ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಪನೀತ್ ಅವರ ಮಗಳು ಧೃತಿ ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ. ಅವರು ಬರಲು ಇನ್ನೂ ಸಮಯ ತೆಗೆದುಕೊಳ್ಳುತ್ತದೆ. 5.30 ನಂತರ ಅಂತ್ಯಕ್ರಿಯೆ ಮಾಡಲು ಸಾಧ್ಯವಿಲ್ಲ. ಯಾಕಂದರೆ ಜಾಗ ತುಂಬಾ ಕಿರಿದಾಗಿದ್ದು, ಕತ್ತಲಾದರೆ ಕಷ್ಟ ಸಾಧ್ಯ. ಹೀಗಾಗಿ ಪುನೀತ್ ಅವರ ಸಹೋದರ ಶಿವರಾಜ್ಕುಮಾರ್ ಅವರ ಬಳಿ ಹಾಗೂ ಕುಟುಂಬದ ಜೊತೆಗೆ ಚರ್ಚೆ ಮಾಡಿ ನಾಳೆ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಮಾಡಲಾಗಿದೆ. ನಾಳೆವರೆಗೂ ಅಭಿಮಾನಿಗಳಿಗೆ ಬರಲು ಅವಕಾಶ ನೀಡಲಾಗಿದೆ. ದಯವಿಟ್ಟು ನೀವು ಸಹಕರಿಸಿ ಎಂದು ಬೊಮ್ಮಾಯಿ ಅವರು ಹೇಳಿದ್ದಾರೆ. ಇದನ್ನೂ ಓದಿ: ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ
ಚಂದನವನದ ದೊಡ್ಮನೆ ಹುಡುಗ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ನೆಚ್ಚಿನ ನಟ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ನಾಳೆವರೆಗೂ ಬರಲು ಅವಕಾಶ ನೀಡಲಾಗಿದೆ. ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಇದನ್ನೂ ಓದಿ: ರಾಜಕುಮಾರನಂತೆ ಬಾಳಬೇಕಿದ್ದ ನನ್ನ ತಮ್ಮ ಇನ್ನಿಲ್ಲ ಅಂತಂದ್ರೆ ನಂಬಲು ಅಸಾಧ್ಯ: ಸುಧಾರಾಣಿ
ಪುನೀತ್ ಪುತ್ರಿ ಧ್ರುತಿ ನ್ಯೂಯಾರ್ಕ್ನಿಂದ ದೆಹಲಿಗೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ. ಧ್ರುತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಆಪ್ತವಲಯಕ್ಕಷ್ಟೇ ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ