Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುತಾತ್ಮರ ಮನೆಯಲ್ಲಿ ಹುಟ್ಟಿದಾತ ಹುತಾತ್ಮರ ಲಾಭ ನಷ್ಟದ ಲೆಕ್ಕ ಕೇಳಿದ್ದೇ ದುರಂತ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Column | ಹುತಾತ್ಮರ ಮನೆಯಲ್ಲಿ ಹುಟ್ಟಿದಾತ ಹುತಾತ್ಮರ ಲಾಭ ನಷ್ಟದ ಲೆಕ್ಕ ಕೇಳಿದ್ದೇ ದುರಂತ!

Column

ಹುತಾತ್ಮರ ಮನೆಯಲ್ಲಿ ಹುಟ್ಟಿದಾತ ಹುತಾತ್ಮರ ಲಾಭ ನಷ್ಟದ ಲೆಕ್ಕ ಕೇಳಿದ್ದೇ ದುರಂತ!

Public TV
Last updated: February 19, 2020 9:37 pm
Public TV
Share
3 Min Read
Rahul Gandhi
SHARE

– ಸುಕೇಶ್ ಡಿಎಚ್
ನಮ್ಮ ಊರಿನ ಕಡೆ ಒಂದು ಮಾತಿದೆ ಅದೃಷ್ಟ ರಾಜ್ಯ ಆಳು ಅಂದರೆ ಬುದ್ಧಿ ದನ ಮೇಯಿಸು ಅಂತಿತ್ತಂತೆ. ರಾಹುಲ್ ಗಾಂಧಿ ಮಾಡಿಕೊಳ್ಳುವ ಎಡವಟ್ಟುಗಳನ್ನ ನೋಡಿದಾಗಲೆಲ್ಲಾ ಯಾಕೋ ಈ ಮಾತು ನನಗೆ ಪದೇ ಪದೇ ನೆನಪಾಗುತ್ತೆ. ಎಲ್ಲವು ಇದ್ದು ಏನೂ ಇಲ್ಲದ ಸ್ಥಿತಿ ರಾಹುಲ್ ಗಾಂಧಿಯದು. ವಂಶ ಪಾರಂಪರ್ಯ ಅಧಿಕಾರವನ್ನು ಹುಟ್ಟಿನಿಂದಲೇ ಪಡೆದ ನಾಯಕನಿಗೆ ಈಗ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಆದರೆ ಅದನ್ನು ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಇನ್ನು ಅಸಮರ್ಥ ಅನ್ನಿಸಿಕೊಳ್ಳುತ್ತಿದ್ದಾರೆ ಕಾಂಗ್ರೆಸ್ಸಿಗರ ಪಾಲಿನ ಯುವರಾಜ.

SUKESH STRAIGHT HIT

ಯಾರು ಏನೇ ಹೇಳಲಿ ರಾಜಕೀಯ ಆರೋಪ ಪ್ರತ್ಯಾರೋಪಗಳು ಏನೇ ಇರಲಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿಯವರ ಸಾವು ಖಂಡಿತ ಸಾಮಾನ್ಯ ಸಾವಲ್ಲ. ದೇಶದ ಹಿತಕ್ಕಾಗಿ ತಗೆದುಕೊಂಡ ತೀರ್ಮಾನಗಳೇ ಅವರನ್ನ ಸಾವಿನ ದವಡೆಗೆ ನೂಕಿದ್ದು ಇತಿಹಾಸ. ದೇಶಕ್ಕಾಗಿ ಪ್ರಾಣ ಬಿಟ್ಟ ಹುತಾತ್ಮರ ಸಾಲಿನಲ್ಲಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹೆಸರು ಅಜರಾಮರ. ಇಂದಿರಾ ಗಾಂಧಿಯವರಿಗೆ ಬ್ಲೂ ಸ್ಟಾರ್ ಆಪರೇಷನ್ ಮಾಡಿ ಅಂತ ಯಾರು ಹೇಳಿದ್ದು? ಗುರುದ್ವಾರದ ಮೇಲೆ ಸೈನ್ಯ ನುಗ್ಗಿಸಿ ಅಂದಿದ್ಯಾರು? ಅವರು ಮಾಡಿದ ತಪ್ಪಿಗೆ ಸಿಖ್ ಸಮುದಾಯದವರು ಅವರನ್ನು ಕೊಂದರು ಎಂದರೆ ಅದಕ್ಕಿಂತ ಅವಿವೇಕದ ಮಾತು ಇನ್ನೊಂದು ಇರಲಾರದು. ಶ್ರೀಲಂಕಾದ ಎಲ್‍ಟಿಟಿಇ ಸಮಸ್ಯೆಗೂ ಭಾರತಕ್ಕೂ ಏನು ಸಂಬಂಧ? ಅಲ್ಲಿಗೆ ಸೈನ್ಯ ಕಳುಹಿಸುವ ಉಸಾಬರಿ ರಾಜೀವ್ ಗಾಂಧಿಗೆ ಯಾಕೆ ಬೇಕಿತ್ತು? ಎಲ್‍ಟಿಟಿಇ ಸೇಡಿಗೆ ರಾಜೀವ್ ಬಲಿಯಾದರು ಅಷ್ಟೇ ಅಂತ ರಾಜೀವ್ ಗಾಂಧಿಯವರ ಸಾವನ್ನ ಕೇವಲ ಎಲ್‍ಟಿಟಿಇ ಸೇಡಿಗೆ ಸೀಮಿತಗೊಳಿಸಿದರೆ ಅದಕ್ಕಿಂತ ಮೂರ್ಖತನ ಇನ್ನೊಂದಿಲ್ಲ. ಅಂದಿನ ಕಾಲಘಟ್ಟಕ್ಕೆ ತಕ್ಕಂತೆ ಇಂದಿರಾ ಇರಬಹುದು, ರಾಜೀವ್ ಇರಬಹುದು ತಮ್ಮದೇ ಆದ ತೀರ್ಮಾನವನ್ನ ಕೈಗೊಂಡಿದ್ದರು. ಅದೇ ಕಾರಣಕ್ಕಾಗಿ ಇಬ್ಬರು ಬಲಿಯಾಗಬೇಕಾಯಿತು. ಇಬ್ಬರು ನಾಯಕರ ಬಲಿದಾನವನ್ನೆ ಕಾಂಗ್ರೆಸ್ ಸಾಕಷ್ಟು ವರ್ಷಗಳಿಂದ ರಾಜಕೀಯವಾಗಿ ಬಳಸಿಕೊಂಡು ಲಾಭವನ್ನು ಪಡೆದಿದೆ.

Today as we remember our 40 CRPF martyrs in the #PulwamaAttack , let us ask:

1. Who benefitted the most from the attack?

2. What is the outcome of the inquiry into the attack?

3. Who in the BJP Govt has yet been held accountable for the security lapses that allowed the attack? pic.twitter.com/KZLbdOkLK5

— Rahul Gandhi (@RahulGandhi) February 14, 2020

ಅಂತಹ ಅಜ್ಜಿಯ ಮೊಮ್ಮಗ, ಅಂತಹ ತಂದೆಯ ಮಗ ದೇಶದ ಸೈನಿಕರ ಬಲಿದಾನದಿಂದ ಯಾರಿಗೆ ಹೆಚ್ಚು ಲಾಭವಾಗಿದೆ ಅಂತ ಕೇಳ್ತಾರೆ ಅಂದರೆ ಅವರ ಮಾನಸಿಕ ಸ್ಥಿತಿ ಎಂತದ್ದು ಎಂಬ ಅನುಮಾನ ಖಂಡಿತ ಮೂಡುತ್ತದೆ. ಇಂದಿರಾ ಗಾಂಧಿ ಸಾವಿನಿಂದ ಯಾರಿಗೆ ಹೆಚ್ಚು ಲಾಭವಾಯ್ತು? ರಾಜೀವ್ ಗಾಂಧಿ ಸಾವಿನಿಂದ ಯಾರಿಗೆ ಹೆಚ್ಚು ಲಾಭವಾಯ್ತು ಅಂತ ಕೇಳೋದು ಎಷ್ಟು ಮೂರ್ಖತನವೋ ರಾಹುಲ್ ಗಾಂಧಿ ಕೇಳಿದ ಪ್ರಶ್ನೆಯೂ ಅಷ್ಟೇ ಮೂರ್ಖತನದ್ದು ಅನ್ನೋದರಲ್ಲಿ ಅನುಮಾನವೇ ಇಲ್ಲ.

ಇನ್ನು ದೇಶದಲ್ಲಿ ಭಯೋತ್ಪಾದಕ ದಾಳಿ ಹೊಸತೇನೂ ಅಲ್ಲ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉರಿ ದಾಳಿ, ಪುಲ್ವಾಮ ದಾಳಿಗಳ ಮೂಲಕ ಭಯೋತ್ಪಾದಕರು ಸೈನ್ಯವನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದ ಘಟನೆಗಳು ನಡೆದವು. ಸಹಜವಾಗಿಯೆ ಸೈನ್ಯ ಪ್ರತಿಕಾರವನ್ನು ತಗೆದುಕೊಂಡಿದೆ. ಆದರೆ ಈ ದಾಳಿ ನಡೆದಿದೆ ಎಂದರೆ ಸಹಜವಾಗಿಯೇ ದೇಶದ ಗುಪ್ತಚರ ಇಲಾಖೆಯ ವೈಫಲ್ಯವು ಕಾರಣವಾಗಿದೆ.

Pulwama 1280 PTI

ವಿಪಕ್ಷಗಳು ಸಹಜವಾಗಿಯೆ ಇದನ್ನ ಟೀಕಿಸುವುದು ಮೊದಲಿನಿಂದಲು ನಡೆದಿದೆ. ಆದರೆ 2019ರ ಫೆಬ್ರವರಿ 14 ದಾಳಿ ಮಾತ್ರ ಅತ್ಯಂತ ಕೆಟ್ಟ ರೀತಿಯಲ್ಲಿ ರಾಜಕೀಯ ತಿರುವು ಪಡೆದುಕೊಂಡಿತು. ಅದಕ್ಕೆ ಕಾರಣವಾಗಿದ್ದು ಚುನಾವಣೆ ಹೊಸ್ತಿಲಲ್ಲಿ ಈ ದಾಳಿ ಆಯ್ತು ಅನ್ನೋದು. ಅಲ್ಲದೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಹಾ ಭಾರತೀಯ ಸೈನ್ಯದ ಪ್ರತಿಕಾರವನ್ನೆ ಪ್ರಚಾರಕ್ಕೆ ಬಳಸಿಕೊಂಡು ಲಾಭ ಪಡೆಯಿತು. ಇಡಿ ದಾಳಿಯನ್ನೇ ಮೊದಲಿನಿಂದಲೂ ರಾಜಕೀಯ ದೃಷ್ಟಿಯಿಂದ ನೋಡಿದ ಬಿಜೆಪಿಯ ರಾಜಕೀಯ ಎದುರಾಳಿಗಳು ಗುಪ್ತಚರ ಇಲಾಖೆ ವೈಫಲ್ಯವನ್ನ ಖಂಡಿಸುವ ಜೋಷ್ ನಲ್ಲಿ ಹಿಗ್ಗಾಮುಗ್ಗಾ ನಾಲಿಗೆ ಹರಿಬಿಟ್ಟು 2019 ರ ಲೋಕಸಭಾ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಿಸಿಕೊಂಡವು.

Martyr Pulwama

ಎಡಪಂಥೀಯರ ಎಡಬಿಡಂಗಿತನ ಒಂದು ಕಡೆ ಇರಲಿ. ರಾಹುಲ್ ಗಾಂಧಿ ಕೇಳಿದ ಆ ಎರಡು ಪ್ರಶ್ನೆಗಳು ಸರಿಯಾಗೆ ಇವೆ. ಪುಲ್ವಾಮ ದಾಳಿಯ ಬಗ್ಗೆ ನಡೆಸಿದ ತನಿಖೆಯ ಅಂಶಗಳೇನು? ಪುಲ್ವಾಮ ಭದ್ರತ ಲೋಪಕ್ಕೆ ಯಾರನ್ನ ಹೊಣೆಗಾರರನ್ನಾಗಿ ಮಾಡಿದೆ ಎಂದು ಕೇಳಿದ್ದು ಖಂಡಿತವಾಗಿಯು ಸರಿ ಇದೆ. ಉತ್ತರ ಕೊಡಬೇಕಾದ್ದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ ಪುಲ್ವಾಮ ದಾಳಿಯಿಂದ ಯಾರಿಗೆ ಹೆಚ್ಚು ಲಾಭವಾಗಿದೆ ಅನ್ನೋ ಪ್ರಶ್ನೆ ಅವರ ರಾಜಕೀಯ ದೃಷ್ಟಿಯಲ್ಲಿ ಸರಿ ಇರಬಹುದು. ಆದರೆ ವೀರ ಸೈನಿಕರ ಬಲಿದಾನ ಲಾಭ ನಷ್ಟದ ಲೆಕ್ಕಾಚಾರದ ಪ್ರಶ್ನೆ ಆಗಲ್ಲ. ಅದು ದೇಶಕ್ಕಾದ ನಷ್ಟ, ಅದನ್ನು ತುಂಬಲು ಸಾಧ್ಯವಿಲ್ಲ. ಆದರೆ ಅದಕ್ಕೆ ಕಾರಣವಾದವರನ್ನು ಮಟ್ಟ ಹಾಕಿ ಸೈನಿಕರ ವೀರ ಮರಣಕ್ಕೊಂದು ಸಲ್ಯೂಟ್ ಮಾಡಲಷ್ಟೇ ಸಾಧ್ಯ.

Pulwama Terror Attack 1

ಬಹುಶಃ ರಾಹುಲ್ ಗಾಂಧಿಯ ಬೆನ್ನಿಗೆ ಸಮರ್ಪಕವಾದ ಥಿಂಕ್ ಟ್ಯಾಂಕ್ ಇಲ್ಲದಿರುವುದರ ಪರಿಣಾಮ ಈ ಪ್ರಶ್ನೆ ಉದ್ಭವಿಸಿರಬಹುದು. ಆದರೆ ಇದರಿಂದ ಕಾಂಗ್ರೆಸ್ ಗೆ ಮತ್ತಷ್ಟು ನಷ್ಟವಾಗಬಹುದು, ಆದರೆ ದೇಶಕ್ಕಂತೂ ಯಾವ ಲಾಭವಿಲ್ಲ ಅನ್ನೋದು ಅಷ್ಟೇ ಸತ್ಯ.

TAGGED:ಕರ್ನಾಟಕಕಾಂಗ್ರೆಸ್ನರೇಂದ್ರ ಮೋದಿಪುಲ್ವಾಮಬಿಜೆಪಿರಾಜೀವ್ ಗಾಂಧಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

trump US
Latest

ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ

Public TV
By Public TV
4 minutes ago
Bengaluru GBA Election
Bengaluru City

ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

Public TV
By Public TV
5 minutes ago
India EU Trade Deal
Latest

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

Public TV
By Public TV
33 minutes ago
mysuru accident
Latest

ಮೈಸೂರು| ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

Public TV
By Public TV
39 minutes ago
Bike Taxi Auto Association Supreme Court
Bengaluru City

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 27-01-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?