ರಾಯಚೂರು: ಪುನೀತ್ ರಾಜಕುಮಾರ ಹಠಾತ್ ನಿಧನರಾದ ಹಿನ್ನೆಲೆ ಜಿಲ್ಲೆಯ ಅಭಿಮಾನಿಗಳಿಬ್ಬರು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಯುವಕ ಬಸನಗೌಡ ಹಾಗೂ ಯಾಪಲಪರ್ವಿ ಗ್ರಾಮದ ಯುವಕ ಮಹಮ್ಮದ್ ರಫಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ತಂದೆ ಡಾ. ರಾಜ್ ಬಗ್ಗೆ ಪುಸ್ತಕ ಬರೆದಿದ್ದ ಅಪ್ಪು
ಪುನೀತ್ ರಾಜಕುಮಾರ್ ನಿಧನ ಹೊಂದಿದ ಸುದ್ದಿ ಕೇಳಿ ತಮ್ಮ ಮನೆಗಳಲ್ಲೇ ವಿಷ ಸೇವನೆ ಮಾಡಿದ್ದಾನೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಂದೆಯಂತೆ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗ್ಬಾರ್ದು ಅನ್ನೋ ವ್ಯಕ್ತಿತ್ವ ಅಪ್ಪುದು: ವಿ. ಮನೋಹರ್
ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಗಳಾಗಿದ್ದ ಹಿನ್ನೆಲೆ ದುಃಖ ತಡೆಯಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಭಿಮಾನಿಗಳಿಬ್ಬರು ಚಿಕಿತ್ಸೆಗೆ ಸ್ಪಂದಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಂಧನೂರು ಗ್ರಾಮೀಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.