Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ

Health

ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ

Public TV
Last updated: October 31, 2021 6:09 pm
Public TV
Share
3 Min Read
PUNEET-C.N.MANJUNATH
SHARE

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಹಠಾತ್ ನಿಧನ ನಂತರ ಹೃದಯಾಘಾತ ಮತ್ತು ಹೃದಯ ಸ್ತಂಭನ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಹೃದಯಾಘಾತದ ಬಗ್ಗೆ ವೈದ್ಯರು ಸಾಕಷ್ಟು ವಿಶ್ಲೇಷಣೆ ಮಾಡುತ್ತಿದ್ದಾರೆ. ಈ ಕುರಿತು ಜಯದೇವ ಹೃದ್ರೋಗ ಆಸ್ಪತ್ರೆಯ ಡಾ. ಸಿ.ಎನ್.ಮಂಜುನಾಥ್ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

puneeth rajkumar 1 7

ಡಾ. ಸಿ.ಎನ್.ಮಂಜುನಾಥ್ ಅವರು ಹೇಳಿದ್ದೇನು..?
ಪುನೀತ್ ರಾಜ್‍ಕುಮಾರ್ ಅವರು ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿದ್ದರು. ದೈಹಿಕ ಫಿಟ್‍ನೆಸ್ ಕೂಡ ಚೆನ್ನಾಗಿತ್ತು. ಜೀವನಶೈಲಿ, ಆಹಾರ ಪದ್ಧತಿ ಉತ್ತಮವಾಗಿತ್ತು. ಅವರಿಗೆ ಹೀಗಾಗಿದ್ದು ಶಾಕ್ ಎನಿಸುತ್ತಿದೆ. ಇದನ್ನೂ ಓದಿ: ಪುನೀತ್ ನಿಧನ- ಶೀಘ್ರವೇ ಜಿಮ್, ಫಿಟ್‌ನೆಸ್‌ ಸೆಂಟರ್‌ಗಳಿಗೆ ಗೈಡ್ ಲೈನ್ಸ್

ದೇಶದಲ್ಲಿ ಸಾವಿರಾರು ಜನರಿಗೆ ಹೃದಯಾಘಾತವಾಗುತ್ತೆ. ಅವರಲ್ಲಿ ಶೇ. 99 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಹೋಗುತ್ತಾರೆ. ಆದರೆ ಪುನೀತ್ ಅವರಿಗೆ ಆ ಅವಕಾಶ ಸಿಗಲಿಲ್ಲ. ಅದು ಬಹಳ ನೋವಿನ ಸಂಗತಿ.

heart attack

ಕೆಲವರಿಗೆ ಹೃದಯಾಘಾತ ಆದ ಸಂದರ್ಭದಲ್ಲಿ ಕೆಲವೇ ನಿಮಿಷಗಳಲ್ಲಿ ಹೃದಯದ ಬಡಿತ ನಿಂತು ಹೋಗುತ್ತೆ. ಸಾಮಾನ್ಯವಾಗಿ ಎಲ್ಲರಿಗೂ ಒಂದು ನಿಮಿಷದಲ್ಲಿ 70-80 ಬಾರಿ ಹೃದಯ ಬಡಿದುಕೊಳ್ಳುತ್ತೆ. ಸ್ವಲ್ಪ ಗಾಬರಿಯಾದರೆ 90-95 ಬಾರಿ ಬಡಿದುಕೊಳ್ಳಬಹುದು. ಹಠಾತ್ ಹೃದಯಾಘಾತ ಆದಾಗ ಕೆಲವರಿಗೆ 300, 400, 500 ತನಕವೂ ಹೃದಯ ಬಡಿದುಕೊಳ್ಳುತ್ತೆ. ಆಗ ಹೃದಯ ಅಲುಗಾಡುತ್ತೆ. ಹೃದಯದಿಂದ ಹೊರಗಡೆ ರಕ್ತವೇ ಬರುವುದಿಲ್ಲ. ಅದನ್ನು ನಾವು ವೈದ್ಯಕೀಯ ಪರಿಭಾಷೆಯಲ್ಲಿ ‘ವೆಂಟ್ರಿಕ್ಯುಲರ್ ಫಿಬ್ರಿಲೇಷನ್’ ಅಂತ ಕರೆಯುತ್ತೇವೆ. ಆಗ ಹೃದಯದ ಬಡಿತ ನಿಂತು ಹೋದಾಗ ‘ಡಿಸಿ ಶಾಕ್’ ಎಂಬ ಉಪಕರಣವನ್ನು ಎದೆಯ ಮೇಲಿಟ್ಟು ಶಾಕ್ ಕೊಟ್ಟರೆ, ಹೃದಯ ಮತ್ತೆ ಚಲನೆ ಆರಂಭಿಸುತ್ತೆ. ಅದಕ್ಕಾಗಿ ರೋಗಿ ತುರ್ತು ನಿಗಾ ಘಟಕದಲ್ಲೇ ಇರಬೇಕು. ಇದನ್ನೂ ಓದಿ: ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಪುನೀತ್: ವಸಿಷ್ಠ ಸಿಂಹ

ಕೆಲವರಿಗೆ ಆಸ್ಪತ್ರೆಗೆ ಹೋಗುವಷ್ಟು ಸಮಯ ಕೂಡ ಇರುವುದಿಲ್ಲ. ಶೇ. 5ರಷ್ಟು ಮಂದಿಗೆ ಹೃದಯಾಘಾತವಾದ ಕೆಲವೇ ನಿಮಿಷಗಳಲ್ಲಿ (5-10 ನಿಮಿಷ) ಹೃದಯದ ಬಡಿತವೇ ನಿಂತು ಹೋಗುತ್ತೆ. ಹೃದಯದೊಳಗಡೆಯೂ ಕರೆಂಟ್ ಇದೆ. ಅದು ಆಫ್ ಆಗಿಬಿಡುತ್ತೆ. ಇದನ್ನೇ ನಾವು ದಿಢೀರ್ ಕಾರ್ಡಿಯಾಕ್ ಅರೆಸ್ಟ್(ಹೃದಯ ಸ್ತಂಭನ) ಎನ್ನುತ್ತೇವೆ. ಪುನೀತ್ ರಾಜ್‍ಕುಮಾರ್ ಅವರಿಗೆ ಹೃದಯಾಘಾತವಾಗಿರುವುದು ನಿಜ. ಆಸ್ಪತ್ರೆಗೆ ಬರುವಷ್ಟರಲ್ಲಿ ಅವರ ಹೃದಯದ ಬಡಿತ ನಿಂತು ಹೋಗಿತ್ತು, ಜೀವ ಇರಲಿಲ್ಲ.

fitbeat heart rate

ಎಷ್ಟೋ ಮಂದಿ ಹೃದಯಾಘಾತವಾಗಿ ನಮ್ಮ ಆಸ್ಪತ್ರೆಗೆ ದಾಖಲಾದಾಗ ಆಂಜಿಯೋಪ್ಲಾಸ್ಟಿಯಂತಹ ಸೂಕ್ತ ಚಿಕಿತ್ಸೆ ನೀಡುತ್ತೇವೆ. ಅವರು ನಮ್ಮೊಟ್ಟಿಗೆ ಚೆನ್ನಾಗಿಯೇ ಮಾತನಾಡಿರುತ್ತಾರೆ. ಇನ್ನೆರಡು ಮೂರು ದಿನದಲ್ಲಿ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಕೂಡ ಹೇಳಿರುತ್ತೇವೆ. ಇದಾದ ನಂತರ ಒಂದೆರಡು ನಿಮಿಷ ನಾವು ಕೊಠಡಿಗೆ ಹೋಗಿ ಬರುವಷ್ಟರಲ್ಲಿ ಮತ್ತೆ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿರುತ್ತಾರೆ. ಇದನ್ನು ನಾವು “ಎಲೆಕ್ಟ್ರಿಕಲ್ ಇನ್‍ಸ್ಟೆಬಿಲಿಟಿ” ಎಂದು ಕರೆಯುತ್ತೇವೆ.

ಹೃದಯ ರಕ್ತನಾಳದಿಂದ ಹೃದಯಕ್ಕೆ ರಕ್ತ ಸರಬರಾಜಾಗುತ್ತಿರುತ್ತೆ. ಹೃದಯಾಘಾತವಾದಾಗ ರಕ್ತನಾಳ ಶೇ. 100 ರಷ್ಟು ಬ್ಲಾಕ್ ಆಗಿರಬೇಕು. ಶೇ. 60-70ರಷ್ಟು ಬ್ಲಾಕ್ ಆದಾಗ ಹೃದಯಾಘಾತವಾಗುವುದಿಲ್ಲ. ಆದರೆ ನಡೆಯುವಾಗ, ಊಟ ಮಾಡಿ ಎತ್ತರ ಪ್ರದೇಶದಲ್ಲಿ ಓಡಾಡುವಾಗ ಎದೆಯುರಿ, ಎದೆ ನೋವು ಕಾಣಿಸಿಕೊಳ್ಳಬಹುದು. ಇನ್ನೂ ಕೆಲವರಿಗೆ ಗಂಟಲು, ದವಡೆಯಲ್ಲಿ ನೋವು ಬರಬಹುದು. ಅದು ಹೃದಯಾಘಾತದ ಮುನ್ಸೂಚನೆ. ಆದರೆ ಎಲ್ಲರಿಗೂ ಈ ಮುನ್ಸೂಚನೆ ಸಿಗುವುದಿಲ್ಲ. ಶೇ. 10, 30, 50 ಹೀಗೆ.. ಕ್ರಮೇಣ ರಕ್ತನಾಳಗಳು ಬ್ಲಾಕ್ ಆಗುತ್ತಾ ಹೋದಾಗ ಹೃದಯಾಘಾತಕ್ಕೂ ಮುನ್ನ 3 ವಾರ ಅಥವಾ 3, 6 ತಿಂಗಳ ಅವಧಿಯಲ್ಲಿ ಈ ಮೇಲಿನ ಲಕ್ಷಣಗಳು ಕಾಣಿಸಿಕೊಂಡು ಮುನ್ಸೂಚನೆ ಸಿಗುತ್ತದೆ.

PUNEETH 3 3

ಕೆಲವರಿಗೆ ಹೃದಯಾಘಾತ ಆಗುವ 2 ನಿಮಿಷ ಮುಂಚೆಯೂ ಚೆನ್ನಾಗಿರುತ್ತಾರೆ. ಆಗ ರಕ್ತನಾಳ ಬ್ಲಾಕೇಜ್ ಆಗಿರುವುದಿಲ್ಲ. ಆದರೆ ರಕ್ತನಾಳದ ಒಳಗಡೆ ಕೊಲೆಸ್ಟ್ರಾಲ್ ಅಲ್ಸರ್ಸ್ ಅಂತ ಇರುತ್ತದೆ. ಅದು ಒಡೆದು ಹೋದರೆ, ಶೇ. 0 ಬ್ಲಾಕೇಜ್ ಇರುವುದು ಶೇ. 100 ಆಗಿಬಿಡುತ್ತದೆ. ಅದು ಯುವಕರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂದು ಡಾ. ಸಿ.ಎನ್.ಮಂಜುನಾಥ್ ಹೇಳುತ್ತಾರೆ.

TAGGED:DR. C.N.MANJUNATHheart attackPublic TVPuneet Rajkumarಡಾ. ಸಿ.ಎನ್. ಮಂಜುನಾಥ್ಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್ಹೃದಯಾಘಾತ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

mekedatu dam
Latest

ಮೇಕೆದಾಟು ಯೋಜನೆ – ವನ್ಯಜೀವಿ ಅನುಮೋದನೆಗಾಗಿ ರಾಜ್ಯ ಸರ್ಕಾರದಿಂದ ಪ್ರತ್ಯೇಕ ಪ್ರಸ್ತಾವ

Public TV
By Public TV
4 minutes ago
Stone pelting at Bagalkot fish and vegetable market police resort to lathi charge Stone Pelting At Shivaji Jayanti Procession Row
Bagalkot

ಬಾಗಲಕೋಟೆಯ ಫಿಶ್‌, ತರಕಾರಿ ಮಾರ್ಕೆಟ್‌ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

Public TV
By Public TV
9 minutes ago
PM Modi Tarique Rahman
Latest

ಭಾರತ-ಬಾಂಗ್ಲಾದೇಶ ಸಂಬಂಧಗಳಲ್ಲಿ ಸುಧಾರಣೆ – ವೀಸಾ ಸೇವೆಗಳ ಪುನಾರಂಭ ಬಗ್ಗೆ ಚರ್ಚೆ

Public TV
By Public TV
19 minutes ago
Indian Youth Congress protested at Bharat Mandapam during the India AI Impact Summit 2026 Delhi
Latest

ಜಾಗತಿಕ AI ಶೃಂಗದಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು

Public TV
By Public TV
46 minutes ago
kalaburagi Exam
Crime

ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ

Public TV
By Public TV
1 hour ago
Eshwar Khandre bhagwant khooba
Bidar

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?