ಜಂಬೂ ಸವಾರಿ: ಚಾಮರಾಜನಗರ ಪ್ರತಿನಿಧಿಸುವ ಸ್ತಬ್ಧ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್

Public TV
1 Min Read
FotoJet 24

ಮೈಸೂರಿನ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. ವಿಶ್ವವಿಖ್ಯಾತಿ ಜಂಬೂ ಸವಾರಿಯಲ್ಲಿ ನಾನಾ ಇಲಾಖೆಗಳ ಹಾಗೂ ಜಿಲ್ಲೆಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಇರುತ್ತವೆ. ನಾಡು, ನುಡಿ, ಸಂಸ್ಕೃತಿ, ಸಾಂಸ್ಕೃತಿಕ ರೂಪಕಗಳನ್ನು ಬಿಂಬಿಸುವಂತಹ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಈ ಬಾರಿ ಪುನೀತ್ ರಾಜ್ ಕುಮಾರ್ ಕೂಡ ಸ್ತಬ್ಧ ಚಿತ್ರ ರೂಪದಲ್ಲಿ ಇರಲಿದ್ದಾರೆ.

PUNEETH RAJKUMAR

ಚಾಮರಾಜನಗರವನ್ನು ಪ್ರತಿನಿಧಿಸುವ ಸ್ತಬ್ಧ ಚಿತ್ರದಲ್ಲಿ ಈ ಬಾರಿ ಪುನೀತ್ ರಾಜ್ ಕುಮಾರ್ ಕಾಣಿಸಿಕೊಳ್ಳುತ್ತಿದ್ದು, ಈ ಮೂಲಕ ಮೇರು ನಟನಿಗೆ ಗೌರವ ಸಲ್ಲಿಸಲಾಗುತ್ತಿದೆ. ಡಾ.ರಾಜ್ ಕುಟುಂಬವು ಇದೇ ಭಾಗದವರು ಆಗಿರುವುದರಿಂದ ಜಿಲ್ಲಾಡಳಿತ ಇಂಥದ್ದೊಂದು ನಿರ್ಧಾರ ತಗೆದುಕೊಂಡಿದೆ. ಈ ಬಾರಿಯ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಪುನೀತ್ ಅವರ ಸ್ತಬ್ಧ ಚಿತ್ರ ಗಮನ ಸೆಳೆಯಲಿದೆ. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ

PUNEETH 1

ಪುನೀತ್ ರಾಜ್ ಕುಮಾರ್ ಅಗಲಿಕೆ ಇದೇ ತಿಂಗಳು ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂಥದ್ದೊಂದು ಗೌರವಕ್ಕೆ ಚಾಮರಾಜನಗರ ನಿರ್ಧಾರ ತಗೆದುಕೊಳ್ಳಲಾಗಿದೆ. ಅಲ್ಲದೇ ಪುನೀತ್ ಅವರ ವ್ಯಕ್ತಿತ್ವವನ್ನು ಬಿಂಬಿಸುವಂತಹ ಕೆಲಸವನ್ನೂ ಈ ಸ್ತಬ್ಧ ಚಿತ್ರದ ಮೂಲಕ ಮಾಡಲಾಗಿದೆ. ನಾನಾ ಕಲಾ ಪ್ರಕಾರಗಳ, ಮೇರು ವ್ಯಕ್ತಿಗಳ ಸ್ತಬ್ಧ ಚಿತ್ರಗಳು ಕೂಡ ಈ ಮೆರವಣಿಗೆಯ ಅಂದವನ್ನು ಮತ್ತಷ್ಟು ಹೆಚ್ಚಿಸಲಿವೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *