Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ

Health

ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ

Public TV
Last updated: October 31, 2021 6:09 pm
Public TV
Share
3 Min Read
PUNEET-C.N.MANJUNATH
SHARE

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಹಠಾತ್ ನಿಧನ ನಂತರ ಹೃದಯಾಘಾತ ಮತ್ತು ಹೃದಯ ಸ್ತಂಭನ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಹೃದಯಾಘಾತದ ಬಗ್ಗೆ ವೈದ್ಯರು ಸಾಕಷ್ಟು ವಿಶ್ಲೇಷಣೆ ಮಾಡುತ್ತಿದ್ದಾರೆ. ಈ ಕುರಿತು ಜಯದೇವ ಹೃದ್ರೋಗ ಆಸ್ಪತ್ರೆಯ ಡಾ. ಸಿ.ಎನ್.ಮಂಜುನಾಥ್ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

puneeth rajkumar 1 7

ಡಾ. ಸಿ.ಎನ್.ಮಂಜುನಾಥ್ ಅವರು ಹೇಳಿದ್ದೇನು..?
ಪುನೀತ್ ರಾಜ್‍ಕುಮಾರ್ ಅವರು ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿದ್ದರು. ದೈಹಿಕ ಫಿಟ್‍ನೆಸ್ ಕೂಡ ಚೆನ್ನಾಗಿತ್ತು. ಜೀವನಶೈಲಿ, ಆಹಾರ ಪದ್ಧತಿ ಉತ್ತಮವಾಗಿತ್ತು. ಅವರಿಗೆ ಹೀಗಾಗಿದ್ದು ಶಾಕ್ ಎನಿಸುತ್ತಿದೆ. ಇದನ್ನೂ ಓದಿ: ಪುನೀತ್ ನಿಧನ- ಶೀಘ್ರವೇ ಜಿಮ್, ಫಿಟ್‌ನೆಸ್‌ ಸೆಂಟರ್‌ಗಳಿಗೆ ಗೈಡ್ ಲೈನ್ಸ್

ದೇಶದಲ್ಲಿ ಸಾವಿರಾರು ಜನರಿಗೆ ಹೃದಯಾಘಾತವಾಗುತ್ತೆ. ಅವರಲ್ಲಿ ಶೇ. 99 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಹೋಗುತ್ತಾರೆ. ಆದರೆ ಪುನೀತ್ ಅವರಿಗೆ ಆ ಅವಕಾಶ ಸಿಗಲಿಲ್ಲ. ಅದು ಬಹಳ ನೋವಿನ ಸಂಗತಿ.

heart attack

ಕೆಲವರಿಗೆ ಹೃದಯಾಘಾತ ಆದ ಸಂದರ್ಭದಲ್ಲಿ ಕೆಲವೇ ನಿಮಿಷಗಳಲ್ಲಿ ಹೃದಯದ ಬಡಿತ ನಿಂತು ಹೋಗುತ್ತೆ. ಸಾಮಾನ್ಯವಾಗಿ ಎಲ್ಲರಿಗೂ ಒಂದು ನಿಮಿಷದಲ್ಲಿ 70-80 ಬಾರಿ ಹೃದಯ ಬಡಿದುಕೊಳ್ಳುತ್ತೆ. ಸ್ವಲ್ಪ ಗಾಬರಿಯಾದರೆ 90-95 ಬಾರಿ ಬಡಿದುಕೊಳ್ಳಬಹುದು. ಹಠಾತ್ ಹೃದಯಾಘಾತ ಆದಾಗ ಕೆಲವರಿಗೆ 300, 400, 500 ತನಕವೂ ಹೃದಯ ಬಡಿದುಕೊಳ್ಳುತ್ತೆ. ಆಗ ಹೃದಯ ಅಲುಗಾಡುತ್ತೆ. ಹೃದಯದಿಂದ ಹೊರಗಡೆ ರಕ್ತವೇ ಬರುವುದಿಲ್ಲ. ಅದನ್ನು ನಾವು ವೈದ್ಯಕೀಯ ಪರಿಭಾಷೆಯಲ್ಲಿ ‘ವೆಂಟ್ರಿಕ್ಯುಲರ್ ಫಿಬ್ರಿಲೇಷನ್’ ಅಂತ ಕರೆಯುತ್ತೇವೆ. ಆಗ ಹೃದಯದ ಬಡಿತ ನಿಂತು ಹೋದಾಗ ‘ಡಿಸಿ ಶಾಕ್’ ಎಂಬ ಉಪಕರಣವನ್ನು ಎದೆಯ ಮೇಲಿಟ್ಟು ಶಾಕ್ ಕೊಟ್ಟರೆ, ಹೃದಯ ಮತ್ತೆ ಚಲನೆ ಆರಂಭಿಸುತ್ತೆ. ಅದಕ್ಕಾಗಿ ರೋಗಿ ತುರ್ತು ನಿಗಾ ಘಟಕದಲ್ಲೇ ಇರಬೇಕು. ಇದನ್ನೂ ಓದಿ: ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಪುನೀತ್: ವಸಿಷ್ಠ ಸಿಂಹ

ಕೆಲವರಿಗೆ ಆಸ್ಪತ್ರೆಗೆ ಹೋಗುವಷ್ಟು ಸಮಯ ಕೂಡ ಇರುವುದಿಲ್ಲ. ಶೇ. 5ರಷ್ಟು ಮಂದಿಗೆ ಹೃದಯಾಘಾತವಾದ ಕೆಲವೇ ನಿಮಿಷಗಳಲ್ಲಿ (5-10 ನಿಮಿಷ) ಹೃದಯದ ಬಡಿತವೇ ನಿಂತು ಹೋಗುತ್ತೆ. ಹೃದಯದೊಳಗಡೆಯೂ ಕರೆಂಟ್ ಇದೆ. ಅದು ಆಫ್ ಆಗಿಬಿಡುತ್ತೆ. ಇದನ್ನೇ ನಾವು ದಿಢೀರ್ ಕಾರ್ಡಿಯಾಕ್ ಅರೆಸ್ಟ್(ಹೃದಯ ಸ್ತಂಭನ) ಎನ್ನುತ್ತೇವೆ. ಪುನೀತ್ ರಾಜ್‍ಕುಮಾರ್ ಅವರಿಗೆ ಹೃದಯಾಘಾತವಾಗಿರುವುದು ನಿಜ. ಆಸ್ಪತ್ರೆಗೆ ಬರುವಷ್ಟರಲ್ಲಿ ಅವರ ಹೃದಯದ ಬಡಿತ ನಿಂತು ಹೋಗಿತ್ತು, ಜೀವ ಇರಲಿಲ್ಲ.

fitbeat heart rate

ಎಷ್ಟೋ ಮಂದಿ ಹೃದಯಾಘಾತವಾಗಿ ನಮ್ಮ ಆಸ್ಪತ್ರೆಗೆ ದಾಖಲಾದಾಗ ಆಂಜಿಯೋಪ್ಲಾಸ್ಟಿಯಂತಹ ಸೂಕ್ತ ಚಿಕಿತ್ಸೆ ನೀಡುತ್ತೇವೆ. ಅವರು ನಮ್ಮೊಟ್ಟಿಗೆ ಚೆನ್ನಾಗಿಯೇ ಮಾತನಾಡಿರುತ್ತಾರೆ. ಇನ್ನೆರಡು ಮೂರು ದಿನದಲ್ಲಿ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಕೂಡ ಹೇಳಿರುತ್ತೇವೆ. ಇದಾದ ನಂತರ ಒಂದೆರಡು ನಿಮಿಷ ನಾವು ಕೊಠಡಿಗೆ ಹೋಗಿ ಬರುವಷ್ಟರಲ್ಲಿ ಮತ್ತೆ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿರುತ್ತಾರೆ. ಇದನ್ನು ನಾವು “ಎಲೆಕ್ಟ್ರಿಕಲ್ ಇನ್‍ಸ್ಟೆಬಿಲಿಟಿ” ಎಂದು ಕರೆಯುತ್ತೇವೆ.

ಹೃದಯ ರಕ್ತನಾಳದಿಂದ ಹೃದಯಕ್ಕೆ ರಕ್ತ ಸರಬರಾಜಾಗುತ್ತಿರುತ್ತೆ. ಹೃದಯಾಘಾತವಾದಾಗ ರಕ್ತನಾಳ ಶೇ. 100 ರಷ್ಟು ಬ್ಲಾಕ್ ಆಗಿರಬೇಕು. ಶೇ. 60-70ರಷ್ಟು ಬ್ಲಾಕ್ ಆದಾಗ ಹೃದಯಾಘಾತವಾಗುವುದಿಲ್ಲ. ಆದರೆ ನಡೆಯುವಾಗ, ಊಟ ಮಾಡಿ ಎತ್ತರ ಪ್ರದೇಶದಲ್ಲಿ ಓಡಾಡುವಾಗ ಎದೆಯುರಿ, ಎದೆ ನೋವು ಕಾಣಿಸಿಕೊಳ್ಳಬಹುದು. ಇನ್ನೂ ಕೆಲವರಿಗೆ ಗಂಟಲು, ದವಡೆಯಲ್ಲಿ ನೋವು ಬರಬಹುದು. ಅದು ಹೃದಯಾಘಾತದ ಮುನ್ಸೂಚನೆ. ಆದರೆ ಎಲ್ಲರಿಗೂ ಈ ಮುನ್ಸೂಚನೆ ಸಿಗುವುದಿಲ್ಲ. ಶೇ. 10, 30, 50 ಹೀಗೆ.. ಕ್ರಮೇಣ ರಕ್ತನಾಳಗಳು ಬ್ಲಾಕ್ ಆಗುತ್ತಾ ಹೋದಾಗ ಹೃದಯಾಘಾತಕ್ಕೂ ಮುನ್ನ 3 ವಾರ ಅಥವಾ 3, 6 ತಿಂಗಳ ಅವಧಿಯಲ್ಲಿ ಈ ಮೇಲಿನ ಲಕ್ಷಣಗಳು ಕಾಣಿಸಿಕೊಂಡು ಮುನ್ಸೂಚನೆ ಸಿಗುತ್ತದೆ.

PUNEETH 3 3

ಕೆಲವರಿಗೆ ಹೃದಯಾಘಾತ ಆಗುವ 2 ನಿಮಿಷ ಮುಂಚೆಯೂ ಚೆನ್ನಾಗಿರುತ್ತಾರೆ. ಆಗ ರಕ್ತನಾಳ ಬ್ಲಾಕೇಜ್ ಆಗಿರುವುದಿಲ್ಲ. ಆದರೆ ರಕ್ತನಾಳದ ಒಳಗಡೆ ಕೊಲೆಸ್ಟ್ರಾಲ್ ಅಲ್ಸರ್ಸ್ ಅಂತ ಇರುತ್ತದೆ. ಅದು ಒಡೆದು ಹೋದರೆ, ಶೇ. 0 ಬ್ಲಾಕೇಜ್ ಇರುವುದು ಶೇ. 100 ಆಗಿಬಿಡುತ್ತದೆ. ಅದು ಯುವಕರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂದು ಡಾ. ಸಿ.ಎನ್.ಮಂಜುನಾಥ್ ಹೇಳುತ್ತಾರೆ.

TAGGED:DR. C.N.MANJUNATHheart attackPublic TVPuneet Rajkumarಡಾ. ಸಿ.ಎನ್. ಮಂಜುನಾಥ್ಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್ಹೃದಯಾಘಾತ
Share This Article
Facebook Whatsapp Whatsapp Telegram

Cinema news

Actor Shivamanju
ನಿರ್ದೇಶಕನಾದ ಹಾಸ್ಯ ನಟ ಶಿವಮಂಜು
Cinema Latest Sandalwood Top Stories
Brahmagantu Geetha Bharathi Bhat Marriage
ಸದ್ದಿಲ್ಲದೆ ವಿವಾಹವಾದ ಬ್ರಹ್ಮಗಂಟು ನಟಿ
Cinema Latest Sandalwood Top Stories
Dhanya Ramkumar Pruthvi Ambaar Chowkidar
ಇಷ್ಟ ಆದೆ ನೀನು ಅಂತಿದ್ದಾರೆ ಪೃಥ್ವಿ ಅಂಬಾರ್ – ಧನ್ಯ
Cinema Latest Sandalwood
bigg boss season 12 kannada Rakshita Dhruvanth is in the secret room
ಅಯ್ಯೋ ದೇವರೇ ಒಂದೇ ರೂಮಿನಲ್ಲಿ ನಿಮ್ಮ ಜೊತೆ ಹೇಗೆ ಇರೋದು?- ಸೀಕ್ರೆಟ್‌ ರೂಮಿನಲ್ಲಿ ರಕ್ಷಿತಾ ಕಣ್ಣೀರು
Cinema Latest Top Stories TV Shows

You Might Also Like

Delhi Fog Flight Cancel
Latest

ದೆಹಲಿಯಲ್ಲಿ ದಟ್ಟ ಹೊಗೆ, ಮಂಜು – 100 ವಿಮಾನಗಳು ಕ್ಯಾನ್ಸಲ್, 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

Public TV
By Public TV
8 minutes ago
Pahalgam Terror Attack 2 1
Latest

Pahalgam Terror Attack | ಚಾರ್ಜ್‌ಶೀಟ್‌ ಸಲ್ಲಿಕೆ – ಆಪರೇಷನ್‌ ಮಹಾದೇವ್‌ನಲ್ಲಿ ಹತ್ಯೆಯಾದ ಉಗ್ರರ ಹೆಸರು ಉಲ್ಲೇಖ

Public TV
By Public TV
58 minutes ago
KSRTC
Bengaluru City

ಅಪಘಾತ ರಹಿತ ಸೇವೆ ಸಲ್ಲಿಸೋ KSRTC ಚಾಲಕರಿಗೆ ಪ್ರೋತ್ಸಾಹ ಧನ ಹೆಚ್ಚಳ

Public TV
By Public TV
1 hour ago
Reliance Jio
Latest

ಹೊಸ ವರ್ಷದ ಧಮಾಕಾ: ಜಿಯೋ ಹ್ಯಾಪಿ ನ್ಯೂ ಇಯರ್ 2026 ಪ್ಲಾನ್ ಔಟ್‌

Public TV
By Public TV
1 hour ago
Sonia Gandhi Kiren Rijiju
Latest

ಕಾಂಗ್ರೆಸ್ ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ – ಸದನದಲ್ಲಿ ಸೋನಿಯಾ ಗಾಂಧಿ ಕ್ಷಮೆಗೆ ಆಗ್ರಹಿಸಿದ ಬಿಜೆಪಿ

Public TV
By Public TV
1 hour ago
Prashanth Kishore Priyanak Gandhi
Latest

3 ವರ್ಷದ ಬಳಿಕ ಪ್ರಿಯಾಂಕಾ, ಪ್ರಶಾಂತ್‌ ಕಿಶೋರ್‌ ಮಾತುಕತೆ – ಮತ್ತೆ ಕಾಂಗ್ರೆಸ್‌ ಪರ ರಣತಂತ್ರ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?