ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಚಿತ್ರರಂಗದ ನಮನ

Public TV
1 Min Read
sandalwood

ಬೆಂಗಳೂರು: ಪುಲ್ವಾಮಾದಲ್ಲಿ ಭಯೋತ್ಪಾದನ ದಾಳಿಯಲ್ಲಿ ಹುತಾತ್ಮರಾದ 49 ಕ್ಕೂ ಹೆಚ್ಚು ಯೋಧರಿಗೆ ಚಿತ್ರರಂಗ ಹಲವು ಕಲಾವಿದರು ಸಂತಾಪ ಸೂಚಿಸಿದ್ದಾರೆ.

ನಟರಾದ ದರ್ಶನ್, ಸುದೀಪ್, ಪುನೀತ್ ರಾಜ್‍ಕುಮಾರ್ ಜಗ್ಗೇಶ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು ಟ್ವೀಟ್ ಮಾಡಿ ತಮ್ಮ ಸಂತಾಪ ಸೂಚಿಸಿ ಹೇಡಿ ಕೃತ್ಯದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಪುಲ್ವಾಮಾ ದಾಳಿ ಬಗ್ಗೆ ತುಂಬಾ ದುಃಖವಾಗಿದೆ, ಭಯೋತ್ಪಾದನೆ ಯಾವತ್ತೂ ಮಾನವ ಕುಲಕ್ಕೆ ಅಪಾಯಕಾರಿ ಎಂದು ದರ್ಶನ್ ಟ್ವೀಟ್ ಮಾಡಿದ್ದು, ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಯೋಧರು ಹುತಾತ್ಮರಾಗಿರುವುದು ಬೇಸರದ ಸಂಗತಿ ಎಂಬುದಾಗಿ ಪುನೀತ್ ನಮನ ಸಲ್ಲಿಸಿದ್ದಾರೆ.

ಯೋಧರ ಬಲಿದಾನಕ್ಕೆ ಅವರ ತ್ಯಾಗಕ್ಕೆ ನನ್ನ ಭಾವಪೂರ್ಣ ನಮನ, ಅವರ ತ್ಯಾಗಕ್ಕೆ ತಕ್ಕ ನ್ಯಾಯ ಸಿಗಬೇಕು ಎಂದು ಯಶ್ ತಿಳಿಸಿದ್ದು, ಉಳಿದಂತೆ ಜಗ್ಗೇಶ್, ರಶ್ಮಿಕಾ, ಶ್ರೀಮುರುಳಿ, ಸುಮಲತಾ ಅಂಬರೀಶ್, ನಿರ್ದೇಶಕ ಪವನ್ ಒಡೆಯರ್ ಸೇರಿದಂತೆ ಅನೇಕ ನಟ-ನಟಿಯರು ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ ಟ್ಟೀಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

 

Share This Article
Leave a Comment

Leave a Reply

Your email address will not be published. Required fields are marked *