Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಗಿಸುತ್ತಲೇ ನೈಜತೆಯನ್ನು ಹೇಳಿ ಕಣ್ಣಂಚಲಿ ನೀರು ತರಿಸುವ ‘ಪುಕ್ಸಟ್ಟೆ ಲೈಫು’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಗಿಸುತ್ತಲೇ ನೈಜತೆಯನ್ನು ಹೇಳಿ ಕಣ್ಣಂಚಲಿ ನೀರು ತರಿಸುವ ‘ಪುಕ್ಸಟ್ಟೆ ಲೈಫು’

Cinema

ನಗಿಸುತ್ತಲೇ ನೈಜತೆಯನ್ನು ಹೇಳಿ ಕಣ್ಣಂಚಲಿ ನೀರು ತರಿಸುವ ‘ಪುಕ್ಸಟ್ಟೆ ಲೈಫು’

Public TV
Last updated: September 24, 2021 4:30 pm
Public TV
Share
3 Min Read
PuksatteLifu 3
SHARE

ಚಿತ್ರ: ಪುಕ್ಸಟ್ಟೆ ಲೈಫು
ನಿರ್ದೇಶನ : ಅರವಿಂದ್ ಕುಪ್ಳೀಕರ್
ನಿರ್ಮಾಣ : ಸರ್ವಸ್ವ ಪ್ರೊಡಕ್ಷನ್ಸ್
ಸಂಗೀತ : ವಾಸು ದೀಕ್ಷಿತ್
ಹಿನ್ನೆಲೆ ಸಂಗೀತ : ಪೂರ್ಣಚಂದ್ರ ತೇಜಸ್ವಿ
ಛಾಯಾಗ್ರಹಣ : ಅಧ್ವೈತ್ ಗುರುಮೂರ್ತಿ
ತಾರಾಗಣ: ಸಂಚಾರಿ ವಿಜಯ್, ಅಚ್ಯುತ್ ಕುಮಾರ್, ರಂಗಾಯಣ ರಘು, ಮಾತಂಗಿ ಪ್ರಸನಾ, ಇತರರು.

ಪ್ರೇಕ್ಷಕ ವಲಯದಲ್ಲಿ ಹಾಗೂ ಚಿತ್ರರಂಗದಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿದ್ದ ‘ಪುಕ್ಸಟ್ಟೆ ಲೈಫು’ ಇಂದು ಚಿತ್ರಮಂದಿರಕ್ಕೆ ಕಾಲಿಟ್ಟಿದೆ. ನಿರೀಕ್ಷೆಯಂತೆ‌ ಚಿತ್ರ ಮೊದಲ ದಿನ ಎಲ್ಲಾ ಕಡೆಗಳಲ್ಲೂ ಉತ್ತಮ ಓಪನಿಂಗ್ ಪಡೆದುಕೊಂಡಿದೆ.

ನಾಯಕ ಶಹಜಾನ್ ಬೀಗ ರಿಪೇರಿ‌ ಮಾಡುವ ಪ್ರಾಮಾಣಿಕ ಮುಸ್ಲಿಂ ಯುವಕ. ಅಪ್ಪನಿಲ್ಲದ‌ ಮನೆಗೆ ತಾನೇ ಆಧಾರ ಸ್ತಂಭ. ಎಲ್ಲರನ್ನೂ ಪ್ರೀತಿಯಿಂದ ಆದರಿಸುವ ವ್ಯಕ್ತಿತ್ವ ಆತನದು. ಇರೋದ್ರಲ್ಲಿ ಸುಖ ಕಾಣುತ್ತಿದ್ದ ಆತನಿಗೆ ಪಕ್ಕದ‌ ಮನೆಯ ಹುಡುಗಿ ಶಾರದಾಳ ಮೇಲೆ ಒಲವು. ಮನೆಯ ಜವಾಬ್ದಾರಿ, ಶಾರದಾಳ ಜೊತೆಗಿನ ಪ್ರೀತಿಯ ಸುತ್ತಾಟ.. ಹೀಗೆ ಆತನ ದಿನಗಳು ಖುಷಿಯಿಂದ ಕೂಡಿತ್ತು. ಹೀಗಿರುವಾಗ ಅಚಾನಕ್ ಆಗಿ ಶಹಜಾನ್ ಸ್ವತಃ ತಾವೇ ನುಂಗುಬಾಕರಾಗಿದ್ದ ಪೊಲೀಸರ ಕೈಗೆ‌ ಸಿಕ್ಕಿಹಾಕಿಕೊಳ್ಳುತ್ತಾನೆ. ಮುಂದೆ ಅವರು ಮಾಡುವ ಎಲ್ಲಾ ಅಪರಾಧ, ದೋಚುವ ಕೆಲಸಕ್ಕೆ ಶಹಜಾನ್ ಅಮಾಯಕ ದಾಳವಾಗಿ ಬಳಕೆಯಾಗುತ್ತಾನೆ. ಇದೇನಾಯ್ತು ಎನ್ನುವಾಗಲೇ ಶಹಜಾನ್ ಇದಕ್ಕಿದ್ದಂತೆ ಕಣ್ಮರೆಯಾಗುತ್ತಾನೆ. ಇದರ‌ ಜೊತೆಗೆ ಸೀಟಿನ ಅಂಚಿಗೆ ಕೂರಿಸೋ ಟ್ವಿಸ್ಟ್‌ಗಳು, ಒಂದಿಷ್ಟು ನಗು ತರಿಸೋ ಕಾಮಿಡಿ, ಗಂಭೀರಗೊಳಿಸುವ ಕೆಲ ವಿಚಾರಗಳ ಜೊತೆ‌ ಕಥೆ ಸಾಗುತ್ತೆ.

Puksatte life 1

ಪ್ರಾಮಾಣಿಕ ಹುಡುಗ ಶಹಜಾನ್ ಪೊಲೀಸರ ಕೈಗೆ ಸಿಕ್ಕಿದ್ದು ಹೇಗೆ, ಇಷ್ಟೆಲ್ಲ ಘಟನೆ ನಂತರ ಆತ ಹೇಗೆ ಪಾರಾಗುತ್ತಾನೆ, ಇದಕ್ಕಿದ್ದಂತೆ ಯಾಕೆ ಕಣ್ಮರೆಯಾಗುತ್ತಾನೆ, ಮುಂದೇನಾಗುತ್ತೆ ಎನ್ನುವುದೇ ಸಸ್ಪೆನ್ಸ್.

ಹೊಸ ಅಲೆಯ ಸಿನಿಮಾಗಳು ಬರುತ್ತಿವೆ ಎಂದು ಮಾತನಾಡುತ್ತಿರುತ್ತೇವೆ. ಆದ್ರೆ ಇಲ್ಲಿ ‘ಪುಕ್ಸಟ್ಟೆ ಲೈಫು’ ಹೊಸ ಅಲೆಯನ್ನು ಸೃಷ್ಟಿಸಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಅಂತಹ ಅದ್ಭುತ ಕಥಾ ಹೂರಣವನ್ನು ಸಿನಿಮಾ ಹೊಂದಿದೆ. ಬಹುಶಃ ಪ್ರೇಕ್ಷಕರಿಗೂ ಈ ಸಿನಿಮಾ ಬೇರೆಯದ್ದೇ ರೀತಿಯ ಫೀಲ್ ನೀಡಿರೋದ್ರಲ್ಲಿ ಡೌಟೇ ಇಲ್ಲ. ಇದನ್ನೂ ಓದಿ: ರಾಯನ್‍ಗೆ 11 ತಿಂಗಳು- ಕ್ಯೂಟ್ ವೀಡಿಯೋ ಹಂಚಿಕೊಂಡ ಮೇಘನಾ

ಸಿನಿಮಾ ನೋಡಿದ ಮೇಲೆ ಕನ್ನಡಕ್ಕೊಬ್ಬ ಅದ್ಭುತ ಹಾಗೂ ಪ್ರತಿಭಾವಂತ ‌ನಿರ್ದೇಶಕ ಸಿಕ್ಕಿದ್ರು ಎನ್ನುವ ಭಾವ‌ ಹೊಮ್ಮದೇ ಇರದು. ಕಥೆಯ ಮೇಲಿನ ನಿರ್ದೇಶಕರ ಹಿಡಿತ, ಪ್ರತಿ ಕಲಾವಿದರಿಗೂ ನೀಡಿದ ಪಾತ್ರ, ಎಲ್ಲೆ ಮೀರದ ಅಭಿನಯ‌ ಮತ್ತು ಡೈಲಾಗ್ ಪ್ರತಿಯೊಂದು ಕುಸುರಿ ಕೆಲಸವೂ ನಿರ್ದೇಶಕ ಅರವಿಂದ್ ಕುಪ್ಳೀಕರ್ ಪ್ರತಿಭೆಗೆ‌ ಹಿಡಿದ ಕನ್ನಡಿ.

Puksatte life 3

ಚಿತ್ರದ ಕಥೆ ಹೇಗೆ ಗಟ್ಟಿತನ ಹೊಂದಿದೆಯೋ ಅದಕ್ಕೆ ಆಯ್ಕೆ ಮಾಡಿಕೊಂಡ ಕಲಾವಿದರು ಅಷ್ಟೇ ಪ್ರತಿಭಾವಂತರೂ. ಮೇಲಾಗಿ ಎಲ್ಲರೂ ರಂಗಭೂಮಿ ಹಿನ್ನೆಲೆಯುಳ್ಳವರೇ. ಹಾಗಾಗಿ ಸಿನಿಮಾವನ್ನು ನೈಜವಾಗಿ ತೆರೆ ಮೇಲೆ ಕಟ್ಟಿಕೊಡಲು ಇದು ಒಂದು ಮುಖ್ಯ ಕಾರಣ. ಪ್ರತಿಯೊಬ್ಬರದ್ದು ತಮ್ಮ ಪ್ರತಿಭೆಯನ್ನು ತಾವೇ ಒರೆಗೆ ಹಚ್ಚಿ ನೋಡುವಂತ ಅಭಿನಯ. ಯಾರ ನಟನೆಯೂ ಸುಮಾರಾಗಿತ್ತು ಎನ್ನುವ ಮಾತೇ ಬಾರದ ಹಾಗೆ ಪ್ರತಿ ಪಾತ್ರವೂ ಜೀವ ತುಂಬಿ ನಟಿಸಿವೆ.

ಸಂಚಾರಿ ವಿಜಯ್ ಮುಸ್ಲಿಂ ಯುವಕನ ಪಾತ್ರಕ್ಕೆ ತುಂಬಿದ ಜೀವ ಅವರನ್ನು ಬಿಟ್ಟು ಇನ್ನಾರು ಮಾಡಲಾರರೇನೋ ಎನ್ನುವಂತಿದೆ. ನಟ ದೈತ್ಯ ಪ್ರತಿಭೆಗಳಾದ ಅಚ್ಯುತ್ ಕುಮಾರ್, ರಂಗಾಯಣ ರಘು ಅಭಿನಯಕ್ಕೆ ಸರಿಸಾಟಿ ಇಲ್ಲದಂತೆ ನಟಿಸಿದ್ದಾರೆ. ಇಬ್ಬರ ನಟನಾ ತಾಕತ್ತು ತೆರೆ ಮೇಲೆ ಕಣ್ಣಿಗೆ ಹಬ್ಬ ನೀಡುತ್ತದೆ. ನಾಯಕಿ ಮಾತಂಗಿ ಪ್ರಸನ್ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದು, ನೈಜ ಅಭಿನಯದ ಮೂಲಕ ಎಲ್ಲರನ್ನು ಸೆಳೆಯುತ್ತಾರೆ.

ವಾಸು ದೀಕ್ಷಿತ್ ಸಂಗೀತ ಚಿತ್ರಕ್ಕೆ ಪೂರಕವಾಗಿದ್ದು ಮನಸ್ಸಿಗೂ ಹತ್ತಿರವೆನಿಸುತ್ತೆ. ಪೂರ್ಣಚಂದ್ರ ತೇಜಸ್ವಿ ಹಿನ್ನೆಲೆ ಸಂಗೀತ ನಿರ್ದೇಶಕರ ವಿಷನ್ ಹಾಗೂ ಕ್ಯಾಮೆರಾ ಕೆಲಸ ಇವೆರಡಕ್ಕೂ ಪರಿಪೂರ್ಣತೆ ನೀಡಿದೆ.

ನಗುವಿನ ಹೂರಣ, ಗಂಭೀರತೆಯ ಲೇಪನ, ಒಂದೊಳ್ಳೆ ಸಂದೇಶ ಜೊತೆಗೆ ಒಂದೊಳ್ಳೆ ಅನುಭವ ನೀಡುತ್ತಾ, ಸಂಚಾರಿ ವಿಜಯ್ ಇರಬಾರದಿತ್ತಾ ಎನಿಸಿ ಕಣ್ಣಂಚಲಿ ನೀರು‌ ತರಿಸುತ್ತಾ ಕಾಡುವ ಸಿನಿಮಾ ‘ಪುಕ್ಸಟ್ಟೆ ಲೈಫು’.

ಪಬ್ಲಿಕ್ ರೇಟಿಂಗ್: 4/5

TAGGED:Achuth KumarAravind Kuplikar Kaushik Sampathkannada cinemaMatangi PrasanPuksatte LifeuPuksatte Lifeu Purusotte IllaRangayana RaghuSanchari Vijaysandalwoodಅಚ್ಯುತ್ ಕುಮಾರ್ಪುಕ್ಸಟ್ಟೆ ಲೈಫುಮಾತಂಗಿ ಪ್ರಸನ್‌ರಂಗಾಯಣ ರಘುಸಂಚಾರಿ ವಿಜಯ್
Share This Article
Facebook Whatsapp Whatsapp Telegram

Cinema news

ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows
man removes beard mustache gilli nata bigg boss winner
ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ
Cinema Latest Top Stories TV Shows

You Might Also Like

Ration Rice Chitradurga Challakere
Chitradurga

ಚಳ್ಳಕೆರೆಯಲ್ಲಿ ಪಡಿತರ ಅಕ್ಕಿ ಖರೀದಿಸಿ ಸಂಗ್ರಹ ಆರೋಪ – ಗೋದಾಮಿನ ಮೇಲೆ ದಾಳಿ

Public TV
By Public TV
2 minutes ago
Prateek Yadav Aparna Yadav
Latest

ಆದಷ್ಟು ಬೇಗ ಈ ಕೆಟ್ಟ ಮನಸ್ಸಿನ, ಸ್ವಾರ್ಥ ಮಹಿಳೆಗೆ ಡಿವೋರ್ಸ್‌ ಕೊಡ್ತೀನಿ – ಪತ್ನಿ ವಿರುದ್ಧವೇ ಸಿಡಿದ ಪ್ರತೀಕ್ ಯಾದವ್!

Public TV
By Public TV
1 hour ago
Sriramulu 1
Bellary

ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗ – ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR

Public TV
By Public TV
2 hours ago
ICC Jay shah
Latest

ಭಾರತದಲ್ಲಿ ಆಡದಿದ್ದರೆ ವಿಶ್ವಕಪ್‌ ಟೂರ್ನಿಯಿಂದಲೇ ಹೊರದಬ್ಬುತ್ತೇವೆ – ಬಾಂಗ್ಲಾಗೆ ಐಸಿಸಿ ಲಾಸ್ಟ್‌ ವಾರ್ನಿಂಗ್‌

Public TV
By Public TV
3 hours ago
Anagodu Zoo Davanagere
Davanagere

ಆನಗೋಡು ಕಿರು ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು – ಸಾಂಕ್ರಾಮಿಕ ರೋಗ ಶಂಕೆ

Public TV
By Public TV
3 hours ago
Mysuru 1
Districts

ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ – 20 ಎಕ್ರೆ ಒತ್ತುವರಿ ಜಾಗ ಸರ್ಕಾರದ ವಶಕ್ಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?