Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಕೊನೆಯದಾಗಿ ವಿಶೇಷ ಪೋಸ್ಟ್ ಮಾಡಿದ್ದ ಅಪ್ಪು

Public TV
Last updated: October 29, 2021 9:01 pm
Public TV
Share
2 Min Read
puneeth rajkumar 1 1
SHARE
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಕೊನೆಯದಾಗಿ ಪೋಸ್ಟ್ ಮಾಡಿದ್ದರು.
ಉತ್ತರ ಕನ್ನಡ ಜಿಲ್ಲೆಗೂ ನಟ ಪುನೀತ್ ರಾಜ್‍ಕುಮಾರ್ ಅವರಿಗೂ ಅವಿನಾಭಾವ ಸಂಬಂಧವಿದ್ದು, ಫೆಬ್ರವರಿ ತಿಂಗಳಲ್ಲಿ ಜಿಲ್ಲೆಯಲ್ಲಿ ಡಾಕ್ಯುಮೆಂಟರಿ ಚಿತ್ರೀಕರಣಕ್ಕೆ ಈ ಭಾಗಕ್ಕೆ ಬಂದು ಇಲ್ಲಿನ ಸೌಂದರ್ಯದ ಬಗ್ಗೆ ಮೂಕ ವಿಸ್ಮಿತರಾಗಿದ್ದರು.
ಬುಧವಾರ ಮುರುಡೇಶ್ವರದಲ್ಲಿ ತಾವು ಸ್ಕೂಬಾ ಡೈ ಮಾಡಿದ ಹಾಗೂ ಡಾಕ್ಯುಮೆಂಟರಿ ಚಿತ್ರೀಕರಣದ ಜಿಲ್ಲೆಯ ಪೋಸ್ಟ್‌  ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಿಸಿದ್ದ ಡಾಕ್ಯುಮೆಂಟರಿಯ ಬಿಡುಗಡೆಗೆ ಎರಡೇ ದಿನ ಇರುವಾಗ ಅವರ ಅಗಲಿಕೆ ದೊಡ್ಡ ನೋವು ತಂದಿದೆ.

ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.
ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು.
ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು.
ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.
ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ. @amoghavarsha @AJANEESHB @PRK_Productions @PRKAudio #mudskipper pic.twitter.com/ncE6CxOQrg

— Puneeth Rajkumar (@PuneethRajkumar) October 27, 2021

ಹಸಿರಿನ ನೆಲದಲ್ಲಿ ಪುನೀತ್ ಸಂಬಂಧ 
ಪುನೀತ್ ರಾಜ್‍ಕುಮಾರ್‌ಗೆ ಉತ್ತರ ಕನ್ನಡವೆಂದರೆ ಬಹಳ ಪ್ರೀತಿ. ಇಲ್ಲಿನ ನಿಸರ್ಗ ಸೌಂದರ್ಯ, ಕಡಲತೀರ, ಜಲಪಾತಗಳ ಸೊಬಗನ್ನು ಇಷ್ಟಪಡುತಿದ್ದ ಅವರು ಕುಟುಂಬ ಸಮೇತರಾಗಿ ಆಗಮಿಸಿ ಇಲ್ಲಿ ಸಮಯ ಕಳೆದಿದ್ದರು. ಹೀಗಾಗಿ ಈ ವರ್ಷದ ಜನವರಿ, ಫೆಬ್ರವರಿಯಲ್ಲಿ ಪುನೀತ್ ಹೆಚ್ಚಿನ ಸಮಯ ಉತ್ತರ ಕನ್ನಡದಲ್ಲೇ ಕಳೆದಿದ್ದರು.
ಜಿಲ್ಲೆಗೆ ಭೇಟಿ ನೀಡಿದ್ದ ಅವರು ಕುಮಟಾ, ಗೋಕರ್ಣ, ಮುರುಡೇಶ್ವರ, ಜೊಯಿಡಾ ತಾಲೂಕಿನಲ್ಲಿ ತಮ್ಮ ತಂಡದೊಂದಿಗೆ ತಿರುಗಾಡಿ ಡಾಕ್ಯುಮೆಂಟರಿಗಾಗಿ ಚಿತ್ರೀಕರಣ ನಡೆಸಿದ್ದರು. ಕಡಲತೀರಗಳಲ್ಲಿ ಓಡಾಡಿ, ಸ್ಟಂಟ್‍ಗಳನ್ನೂ ಮಾಡಿದ್ದರು. ಗೋಕರ್ಣಕ್ಕೆ ಡಾಕ್ಯುಮೆಂಟರಿ ಚಿತ್ರೀಕರಣಕ್ಕಾಗಿ ಭೇಟಿ ನೀಡಿದ್ದ ಪುನೀತ್ ಸಾಮಾನ್ಯರಂತೆ ಕಡಲತೀರದಲ್ಲಿ ಅಡ್ಡಾಡಿದ್ದರು. ತೀರದ ಹೋಟೆಲ್‍ಗಳಲ್ಲಿ ಖಾದ್ಯಗಳನ್ನು ಸವಿಯುತ್ತಾ ಕಾಲ ಕಳೆದಿದ್ದರು. ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀಮಹಾಬಲೇಶ್ವರ ದೇವಾಲಯಕ್ಕೂ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ್ದರು.

ಮುರುಡೇಶ್ವರಕ್ಕೆ ಭೇಟಿ ನೀಡಿದ್ದ ಅವರು ನೇತ್ರಾಣಿ ದ್ವೀಪ ಪ್ರದೇಶದಲ್ಲಿ ಡಾಕ್ಯುಮೆಂಟರಿಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ನಡೆಸಿ, ಮುರುಡೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆರಳಿದ್ದರು. ನೇತ್ರಾಣಿಯಲ್ಲಿ ನಡೆದ ಚಿತ್ರೀಕರಣದ ಒಂದು ತುಣುಕನ್ನು ಪುನೀತ್ ಹತ್ತು ದಿನಗಳ ಬಳಿಕ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಗೋಕರ್ಣ ಕಡಲತೀರದಲ್ಲಿ ಮಾಡಿದ್ದ ಬ್ಯಾಕ್ ಫ್ಲಿಪ್ ಸ್ಟಂಟ್‍ಗಳನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅಭಿಮಾನಿಗಳನ್ನು ರಂಜಿಸಿದ್ದರು.
ನ.1ಕ್ಕೆ ಬಿಡುಗಡೆಯಾಗಬೇಕಿದ್ದ ಡಾಕ್ಯುಮೆಂಟರಿ
ಫೆಬ್ರವರಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಣ ಮಾಡಿದ್ದ ಡಾಕ್ಯುಮೆಂಟರಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಗಬೇಕಿತ್ತು. ಈ ಬಗ್ಗೆ ಪುನೀತ್, ‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂಬ ಸಾಲುಗಳನ್ನು ನೇತ್ರಾಣಿಯಲ್ಲಿ ಮಾಡಿದ ಸ್ಕೂಬಾ ಡೈವಿಂಗ್‍ನ ಫೋಟೋವೊಂದನ್ನು ಹಂಚಿ ಡಾಕ್ಯುಮೆಂಟರಿ ಬಿಡುಗಡೆಯ ಸಮಯ ತಿಳಿಸಿದ್ದರು.

ಈ ಡಾಕ್ಯುಮೆಂಟರಿ ಪಿಆರ್‌ಕೆ ಪ್ರೊಡಕ್ಷನ್‌ ಹಾಗೂ ಮಡ್ ಸ್ಕಿಪ್ಪರ್ಸ್ ಮೀಡಿಯಾ ಹೌಸ್‍ನಿಂದ ತಯಾರಾಗಿತ್ತು. ಆದರೆ ಡಾಕ್ಯುಮೆಂಟರಿಯಲ್ಲಿ ಏನಿತ್ತು? ಯಾಕಾಗಿ ಮಾಡಲಾಗಿತ್ತು ಎಂಬ ಬಗ್ಗೆ ಪುನೀತ್ ಆಗಲಿ, ಅವರ ತಂಡವಾಗಲಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿರಲಿಲ್ಲ. ದುರಂತ ಎನ್ನುವಂತೆ ಡಾಕ್ಯುಮೆಂಟರಿ ಬಿಡುಗಡೆಗೂ ಮುನ್ನ ಪುನೀತ್ ಅಗಲಿದ್ದಾರೆ. ಅವರು ಇಷ್ಟಪಡುವ ಉತ್ತರ ಕನ್ನಡ ಜಿಲ್ಲೆಯ ಸೊಬಗು ಅವರ ಜೀವನದ ಕೊನೆಯ ಕ್ಷಣದ ಪೋಸ್ಟ್‌ ಆಗಿದ್ದು, ಅಭಿಮಾನಿಗಳಿಗೆ ನೋವು ತಂದಿದೆ.

TAGGED:documentarykannada newsPuneeth Rajkumarsocial mediaUttara Kannadaಉತ್ತರ ಕನ್ನಡ ಜಿಲ್ಲೆನೇತ್ರಾಣಿಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
16 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
19 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
23 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

Rajat Patidar
Cricket

UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್‌ಸಿಬಿಯ ಯಶಸ್ವಿ ನಾಯಕ

Public TV
By Public TV
14 minutes ago
daily horoscope dina bhavishya
Astrology

ದಿನ ಭವಿಷ್ಯ 04-06-2025

Public TV
By Public TV
50 minutes ago
08
Belgaum

IPL Champions | ರಾಜ್ಯದೆಲ್ಲೆಡೆ ಊರ ಹಬ್ಬದಂತೆ ಆರ್‌ಸಿಬಿ ಗೆಲುವು ಸಂಭ್ರಮಿಸಿದ ಫ್ಯಾನ್ಸ್‌

Public TV
By Public TV
3 hours ago
Vitar
Cricket

IPL Champions | ಟ್ರೋಫಿ ಗೆದ್ದ ಬೆನ್ನಲ್ಲೇ ಐಪಿಎಲ್‌ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದೇನು?

Public TV
By Public TV
3 hours ago
Virat Kohli 02
Cricket

ನನ್ನ ಹೃದಯ, ಆತ್ಮ ಬೆಂಗಳೂರಿಗಾಗಿ… ಐಪಿಎಲ್‌ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡ್ತೀನಿ – ಕೊಹ್ಲಿ ಭಾವುಕ

Public TV
By Public TV
3 hours ago
RCB Win 00
Cricket

IPL Champions | ಚುಟುಕು ಕದನದಲ್ಲಿ ಈವರೆಗೆ ಚಾಂಪಿಯನ್ಸ್‌ ಪಟ್ಟ ಗೆದ್ದವರ ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ…

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?