ಬೆಂಗಳೂರು: ಇವತ್ತು ನಾನು ನಿರ್ದೇಶಕನಾಗಿರಲು ಅವರೇ ಕಾರಣ. ಒಂದು ವರ್ಷ ಹೇಗೆ ಕಳೆದಿದೆ ಅನ್ನೋದೆ ಗೊತ್ತಾಗುತ್ತಿಲ್ಲ ಎಂದು ಜೇಮ್ಸ್ ನಿರ್ದೇಶಕ (James Director) ಮಹೇಶ್ ಬಾಬು (Mahesh Babu) ಹೇಳಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪುನೀತ್ (Puneeth Raj Kumar) ಸರ್ ಇಲ್ಲ ಅನ್ನೋದನ್ನ ಇನ್ನೂ ನಂಬೋಕೆ ಆಗುತ್ತಿಲ್ಲ. ನಾನು ಕೂಡ ಸಾಕಷ್ಟು ಚಿತ್ರಗಳಲ್ಲಿ ಅವರ ಜೊತೆ ಕೆಲಸ ಮಾಡಿದೆ. ಇವತ್ತು ನಾನು ನಿರ್ದೇಶಕನಾಗಿರಲು ಅವರೇ ಕಾರಣ. ಒಂದು ವರ್ಷ ಹೇಗೆ ಕಳೆದಿದೆ ಅನ್ನೋದೆ ಗೊತ್ತಾಗುತ್ತಿಲ್ಲ. ಅವರು ಇದ್ದಗಲೂ ಸಾಕಷ್ಟು ಜನರಿಗೆ ಮಾದರಿಯಾಗಿದ್ರು, ಅಗಲಿದ ಬಳಿಕವು ಸಾಕಷ್ಟು ಜನರಿಗೆ ಮಾದರಿಯಾಗಿದ್ದಾರೆ. ಗಂಧದಗುಡಿ ಮೂಲಕವು ಸಾಕಷ್ಟು ಜನರಿಗೆ ಪ್ರೇರೇಪಿತರಾಗಿದ್ದಾರೆ ಎಂದರು.
ಇದೇ ವೇಳೆ ನಿರ್ದೇಶಕ ಚೇತನ್ (Director Chetan) ಮಾತನಾಡಿ, ಕೊನೆಯ ಚಿತ್ರ ನಿರ್ದೇಶನ ಸಂದರ್ಭದಲ್ಲಿ ಅಪ್ಪು ಸರ್ ಕೊನೆಯ ದಿನಗಳಲ್ಲಿ ನಾನು ಜೊತೆಗಿದ್ದೆ. ಅಗಲಿಕೆಗೂ ಮೂರು ದಿನ ಮುನ್ನ ಅವರ ಮನೆಯಲ್ಲೇ ಫೋಟೋಶೂಟ್ ಮಾಡಿದ್ದೆವು. ಒಂದು ವರ್ಷ ಆಗಿದ್ದೆ ಗೊತ್ತಾಗಲಿಲ್ಲ. ಅಪ್ಪು ಸರ್ ಎಲ್ಲೂ ಹೋಗಿಲ್ಲ. ನಮ್ಮ ಮನದಲ್ಲೇ ಇದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಯಾರ ಹೊಟ್ಟೆಯಲ್ಲಾದ್ರೂ ಮತ್ತೊಮ್ಮೆ ಹುಟ್ಟಿ ಬಾರಪ್ಪ- ವೃದ್ಧೆ ಕಣ್ಣೀರು
ಅಪ್ಪು ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಅಪ್ಪು ಸಮಾಧಿಯತ್ತ ಅಭಿಮಾನಿಗಳ ದಂಡೇ ಹರಿದುಬರುತ್ತಿದೆ. ಕಳೆದ ವರ್ಷ ಅಕ್ಟೋಬರ್ 29ರಂದು ಹೃದಯ ಸ್ತಂಭನಕ್ಕೆ ಒಳಗಾಗಿ ಅಪ್ಪು ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.