ಇಂದು ಸಂಜೆಯೇ ನಟ  ಪುನೀತ್ ಅಂತ್ಯಕ್ರಿಯೆ

Public TV
1 Min Read
PUNEET

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಇದೀಗ ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

puneeth rajkumar 2 1

ಚಂದನವನದ ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 5.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆಗೊಳಿಸಲಾಗಿದ್ದು, ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ.  ಇದನ್ನೂ ಓದಿ:   ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ

puneeth 2

ಹೀಗಾಗಿ ಕುಟುಂಬಸ್ಥರು 3 ಗಂಟೆಯ ಬಳಿಕ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬರದಂತೆ ಮನವಿ ಮಾಡಿದ್ದಾರೆ. ಪುನೀತ್ ಪುತ್ರಿ ಧ್ರುತಿ ನ್ಯೂಯಾರ್ಕ್‍ನಿಂದ ದೆಹಲಿಗೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ. ಧ್ರುತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಆಪ್ತವಲಯಕ್ಕಷ್ಟೇ ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ

Share This Article
Leave a Comment

Leave a Reply

Your email address will not be published. Required fields are marked *