ಪುನೀತ್ ರಾಜಕುಮಾರ್ ಸ್ಯಾಟ್ ಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿದ ಸಿಎಂ

Public TV
2 Min Read
FotoJet 2 84

ಬೆಂಗಳೂರಿನ ಮಲ್ಲೇಶ್ವರಂನ ಮಾಡೆಲ್ ಸ್ಕೂಲ್ ನಲ್ಲಿ ಪುನೀತ್ ರಾಜ್ ಕುಮಾರ್ (Puneeth Rajkumar) ಹೆಸರಿನಲ್ಲಿ ತಯಾರಾಗುತ್ತಿರುವ ಸ್ಯಾಟ್ ಲೈಟ್  ವರ್ಕ್ ಸ್ಟೇಶನ್ ನನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಉದ್ಘಾಟಿಸಿದರು (Inauguration). ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ‘ಯೋಗ್ಯವಾದ ವ್ಯಕ್ತಿ ಪುನೀತ್. ಇವತ್ತು ಅವರ ಪುಣ್ಯ ಸ್ಮರಣೆ ದಿನ. ಪುನೀತ್ ಸದಾ ಪ್ರಯೋಗಾತ್ಮಕವಾಗಿದ್ದರು. ಸೃಜನಶೀಲವಾಗಿದ್ದರೂ, ಹೊಸದನ್ನೂ ಹುಡುಕುತ್ತಿದ್ದರು’ ಎಂದು ಗುಣಗಾನ ಮಾಡಿದರು.

FotoJet 3 61

ಮುಂದುವರೆದು ಮಾತನಾಡಿದ ಸಿಎಂ, ‘ಪುನೀತ್ ಹೆಸರಿನಲ್ಲಿ ಸ್ಯಾಟ್ ಲೈಟ್ ಉದ್ಘಾಟನೆ ಮಾಡುವ ಮೂಲಕ ಅವರ ಕೀರ್ತಿಯನ್ನು ಆಕಾಶದ ಎತ್ತರಕೆ ತೆಗೆದುಕೊಂಡು ಹೋಗುವ ಕೆಲಸ ಮಲ್ಲೇಶ್ವರಂ ಸ್ಕೂಲ್ ಮಾಡ್ತಾ ಇದೆ. ಪುನೀತ್ ಹೆಸರಲ್ಲಿ ದೊಡ್ಡಮಟ್ಟದ ಸ್ಯಾಟ್ ಲೈಟ್ (SatLight)ಮಾಡಿದ್ರೆ ರಾಜ್ಯ ಸರ್ಕಾರದಿಂದಲೇ ಹಣ ಭರಿಸುತ್ತೇವೆ’ ಎಂದಿದ್ದಾರೆ. ಇದನ್ನೂ ಓದಿ:ಕಾಂತಾರ ‘ವರಾಹ ರೂಪಂ’ ಹಾಡಿಗೆ ಕೊಯಿಕ್ಕೋಡು ಕೋರ್ಟ್ ತಡೆಯಾಜ್ಞೆ

FotoJet 1 97

‘ಪುನೀತ್ ಅವರು ನಗುವಿನ ಮೂಲಕ ಎಲ್ಲರ ದುಃಖ  ದುಮ್ಮಾನಗಳನ್ನು ದೂರ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಸದಾ ಹೊಸತನ, ಪ್ರಯೋಗ ಮಾಡುವ ಅಂತಃ ಕರಣ ಇರುವ ವ್ಯಕ್ತಿ. ಅವರ ಪರೋಪಕಾರಿ ಕೆಲಸ ಮಾಡಿದ್ದಾರೆ. ಪುನೀತ್ ನಮ್ಮ‌ ನಡುವೆಯೇ  ಇದ್ದಾರೆ ಎಂದು ಪುನೀತ್ ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡರು’ ಬಸವರಾಜ ಬೊಮ್ಮಾಯಿ.

FotoJet 123

ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ದಕ್ಷಿಣ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಇಬ್ಬರಿಗೂ ಕರ್ನಾಟಕದ ನಂಟಿರುವುದು ಮತ್ತೊಂದು ವಿಶೇಷ.

FotoJet 4 21

ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅವರಿಗೆ ಕರ್ನಾಟಕ ಸರಕಾರವು ಆಹ್ವಾನ ನೀಡಿದ್ದು, ಜ್ಯೂನಿಯರ್ ಎನ್.ಟಿ.ಆರ್ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ರಜನಿಕಾಂತ್ ಅವರ ಒಪ್ಪಿಗೆ ಪತ್ರ ಇನ್ನಷ್ಟೇ ಸಿಗಬೇಕಿದೆ. ಈ ಕಾರ್ಯಕ್ರವನ್ನು ನವೆಂಬರ್ 1 ರಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದು, ಡಾ.ರಾಜ್ ಕುಟುಂಬ ಹಾಗೂ ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *