ಬೈಕ್‌ನಲ್ಲಿ ಬಂದು ಪುಣೆ ಮಾಜಿ ಕಾರ್ಪೋರೇಟರ್ ಕೊಂದ್ರು – 10 ಆರೋಪಿಗಳ ಮೇಲೆ ಎಫ್‌ಐಆರ್

Public TV
1 Min Read
pune murder case 1

ಪುಣೆ: ಬೈಕ್‌ನಲ್ಲಿ ಬಂದು ಪುಣೆ (Pune) ಮಾಜಿ ಕಾರ್ಪೋರೇಟರ್ ವನರಾಜ್ ಹತ್ಯೆ ಗೈದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.

ಭಾನುವಾರ ತಡರಾತ್ರಿ ಸುಮಾರು 9:30ರ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳ ತಂಡ ಅಂದೇಕರ್ ಮೇಲೆ ದಾಳಿ ಮಾಡಿದ್ದಾರೆ. ಹರಿತವಾದ ಆಯುಧಗಳಿಂದ ಅಂದೇಕರ್ ಕುತ್ತಿಗೆ ಹಾಗೂ ತಲೆಗೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

ತೀರ್ವವಾದ ದಾಳಿಯಿಂದ ಅಂದೇಕರ್ ಮೃತಪಟ್ಟಿರು ಸಾಧ್ಯತೆಗಳು ಇವೆ. ಮೃತರ ಅಂಗಿಯಲ್ಲಿ ಖಾಲಿ ಕಾರ್ಟ್ರಿಡ್ಜ್ ಕಂಡುಬಂದಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರವೀಣ್ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್ 22ಕ್ಕೆ ಪಿಎಸ್‌ಐ ಪರೀಕ್ಷೆ – 66,000 ಮಂದಿ ಅರ್ಜಿ ಸಲ್ಲಿಕೆ

ದಾಳಿಯ ಹಿಂದೆ ಅಂದೇಕರ್ ಸಂಬಂಧಿಕರ ಪಾತ್ರವಿದೆ ಎಂದು ಶಂಕಿಸಿ ಕುಟುಂಬಸ್ಥರು ಎಫ್‌ಐಆರ್ (FIR) ದಾಖಲಿಸಿದ್ದಾರೆ. ಅಂದೇಕರ್ ದೇಹದಲ್ಲಿ 5 ಬಾರಿ ಗುಂಡು ಹಾರಿಸಿರುವ ಗುರುತು ಹಾಗೂ ಚೂಪಾದ ಶಸ್ತ್ರಗಳಿಂದ ಚುಚ್ಚಿರುವ ಗಾಯಗಳ ಗುರುತುಗಳಿವೆ ಎಂದು ಶವ ಪರೀಕ್ಷೆಯ ವೇಳೆ ತಿಳಿದು ಬಂದಿದೆ ಎಂದು ಹೇಳಿದರು.

ಪ್ರಕರಣ ಸಂಬಂಧ 10 ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅರೆಸ್ಟ್‌

Share This Article