪೊಲೀಸರು ನಿರ್ಧರಿಸಿರುವುದಾಗಿ ವರದಿಯಾಗಿದೆ.
Advertisement
ಬಹುಭಾಷೆಗಳಲ್ಲಿ ಸ್ಟಾರ್ ತಾರೆಯರಾಗಿರುವ ತಮನ್ನಾ ಭಾಟಿಯಾ ಹಾಗೂ ಕಾಜಲ್ ಅಗರ್ವಾಲ್ ಇಬ್ಬರನ್ನು ವಿಚಾರಣೆ ನಡೆಸಲು ಪೊಲೀಸರು(Puducherry police) ನಿರ್ಧರಿಸಿದ್ದಾರೆ. ಕೊಯಮತ್ತೂರು ಮೂಲದ ಕ್ರಿಪ್ಟೋಕರೆನ್ಸಿ ಕಂಪನಿ ಹೆಚ್ಚಿನ ಲಾಭದ ಭರವಸೆ ನೀಡಿ ಜನರನ್ನು ವಂಚಿಸಲಾಗುತ್ತಿದೆ ಎಂದು ಪೊಲೀಸರಿಗೆ ದೂರು ಬಂದಿತ್ತು. ನಿವೃತ್ತ ಸರ್ಕಾರಿ ಉದ್ಯೋಗಿ ಅಶೋಕ್ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಲಾಭ ಗಳಿಸುವ ಭರವಸೆ ನೀಡಿದ 10 ಜನರಿಂದ 2.40 ಕೋಟಿ ರೂ.ಗಳನ್ನು ಕಂಪನಿ ಸಂಗ್ರಹಿಸಿದೆ ಎಂದು ಆರೋಪಿಸಿದ್ದರು. ಈ ಕಂಪನಿಯ ಕಾರ್ಯಕ್ರಮಗಳಲ್ಲಿ ತಮನ್ನಾ, ಕಾಜಲ್ ಅಗರ್ವಾಲ್ ಭಾಗವಹಿಸಿದ್ದ ಕಾರಣಕ್ಕೆ ಅವರ ವಿರುದ್ಧವೂ ದೂರು ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ದೈಹಿಕ ಹಲ್ಲೆ ನಡೆಸಿ ವಿಕೃತಿ – ಅಪ್ರಾಪ್ತೆ ಜನನಾಂಗಕ್ಕೆ 28 ಹೊಲಿಗೆ
Advertisement
Advertisement
ಕ್ರಿಪ್ಟೋಕರೆನ್ಸಿ (Cyptocurrency) ಕಂಪನಿಯು 2020-22ರ ಅವಧಿಯಲ್ಲಿ ಕೊಯಮತ್ತೂರಿನಲ್ಲಿ ತನ್ನ ಮುಖ್ಯ ಶಾಖೆ ತೆರೆಯಿತು. ಉದ್ಘಾಟನಾ ಸಮಾರಂಭದಲ್ಲಿ ಸ್ಟಾರ್ ನಾಯಕಿ ತಮನ್ನಾ ಭಾಗವಹಿಸಿದ್ದರು. ಮಹಾಬಲಿಪುರಂನ ಸ್ಟಾರ್ ಹೋಟೆಲ್ನಲ್ಲಿ ನಡೆದ ಕಂಪನಿಯ ಕಾರ್ಯಕ್ರಮದಲ್ಲಿ ಮತ್ತೊಬ್ಬ ಸ್ಟಾರ್ ನಾಯಕಿ ಕಾಜಲ್ ಅಗರ್ವಾಲ್ ಪಾಲ್ಗೊಂಡಿದ್ದರು. ಅದಾದ ನಂತರ ಮುಂಬೈನಲ್ಲಿ ಒಂದು ದೊಡ್ಡ ಪಾರ್ಟಿಯನ್ನು ಆಯೋಜಿಸಿ ಸಾವಿರಾರು ಜನರಿಂದ ಹಣವನ್ನು ಸಂಗ್ರಹಿಸಿದರು. ಇದನ್ನೂ ಓದಿ: ಸಿನಿಮಾ ಶೂಟಿಂಗ್ಗೆ ಸಜ್ಜಾದ ನಟ ದರ್ಶನ್ – ಅವಕಾಶ ಕೋರಿ ಮುಂದಿನ ವಾರ ಕೋರ್ಟ್ ಮೊರೆ
Advertisement
ಜನರನ್ನು ಲಾಭದ ಹೆಸರಿನಲ್ಲಿ ವಂಚಿಸಿದ ಆರೋಪದ ಮೇಲೆ ಪೊಲೀಸರು ಈಗಾಗಲೇ ನಿತೀಶ್ ಜೈನ್ (36) ಮತ್ತು ಅರವಿಂದ್ ಕುಮಾರ್ (40) ಅವರನ್ನು ಬಂಧಿಸಿದ್ದಾರೆ. ಈಗ, ಪ್ರಕರಣದ ತನಿಖೆಯ ಭಾಗವಾಗಿ ಪುದುಚೇರಿ ಪೊಲೀಸರು ತಮನ್ನಾ ಮತ್ತು ಕಾಜಲ್ ಅಗರ್ವಾಲ್ ಅವರನ್ನು ವಿಚಾರಣೆ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಮತ್ತೆರಡು ವಿಧೇಯಕ ವಾಪಸ್ – ರಾಜ್ಯಪಾಲರು vs ರಾಜ್ಯ ಸರ್ಕಾರದ ನಡುವೆ ಮುಂದುವರಿದ ಜಟಾಪಟಿ