ಅಕ್ಟೋಬರ್ 29 ಕನ್ನಡಿಗರಿಗೆ ಕರಾಳ ದಿನ. ಅಪ್ಪು ಅಗಲಿದ ದಿನವಾಗಿದ್ದು, ಇದೀಗ ಅವರ ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಸಲ್ಲಿಸಿದ್ದಾರೆ. ತಿಥಿ ಕಾರ್ಯಕ್ಕೆ ಎಡೆ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಅಪ್ಪು(Appu) ಸ್ಮಾರಕಕ್ಕೆ ಅಭಿಮಾನಿಗಳು ಕೂಡ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಅಪ್ಪು ಅಗಲಿ ಇಂದಿಗೆ 2 ವರ್ಷ- ಪುನೀತ್ ಸಮಾಧಿಗೆ ದೊಡ್ಮನೆ ಕುಟುಂಬಸ್ಥರಿಂದ ಪೂಜೆ
ಪುನೀತ್ ರಾಜ್ಕುಮಾರ್ (Puneeth Rajkumar) ಅವರು ಅಗಲಿ ಇಂದಿಗೆ 2 ವರ್ಷಗಳು ಕಳೆದಿದೆ. ಆದರೆ ಅವರ ಸಾವಿನ ನೋವಿನ ಭಾರ ಇಂದಿಗೂ ಕಮ್ಮಿಯಾಗಿಲ್ಲ. ಹೀಗಿರುವಾಗ ಅಪ್ಪು ಪುಣ್ಯ ಸ್ಮರಣೆಗೆ ಅವರ ಅವರ ಇಷ್ಟದ ಖಾದ್ಯಗಳನ್ನ ಇಟ್ಟು ರಾಘಣ್ಣ, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ಮತ್ತು ಮಕ್ಕಳಿಂದ ಪೂಜೆ ಸಲ್ಲಿಸಿದ್ದಾರೆ.
ಅಪ್ಪು ಸ್ಮಾರಕಕ್ಕೆ ಬಂದ ಅಭಿಮಾನಿಗಳಿ ಅಶ್ವಿನಿ ಪುನೀತ್ ಮತ್ತು ಯುವರಾಜ್ ಕುಮಾರ್ ಅವರು ಅನ್ನಸಂತರ್ಪಣೆ ಮಾಡುತ್ತಿದ್ದಾರೆ. ಈ ವೇಳೆ, ಧನ್ಯಾ, ಪೂರ್ಣಿಮ, ಅಪ್ಪು ಪುತ್ರಿ, ರಾಘಣ್ಣ ದಂಪತಿ ಸೇರಿದಂತೆ ಇಡೀ ಕುಟುಂಬ ಸಾಥ್ ನೀಡಿದೆ.
ಪವರ್ ಸ್ಟಾರ್ ಪುಣ್ಯ ಸ್ಮರಣೆಗೆ ಅಭಿಮಾನಿ ಬಳಗ ದೊಡ್ಡದಾಗಿ ಪ್ಲ್ಯಾನ್ ಮಾಡಿದ್ದಾರೆ. ನಮ್ಮ ಪವರ್ ಸ್ಟಾರ್ ನಮ್ಮ ಜೊತೆಯಲ್ಲಿದ್ದಾರೆ ಅಂತ ಅವರು ಇಷ್ಟಪಡುತ್ತಿದ್ದ ಕೆಲಸಗಳನ್ನ ಮಾಡುತ್ತಿದ್ದಾರೆ. ಎರಡನೇ ವರ್ಷದ ಪುಣ್ಯಸ್ಮರಣೆಗೆ ಅನ್ನದಾನ, ರಕ್ತದಾನ, ನೇತ್ರದಾನದ ಕ್ಯಾಂಪ್ ಮಾಡಲಿದ್ದಾರೆ ಅಭಿಮಾನಿಗಳು.
ಕುಟುಂಬದವರ ಪೂಜೆ ಬಳಿಕ ಅಭಿಮಾನಿ ದೇವರುಗಳು ಅಪ್ಪುಗೆ ನಮಿಸಲಿದ್ದಾರೆ. ಕೈ ಮುಗಿದು ಸ್ಮರಿಸಿದ್ದಾರೆ. ಹಬ್ಬದಂತೆ ಜನ ಆ ಜಾಗದಲ್ಲಿ ಸೇರಿದ್ದಾರೆ. ಹೂವು ಹಾಕಿ ಅಲಂಕಾರ ಮಾಡಿ ಕಣ್ಣುತುಂಬಿಕೊಂಡಿದ್ದಾರೆ.