ಕೋಲಾರ: ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಟ್ಟಿದ್ದ ಬಡಾವಣೆ ನಾಮಫಲಕವನ್ನು ದುಷ್ಕರ್ಮಿಗಳು ಜೆಸಿಬಿಯಿಂದ ರಾತ್ರೋರಾತ್ರಿ ಧ್ವಂಸ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದೇಶಿಹಳ್ಳಿ ಗ್ರಾಮದಲ್ಲಿ ಕಳೆದ ಹಲವು ವರ್ಷಗಳ ಹಿಂದೆ ಮಾಜಿ ಪುರಸಭಾ ಸದಸ್ಯ ಮುರಗಯ್ಯ ಎಂಬುವರು ನಿರ್ಮಾಣ ಮಾಡಿದ್ದ ಬಡಾವಣೆಗೆ ಯಾವುದೇ ಹೆಸರು ಇಟ್ಟಿರಲಿಲ್ಲ. ಆದರೆ ಬಡಾವಣೆ ನಿವಾಸಿಗಳೆಲ್ಲಾ ನಿರ್ಧಾರ ಮಾಡಿ ಇತ್ತೀಚೆಗೆ ಕೆಸರನಹಳ್ಳಿ ಪಂಚಾಯತಿಗೆ ಮನವಿ ಪತ್ರ ಕೊಟ್ಟು ಬಡಾವಣೆಗೆ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಡಲು ಅನುಮತಿ ಕೋರಿದ್ದರು. ನಂತರ ಪಂಚಾಯತಿ ಅಧಿಕಾರಿಗಳ ಮೌಖಿಕ ಒಪ್ಪಿಗೆ ಹಾಗೂ ಆಶ್ವಾಸನೆ ಮೇರೆಗೆ ನಾಮಫಲಕ ಅಳವಡಿಸಿದ್ದರು. ಇದನ್ನೂ ಓದಿ: ತಲೆಕೂದಲು ತೆಗೆದ ಫೋಟೋ ಶೇರ್ ಮಾಡಿ ಶಾಕಿಂಗ್ ಸುದ್ದಿ ಕೊಟ್ಟ ಮೋಹಿನಿ ನಟಿ
ಭಾನುವಾರ ರಾತ್ರಿ ಬಡಾವಣೆ ನಿರ್ಮಾಣ ಮಾಡಿದ್ದ ಮಾಜಿ ಪುರಸಭೆ ಸದಸ್ಯ ಮುರಗಯ್ಯ ಜೆಸಿಬಿ ಕಳುಹಿಸಿ ಬೋರ್ಡ್ ಧ್ವಂಸ ಮಾಡಿ ತೆರವು ಮಾಡಿಸಿದ್ದಾರೆ. ಈ ವಿಷಯ ತಿಳಿದ ಬಡಾವಣೆ ನಿವಾಸಿಗಳು ರಾತ್ರಿಯೇ ನಾಮಫಲಕವನ್ನು ತೆರೆವು ಮಾಡದಂತೆ ಪ್ರತಿರೋಧ ಒಡ್ಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಬಂಗಾರಪೇಟೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಜೆಸಿಬಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬಡಾವಣೆ ನಿವಾಸಿಗಳು ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲು ಮಾಡಿಕೊಂಡಿರುವ ಬಂಗಾರಪೇಟೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪುನೀತ್ ಸಿನಿಮಾದ ಕಥೆಗೆ ಯುವರಾಜ್ ಕುಮಾರ್ ನಾಯಕ?