ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

Public TV
1 Min Read
Puneeth 4 1

ರ್ನಾಟಕ ಸರಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಟ್ಟ ಬೆನ್ನಲ್ಲೇ, ಸರಕಾರದ ಮತ್ತೊಂದು ಪ್ರಶಸ್ತಿ ಘೋಷಣೆಯಾಗಿದೆ. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ‘ ಸಹಕಾರ ರತ್ನ’ ಪ್ರಶಸ್ತಿಯನ್ನು ಪುನೀತ್ ಅವರಿಗೆ ಘೋಷಿಸಲಾಗಿದ್ದು, ನಂದಿನಿ ಹಾಲು ಉತ್ಪನ್ನಗಳಿಗೆ ಉಚಿತವಾಗಿ ಜಾಹೀರಾತು ನೀಡಿರುವ ಸೇವೆಯನ್ನು ಪರಿಗಣಿಸಲಾಗಿದೆ.

Puneeth 3 2

ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್, ‘ನಟ ಪುನೀತ್ ರಾಜ್ ಕುಮಾರ್ ಅವರು ನಂದಿನಿ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಅದನ್ನು ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಈ ಸೇವೆಯನ್ನು ಪರಿಗಣಿಸಿ ಅವರಿಗೆ ಗೌರವಿಸಲು ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನ ಮಾಡಿದ್ದೇವೆ’ ಎಂದರು. ಇದನ್ನೂ ಓದಿ : ಕೆಜಿಎಫ್ 2.. ಹುಷಾರ್, ಮಾರ್ಚ್ 21ಕ್ಕೆ ತೂಫಾನ್ ಅಪ್ಪಳಿಸಲಿದೆ!

puneeth 3 1

ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಮಾರ್ಚ್ 20ರಂದು ಕಂಗೇರಿ ಉಪನಗರದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಬಾರಿ ಒಟ್ಟು 40 ರಿಂದ 50 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನ ಮಾಡಲಾಗಿದ್ದು, ಪ್ರಶಸ್ತಿಯು 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *