Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುಲ್ವಾಮಾ ಕೇಸ್ – ಎನ್‍ಐಎ ತನಿಖೆ ಎಲ್ಲಿಯವರೆಗೆ ಬಂದಿದೆ? ‘ಕೀ’ ಯಿಂದ ಕೇಸ್ ಓಪನ್ ಆದ ರೋಚಕ ಕಥೆ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪುಲ್ವಾಮಾ ಕೇಸ್ – ಎನ್‍ಐಎ ತನಿಖೆ ಎಲ್ಲಿಯವರೆಗೆ ಬಂದಿದೆ? ‘ಕೀ’ ಯಿಂದ ಕೇಸ್ ಓಪನ್ ಆದ ರೋಚಕ ಕಥೆ ಓದಿ

Latest

ಪುಲ್ವಾಮಾ ಕೇಸ್ – ಎನ್‍ಐಎ ತನಿಖೆ ಎಲ್ಲಿಯವರೆಗೆ ಬಂದಿದೆ? ‘ಕೀ’ ಯಿಂದ ಕೇಸ್ ಓಪನ್ ಆದ ರೋಚಕ ಕಥೆ ಓದಿ

Public TV
Last updated: February 14, 2020 10:52 am
Public TV
Share
5 Min Read
Pulwama CAR KEY
SHARE

ನವದೆಹಲಿ: ಪುಲ್ವಾಮಾ ದಾಳಿ ನಡೆದ ಒಂದು ವರ್ಷ ಪೂರ್ಣಗೊಂಡರೂ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಇನ್ನೂ ಪೂರ್ಣ ಪ್ರಮಾಣದ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಈ ಪ್ರಕರಣದಲ್ಲಿ ಶಂಕಿತರು ಎಂದು ಗುರುತಿಸಲಾಗಿದ್ದ ಎಲ್ಲ ವ್ಯಕ್ತಿಗಳನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಇನ್ನೂ ಚಾರ್ಜ್ ಶೀಟ್ ಸಲ್ಲಿಕೆಯಾಗಿಲ್ಲ ಎಂದು ಹೇಳಲಾಗುತ್ತಿದೆ.

ಈ ಪ್ರಕರಣದ ಸಂಬಂಧ ಶಂಕಿತ ಆರೋಪಿಗಳು ಎಂದು ಪರಿಗಣಿಸಿದ್ದ ಮುದಾಸ್ಸೀರ್ ಅಹ್ಮದ್ ಖಾನ್ ಮತ್ತು ಸಜ್ಜದ್ ಬಟ್ ಇಬ್ಬರು ಅನುಕ್ರಮವಾಗಿ ಮಾರ್ಚ್ ಮತ್ತು ಜೂನ್ ತಿಂಗಳಿನಲ್ಲಿ ಎನ್‍ಕೌಂಟರ್ ಮಾಡಿ ಹತ್ಯೆ ಮಾಡಲಾಗಿದೆ. ಶಂಕಿತ ಎಲ್ಲ ಆರೋಪಿಗಳನ್ನು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದ್ದರಿಂದ ಸಂಪೂರ್ಣವಾಗಿ ಮಾಹಿತಿ ಕಲೆ ಹಾಕಿ ತನಿಖೆ ನಡೆಸುವುದು ಕಷ್ಟ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"तुम्हारे शौर्य के गीत, कर्कश शोर में खोये नहीं।
गर्व इतना था कि हम देर तक रोये नहीं।"

WE DID NOT FORGET, WE DID NOT FORGIVE: We salute our brothers who sacrificed their lives in the service of the nation in Pulwama. Indebted, we stand with the families of our valiant martyrs. pic.twitter.com/GfzzLuTl7R

— ????????CRPF???????? (@crpfindia) February 13, 2020

ಈ ಕೃತ್ಯಕ್ಕೆ ಸಂಚು ರೂಪಿಸಿದ್ದು ಪಾಕಿಸ್ತಾನದಲ್ಲಿ ಎನ್ನುವುದು ಖಚಿತವಾಗಿ ತಿಳಿದಿದೆ. ಕಾನೂನು ಬಾಹಿರ ತಡೆ ಕಾಯ್ದೆ ಅಡಿ ತನಿಖೆ ನಡೆಸಿದರೆ ಪ್ರಕರಣ ದಾಖಲಿಸಿದ 90 ದಿನಗಳ ಒಳಗಡೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕಾಗುತ್ತದೆ. ಆದರೆ ಪ್ರಕರಣದಲ್ಲಿ ಉಲ್ಲೇಖಿಸಲ್ಪಟ್ಟ ಆರೋಪಿಗಳು ಮೃತಪಟ್ಟರೆ ಅವಧಿ ವಿಸ್ತರಣೆಯಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಸ್ಫೋಟಕ ಸಾಮಾಗ್ರಿಗಳು ಉಗ್ರರಿಗೆ ಸಿಕ್ಕಿದ್ದು ಹೇಗೆ ಎನ್ನುವುದರ ಬಗ್ಗೆ ತನಿಖೆಯಲ್ಲಿ ಇನ್ನೂ ಉತ್ತರ ಸಿಕ್ಕಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯ ಉನ್ನತ ಮಟ್ಟದ ಮಿಲಿಟರಿ ಸ್ಫೋಟಕಗಳನ್ನು ಬಳಸಿ ಕೃತ್ಯ ನಡೆಸಲಾಗಿದೆ ಎಂದು ವರದಿ ನೀಡಿತ್ತು. ಘಟನೆ ನಡೆದ ಮರುದಿನ ಭಾರೀ ಮಳೆ ಸುರಿದು ಬೇಕಾಗಿದ್ದ ಪ್ರಮುಖ ಸಾಕ್ಷ್ಯಗಳು ನಾಶವಾಗಿದ್ದರಿಂದ ತನಿಖೆಗೆ ಹಿನ್ನಡೆ ಆಗಿತ್ತು.

The exact spot where the #Pulwama suicide attack happened this day last year. The impact was so severe that a few bodies were recovered on the tower on the other side of the road. pic.twitter.com/x5DNVYxKbB

— Rahul Pandita (@rahulpandita) February 14, 2020

ಆರೋಪಿಗಳು ಯಾರು ಬದುಕಿಲ್ಲ:
ಆರೋಪಿ ಎ1 ಆಗಿದ್ದ ಜೈಷ್ ಎ ಮೊಹಮ್ಮದ್ ಸಂಘಟನೆ ಉಗ್ರ ಆದಿಲ್ ಅಹ್ಮದ್ ದಾರ್ ಮಾರುತಿ ಇಕೋ ಕಾರ್ ಮೂಲಕ ಕೇಂದ್ರ ಮೀಸಲು ಪೊಲೀಸ್ ಪಡೆಯ 40 ಸೈನಿಕರಿದ್ದ ಬಸ್ ಮೇಲೆ ದಾಳಿ ಮಾಡಿದ್ದ. ಘಟನೆಯಲ್ಲಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ವ್ಯವಸ್ಥಿತವಾಗಿ ದಾಳಿಗೆ ಸ್ಕೆಚ್ ಹಾಕಿದ್ದ ಆದಿಲ್ ದಾರ್ 300 ಕೆಜಿಗೂ ಹೆಚ್ಚು ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಬಸ್ಸಿಗೆ ಗುದ್ದಿಸಿದ್ದ. ಈ ಘಟನೆಯಲ್ಲಿ ದಾರ್ ಸಹ ಮೃತಪಟ್ಟಿದ್ದ.

ಕೃತ್ಯ ಎಸಗಲು ಸಹಕಾರ ನೀಡಿದ್ದ 23 ವರ್ಷ ವಯಸ್ಸಿನ ಎಲೆಕ್ಟ್ರಿಷಿಯನ್ ಮುದಾಸ್ಸೀರ್ ಅಹ್ಮದ್ ಖಾನ್ ನನ್ನು ಎನ್‍ಕೌಂಟರ್ ಮಾಡಿ ಮಾರ್ಚ್ 12 ರಂದು ಹತ್ಯೆ ಮಾಡಲಾಗಿತ್ತು. ಪುಲ್ವಾಮಾ ಜಿಲ್ಲೆಯವನಾದ ಮುದಾಸಿರ್ ಪದವೀಧರನಾಗಿದ್ದು ದಾಳಿಗೆ ಬೇಕಾದ ಸ್ಫೋಟಕ ವಸ್ತು ಹಾಗೂ ಕಾರನ್ನು ಪೂರೈಸಿದ್ದ. ಟ್ರಾಲ್ ಪ್ರದೇಶದ ಮಿರ್ ಮೊಹಲ್ಲಾಕ್ಕೆ ಸೇರಿದ ಮುದಾಸಿರ್ ಖಾನ್ 2017 ರಲ್ಲಿ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆ ಸೇರಿದ್ದ. ಕೃತ್ಯ ನಡೆಯುವ ಮೊದಲು ಅಹ್ಮದ್ ದಾರ್ ಹಾಗೂ ಮುದಾಸ್ಸೀರ್ ನಡುವಿನ ಸಂಭಾಷಣೆಯ ವಿವರ ಸಿಕ್ಕಿತ್ತು.

Pulwama 1280 PTI

ಪುಲ್ವಾಮಾ ದಾಳಿಗೂ 10 ದಿನಕ್ಕೂ ಮೊದಲು ಸಜ್ಜದ್ ಬಟ್ ಇಕೋ ಕಾರನ್ನು ಖರೀದಿಸಿದ್ದ. ಈ ಕಾರನ್ನು ಆತ್ಮಹುತಿ ಬಾಂಬರ್ ಅಹ್ಮದ್ ದಾರ್ ಗೆ ನೀಡಿದ್ದ. ಶೋಪಿಯನ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಈತ ಜೈಷ್-ಇ-ಮೊಹಮ್ಮದ್ ಸಂಘಟನೆಯ ಸೇರಿದ್ದ. ಸಜ್ಜದ್ ಕೈಯಲ್ಲಿ ಬಂದೂಕು ಹಿಡಿದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಜೂನ್ 18 ರಂದು ಭದ್ರತಾ ಪಡೆಗಳು ಅನಂತ್‍ನಾಗ್ ಜಿಲ್ಲೆಯ ಬಿಜ್‍ಬಿಹಾರಾ ಪಟ್ಟಣ ಸಮೀಪದ ಮರ್ಹಾಮಾ ಸಂಗಮ ಎಂಬ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ ಈತನ ಹತ್ಯೆ ನಡೆಸಿತ್ತು.

‘ಕೀ’ಯಿಂದ ಕೇಸ್ ಓಪನ್:
ಫೆ.14ರ ಮಧ್ಯಾಹ್ನ 3.15ರ ವೇಳೆಗೆ ದಾಳಿ ನಡೆದಿತ್ತು. ಮರುದಿನ ಭಾರೀ ಮಳೆ ಬಂದ ಪರಿಣಾಮ ತನಿಖೆಗೆ ಬೇಕಾಗಿದ್ದ ಪ್ರಮುಖ ಸಾಕ್ಷ್ಯಗಳು ನಾಶವಾಗಿತ್ತು. ಹೀಗಾಗಿ ಎನ್‍ಐಎಗೆ ತನಿಖೆಗೆ ನಡೆಸುವುದು ಬಹಳ ಸವಾಲಿನ ಕೆಲಸವಾಗಿತ್ತು.

pulwama counter attack

ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಲೇಥ್‍ಪುರಕ್ಕೆ ಕೃತ್ಯ ನಡೆದ ಕೆಲವೇ ಗಂಟೆಯಲ್ಲಿ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಮತ್ತು ಅಟೋಮೊಬೈಲ್ ತಜ್ಞರು ಸ್ಥಳಕ್ಕೆ ಆಗಮಿಸಿದ್ದರು. ಸ್ಫೋಟದ ರಭಸಕ್ಕೆ ಬಸ್ ಸಂಪೂರ್ಣವಾಗಿ ಮುದ್ದೆಯಾಗಿ ಬಿದ್ದಿದ್ದರೆ ಕೃತ್ಯಕ್ಕೆ ಬಳಸಿದ ಕಾರು ಸಂಪೂರ್ಣವಾಗಿ ನಾಶವಾಗಿತ್ತು. ಭಾಗಗಳು ಎಲ್ಲೆಂದರಲ್ಲಿ ಬಿದ್ದಿತ್ತು. ಹೀಗಾಗಿ ತನಿಖೆಯ ಆರಂಭದ ದಿನದಲ್ಲಿ ಕಾರಿನ ಭಾಗಗಳನ್ನು ಪತ್ತೆ ಹಚ್ಚುವುದೇ ದೊಡ್ಡ ಸವಾಲಾಗಿತ್ತು. ಕೊನೆಗೆ ಕಾರಿನ ಬಂಪರ್ ಮತ್ತು ನಂಬರ್ ಇರುವ ಶಾಕ್ ಅಬ್ಸರ್ಬರ್ ಸಿಕ್ಕಿತ್ತು. ಇದರ ಜೊತೆಯಲ್ಲಿ 25 ಲೀಟರಿನ ಕ್ಯಾನ್ ಸಿಕ್ಕಿತ್ತು. ತನಿಖಾಧಿಕಾರಿಗಳು ಈ ಕ್ಯಾನಿನಲ್ಲಿ 30 ಕೆಜಿ ಸ್ಫೋಟಕ ಇಟ್ಟಿರಬಹುದು ಎಂದು ಶಂಕಿಸಿದ್ದರು.

ಸಿಕ್ಕಿದ ಭಾಗಗಳನ್ನು ಚೆಕ್ ಮಾಡಿದಾಗ ಕೊನೆಗೆ ಕೃತ್ಯಕ್ಕೆ ಬಳಸಿದ್ದು ಮಾರುತಿ ಕಂಪನಿಯ ಕಾರು ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ. ನಂತರ ಎನ್‍ಐಎ ಅಧಿಕಾರಿಗಳು ಮಾರುತಿ ಎಂಜಿನಿಯರ್ ಗಳನ್ನು ಸ್ಥಳಕ್ಕೆ ಕರೆಸಿಕೊಂಡು ಮಾಹಿತಿ ಕಲೆ ಹಾಕಿದ್ದಾರೆ. ಸಿಕ್ಕಿದ ಭಾಗಗಳ ಮಾಹಿತಿಯನ್ನು ಕಲೆ ಹಾಕಿದಾಗ ಕಾರು 2011ರಲ್ಲಿ ಉತ್ಪಾದನೆಯಾಗಿದೆ ಎನ್ನುವ ವಿಚಾರ ಬೆಳಕಿಗೆ ಬರುತ್ತದೆ.

Pulwama Terror Attack

2011ರಲ್ಲಿ ಉತ್ಪಾದನೆಯಾದ ಕಾರಿನ ಮಾಲೀಕರನ್ನು ಪತ್ತೆ ಹಚ್ಚುವುದು ಹೇಗೆ? ಇದು ಬಹಳ ಕಷ್ಟದ ಕೆಲಸ. ತನಿಖೆಗೆ ಬಹಳ ದಿನಗಳು ನಡೆಯಬಹುದು ಎನ್ನುವುದನ್ನು ಅರಿತ ಎನ್‍ಐಎ ತಂಡ ಏನು ಮಾಡಬೇಕು ಎಂದು ಯೋಚಿಸುತ್ತಿದ್ದಾಗ ಹೊಳೆದಿದ್ದೆ ಮೆಟಲ್ ಡಿಟೆಕ್ಟರ್ ಸಾಧನ. ಸ್ಫೋಟದ ತೀವ್ರತೆಗೆ ಸೈನಿಕರ ದೇಹದ ಭಾಗಗಳೇ ಸುಮಾರು 100 ಮೀಟರ್ ದೂರಕ್ಕೆ ಚಿಮ್ಮಿತ್ತು. ಹೀಗಾಗಿ ಕಾರಿನ ಭಾಗಗಳು ಹಲವು ಕಡೆ ಚಿಮ್ಮಿರಬಹುದು ಎನ್ನುವ ಬಲವಾದ ನಂಬಿಕೆಯೊಂದಿಗೆ ಎನ್‍ಐಎ ಮೆಟಲ್ ಡಿಟೆಕ್ಟರ್ ಮೊರೆ ಹೋಯ್ತು.

ಮೆಟಲ್ ಡಿಟೆಕ್ಟರ್ ತಂದು 200 ಮೀಟರ್ ವ್ಯಾಪ್ತಿಯಲ್ಲಿ ಸ್ಕ್ಯಾನ್ ಮಾಡಲು ಮುಂದಾದಾಗ ಒಂದು ಕೀ ಸಿಕ್ಕಿತು. ಇದಾದ ಬಳಿಕ ಕಾರಿನ ಚಾಸಿ ಪತ್ತೆಯಾಯಿತು. ಯಾವುದೇ ಚಾಸಿಯಲ್ಲಿ 19 ಸಂಖ್ಯೆಗಳು ಇರುತ್ತದೆ. ಈ ಚಾಸಿ ನಂಬರ್ ಮೂಲಕ ವೆಹಿಕಲ್ ಐಡಿಂಟಿಫಿಕೇಶನ್ ನಂಬರ್(ವಿಪಿಎನ್) ಪತ್ತೆ ಮಾಡಬಹುದು. ವಿಪಿಎನ್ 19 ಅಕ್ಷರಗಳಿಂದ ಕೂಡಿದ್ದು ಎಲ್ಲಾ ಕಾರುಗಳಿಗೆ ವಿಶಿಷ್ಟವಾಗಿ ನೀಡಲಾಗುತ್ತದೆ. ಈ ಎಲ್ಲ ಮಾಹಿತಿಗಳನ್ನು ಒಂದಕ್ಕೊಂದು ತಾಳೆ ಹಾಕಿದಾಗ ಈ ಕೃತ್ಯಕ್ಕೆ ಬಳಕೆ ಮಾಡಿದ್ದು ಇಕೋ ಕಾರು ಎನ್ನುವುದು ಖಚಿತವಾಯಿತು.

pulwamaattack

ಕಾರು ಪತ್ತೆಯಾದ ನಂತರ ಮಾಲೀಕನನ್ನು ಪತ್ತೆ ಹಚ್ಚಲು ಎನ್‍ಐಎ ಮತ್ತಷ್ಟು ಶ್ರಮ ಪಟ್ಟಿದೆ. ಕಾರು ಎಲ್ಲಿಂದ ಮಾರಾಟವಾಗಿ ಇದರ ಮೊದಲ ಮಾಲೀಕರ ಮಾಹಿತಿಯನ್ನು ಕಲೆ ಹಾಕಿದಾಗ 2011 ರಲ್ಲಿ ಅನಂತ್‍ನಾಗ್‍ನಿಂದ ಜಲೀಲ್ ಅಹ್ಮದ್ ಹಕ್ಕಾನಿ ಅವರು ಈ ಕಾರನ್ನು ಮೊದಲು ಖರೀದಿಸಿದ್ದಾರೆ ಎನ್ನುವುದು ಗೊತ್ತಾಗುತ್ತದೆ. ವಿಳಾಸದ ಆಧಾರದಲ್ಲಿ ಅವರನ್ನು ವಿಚಾರಿಸಿದಾಗ ನಾನು ಕಾರನ್ನು ಮಾರಾಟ ಮಾಡಿದ್ದೇನೆ ಎಂದು ಹೇಳಿದ್ದಾರೆ. ಬಳಿಕ ಈ ಕಾರು 7 ಜನರಿಗೆ ಮಾರಾಟವಾಗಿ ಕೊನೆಯ ಬಾರಿ ಈ ವರ್ಷದ ಫೆ.4 ರಂದು ಅನಂತ್‍ನಾಗ್ ಜಿಲ್ಲೆಯ ಮುಕ್ಬುಲ್ ಬಟ್ ಮಗ ಸಜ್ಜದ್ ಬಟ್ ಖರೀದಿಸಿದ್ದ ವಿಚಾರ ಬೆಳಕಿಗೆ ಬರುತ್ತದೆ.

ಈ ಮಾಹಿತಿ ಸಿಕ್ಕಿದ ಕೂಡಲೇ ಎನ್‍ಐಎ ತಂಡ ಜಮ್ಮು ಕಾಶ್ಮೀರ ಪೊಲೀಸರ ಸಹಾಯದಿಂದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹ್ರಾಕ್ಕೆ ತೆರಳಿ ಸಜ್ಜದ್ ಬಟ್‍ಗಾಗಿ ಶೋಧಿಸಿದೆ. ಈ ವೇಳೆ ಆತ ನಾಪತ್ತೆಯಾಗಿದ್ದ. ಅಲ್ಲಿಗೆ ಈ ಕಾರು ಉಗ್ರರಿಗೆ ಸೇರಿದ್ದು ಎನ್ನುವುದು ಖಚಿತವಾಗುತ್ತದೆ.

Martyr Pulwama

TAGGED:CRPFindiakannada newsPulwamaPulwama attackಎನ್‍ಐಎಜಮ್ಮು ಕಾಶ್ಮೀರಪಾಕಿಸ್ತಾನಪುಲ್ವಾಮಾಪುಲ್ವಾಮಾ ಕೇಸ್ಭಾರತ
Share This Article
Facebook Whatsapp Whatsapp Telegram

Cinema news

Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood

You Might Also Like

Narendra Modi gandhiji
Latest

ಗಾಂಧಿ ಹೆಸರಿನಲ್ಲಿ ಹೊಸ ಯೋಜನೆ ಪ್ರಕಟ

Public TV
By Public TV
16 minutes ago
CJ Roy Funeral
Bengaluru City

ಮಣ್ಣಲ್ಲಿ ಮಣ್ಣಾದ ಉದ್ಯಮಿ ಸಿ.ಜೆ ರಾಯ್ – ಕ್ರಿಶ್ಚಿಯನ್ ಸಂಪ್ರದಾಯದಂತೆ ಅಂತ್ಯಸಂಸ್ಕಾರ

Public TV
By Public TV
39 minutes ago
Chabahar Port
Latest

Budget 2026 | ಇರಾನ್‌ಗೆ ಇಲ್ಲ, ಬಾಂಗ್ಲಾ ಅನುದಾನ ಅರ್ಧ ಕಡಿತ

Public TV
By Public TV
48 minutes ago
siddaramaiah
Kalaburagi

ಕರ್ನಾಟಕಕ್ಕೆ ಒಂದು ಚೊಂಬು ಕೊಟ್ಟಿದ್ದಾರೆ: ಬಜೆಟ್‌ನಿಂದ ಅನ್ಯಾಯ ಆಗಿದೆ ಎಂದ ಸಿದ್ದರಾಮಯ್ಯ

Public TV
By Public TV
58 minutes ago
Belagavi
Belgaum

400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್ – ಪೊಲೀಸರಿಗೆ ತಾನೇ ಶರಣಾದ ಪ್ರಮುಖ ಆರೋಪಿ

Public TV
By Public TV
1 hour ago
Leopard 1
Chamarajanagar

ಚಾಮರಾಜನಗರ| ಚಿರತೆ ದಾಳಿಗೆ ಕರು ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?