Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ

Districts

ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ

Public TV
Last updated: March 26, 2022 2:01 pm
Public TV
Share
2 Min Read
kollur mookambika temple
SHARE

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಮನವಿ ಸಲ್ಲಿಸಿದೆ.

ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಸದಸ್ಯರು ಹೆಸರು ಬದಲಾಯಿಸುವಂತೆ ದೇವಾಲಯದ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು: ಅಭಿನವ ಮಂಜುನಾಥ ಶ್ರೀ

ಮನವಿಯಲ್ಲಿ ಏನಿದೆ?
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ ಭಾರತದ 108 ಶಕ್ತಿ ಪೀಠಗಳಲ್ಲಿ ಒಂದು. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ ಆದಿ ಶಂಕರಾಚಾರ್ಯರು ಮೂಕಾಂಬಿಕಾ ತಾಯಿಯನ್ನು ಇಲ್ಲಿ ನೆಲೆಗೊಳಿಸಿದ್ದಾರೆ. ಮೂಕಾಂಬಿಕಾ ತಾಯಿಯು ದುರ್ಗ, ಸರಸ್ವತಿ ಮತ್ತು ಮಹಾಲಕ್ಷ್ಮಿಯ ಒಂದು ಅವತಾರ, ಮೂಕಾಂಬಿಕಾ ದೇವಿಯ ದೇವಸ್ಥಾನದಲ್ಲಿ ಕೋಟ್ಯಂತರ ಭಕ್ತರು ಅತೀವ ನಂಬಿಕೆಯನ್ನು ಇರಿಸಿಕೊಂಡಿದ್ದಾರೆ.

kolluru mookambika temple 2

ಇಂತಹ ಪುಣ್ಯ ಕ್ಷೇತ್ರದಲ್ಲಿ ಒಬ್ಬ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ಕನ್ನಡ ವಿರೋಧಿ ಸಾವಿರಾರು ಹಿಂದುಗಳನ್ನು ನರಮೇಧ ಮಾಡಿ, ನೂರಾರು ದೇವಸ್ಥಾನಗಳನ್ನು ದ್ವಂಸಗೊಳಿಸಿದಂತಹ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ರಾತ್ರಿ 8 ಗಂಟೆಗೆ ದೇವಿ ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತಿದೆ. ಇದರಿಂದ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿಯುಂಟುಮಾಡಿದೆ. ಸಲಾಂ ಎಂಬ ಹೆಸರಿನಲ್ಲಿ ಪ್ರತಿ ನಿತ್ಯ ದೇವಿಗೆ ಮಹಾಮಂಗಳಾರತಿಯಾಗುವುದು ಗುಲಾಮಗಿರಿಯ ಸಂಕೇತವಾಗಿದೆ ಆದರಿಂದ ತಕ್ಷಣ ಕ್ಷೇತ್ರದ ವ್ಯವಸ್ಥಾಪನಾ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸಲಾಂ ಹಸರನ್ನು ತೆಗೆದು ಕೇವಲ ದೇವರ ಹೆಸರಲ್ಲಿ ಮಹಾಮಂಗಳಾರತಿ ಮಾಡಲು ಕ್ರಮತೆಗೆದುಕೊಳ್ಳಬೇಕೆಂದು ಶ್ರೀಕ್ಷೇತ್ರದ ಕೋಟ್ಯಂತರ ಭಕ್ತರ ಪರವಾಗಿ ವಿಶ್ವ ಹಿಂದೂ ಪರಿಷತ್ ಆಗ್ರಹಿಸುತ್ತದೆ.

TIPPU D 1

ಈ ಹಿನ್ನಲೆಯಲ್ಲಿ ನಾವು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಕಾರ್ಯ ನಿರ್ವಹಣಾಧಿಕಾರಿಗಳಿಗೆ, ದತ್ತಿ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆಯವರಿಗೆ, ಮಾನ್ಯ ಜಿಲ್ಲಾಧಿಕಾರಿಗಳಿಗೆ, ದತ್ತಿ ಇಲಾಖೆ ಆಯುಕ್ತರಾದ ಮಾನ್ಯ ಶ್ರೀಮತಿ ರೋಹಿಣಿ ಸಿಂಧೂರಿಯವರಿಗೆ ಮನವಿಯನ್ನು ಸಲ್ಲಿಸಿದ್ದು ಕರ್ನಾಟಕ ಸರಕಾರ ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಲು ಬಲವಾಗಿ ಆಗ್ರಹಿಸುತ್ತವೆ. ಇದನ್ನೂ ಓದಿ: ಸ್ವಾಮೀಜಿಯವರೂ ತಲೆಯ ಮೇಲೆ ಬಟ್ಟೆ ಹಾಕ್ತಾರೆ ಅದನ್ನೇಕೆ ಪ್ರಶ್ನಿಸುತ್ತೀರಾ?: ಹಿಜಬ್ ಬೆಂಬಲಿಸಿದ ಸಿದ್ದು

ಏನಿದು ಸಲಾಂ ಮಂಗಳಾರತಿ?
ಟಿಪ್ಪು ಸುಲ್ತಾನ್ ಆಗಮಿಸಿದ ನೆನಪಿನಲ್ಲಿ ಇಂದಿಗೂ ನಿತ್ಯ ಕೊಲ್ಲೂರು ದೇವಾಲಯದಲ್ಲಿ ಸಲಾಂ ಮಂಗಳಾರತಿ ನಡೆಯುತ್ತಿದೆ. ಶ್ರೀ ಕ್ಷೇತ್ರಕ್ಕೆ 1765ರಿಂದ 1795ರ ನಡುವೆ ಟಿಪ್ಪು ಸುಲ್ತಾನ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದ. ದೇವಿ ದರ್ಶನ ಮಾಡುವಾಗ ಮೂಲ ವಿಗ್ರಹಗಳು ಟಿಪ್ಪು ಸುಲ್ತಾನನಿಗೆ ಸ್ಪಷ್ಟವಾಗಿ ಕಾಣಿಸಿರಲಿಲ್ಲವಂತೆ.

Kollur mookambika

ಟಿಪ್ಪು ಸುಲ್ತಾನ್ ಭೇಟಿ ಬಳಿಕ ಇಂದಿನವರೆಗೂ ಪ್ರತಿ ದಿನ ರಾತ್ರಿ 8 ರಿಂದ 8:15ರ ನಡುವೆ ಪರಿವಾರ ದೇವತೆಗಳ ಪೂಜೆ ಬಳಿಕ ನಡೆಯುವ ಮಂಗಳಾರತಿ (ಸುತ್ತು ಸಲಾಂ) ಪೂಜೆಗೆ ಸಲಾಂ ಮಂಗಳಾರತಿ ಎನ್ನುವ ಹೆಸರು ಉಳಿದಿದೆ. ಇದನ್ನೂ ಓದಿ: ಹಿಜಬ್, ದುಪ್ಪಟ್ಟ, ಪೇಟ ನಡುವಿನ ವ್ಯತ್ಯಾಸ ಅರಿತುಕೊಳ್ಳಿ: ಸಿದ್ದರಾಮಯ್ಯ ವಿರುದ್ಧ BJP ಕಿಡಿ

ಕಟ್ಟಿಗೆ ಪಾಠಕರು ಧ್ವಜಸ್ತಂಭದ ಬಳಿ ಬಂದು ಸ್ತುತಿ ಮಾಡಿದ ಬಳಿಕ ದೇವರಿಗೆ ಒಂದು ಮಂಗಳಾರತಿ (ಸಲಾಂ ಪೂಜೆ) ಮಾಡುವವರನ್ನು ಸಲಾಂ ಅಡಿಗಳು ಎಂದೇ ಕರೆಯಲಾಗುತ್ತಿದೆ. ಅರ್ಚಕರ ಮೂಲಕ ಬಂದ ಪರಂಪರೆ ಈಗಲೂ ಮುಂದುವರಿಯುತ್ತಿದೆ.

TAGGED:Kollur Mookambika TempleSalam mangalarathiTipu Sultanvhpಕೊಲ್ಲೂರು ಮುಕಾಂಬಿಕಾ ದೇವಾಲಯಟಿಪ್ಪು ಸುಲ್ತಾನ್ವಿಎಚ್‍ಪಿಸಲಾಂ ಮಂಗಳಾರತಿ
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

RCB vs CSK
Cricket

ಪಂದ್ಯದ ವೇಳೆ `ದೋಸೆ, ಇಡ್ಲಿ’ ಹಾಡು ಪ್ರಸಾರ – ಬಿಸಿಸಿಐಗೆ RCB ವಿರುದ್ಧ CSK ದೂರು

Public TV
By Public TV
1 minute ago
Akhilesh Yadav Amit Shah 1
Latest

ಮಹಿಳಾ ಮೀಸಲಾತಿಯಲ್ಲಿ ಮುಸ್ಲಿಮ್‌ ಮಹಿಳೆಯರಿಗೆ ಮೀಸಲಾತಿ ನೀಡಿ: ಎಸ್‌ಪಿ ಆಗ್ರಹ

Public TV
By Public TV
8 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಅಪರಾಧಿಗಳಿಗೆ ಶಿಕ್ಷೆ ನಾಳೆ ಪ್ರಕಟ

Public TV
By Public TV
9 minutes ago
Dinesh Gundu Rao 4
Bengaluru City

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ದಿನೇಶ್ ಗುಂಡೂರಾವ್

Public TV
By Public TV
17 minutes ago
HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
1 hour ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?