ಬೆಂಗಳೂರು: ಕಾಫಿ ಡೇ ಮಾಲೀಕ ವಿ.ಜಿ ಸಿದ್ಧಾರ್ಥ್ ಅವರು ಸೋಮವಾರ ರಾತ್ರಿಯಿಂದ ದಿಢೀರ್ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಎಸ್.ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದಾರೆ.
ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಪುನೀತ್ ರಾಜ್ಕುಮಾರ್ ಅವರು ಎಸ್. ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿ ಅವರಿಗೂ ಹಾಗೂ ಅವರ ಕುಟುಂಬಸ್ಥರಿಗೆ ಸಮಾಧಾನ ಮಾಡಿ ಧೈರ್ಯ ಹೇಳಿದ್ದಾರೆ.
ಸೋಮವಾರ ರಾತ್ರಿಯಿಂದಲೇ ಅನೇಕ ಗಣ್ಯರು ಎಸ್.ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಹಾಗೆಯೇ ಇಂದು ಮುಖ್ಯಮಂತ್ರಿಗಳು ಭೇಟಿ ನೀಡಿ ಕೃಷ್ಣ ಹಾಗೂ ಅವರ ಕುಟುಂಬಸ್ಥರಿಗೆ ಸಮಾಧಾನ ಮಾಡಿದ್ದಾರೆ. ಆತಂಕಕ್ಕೊಳಗಾಗಬೇಡಿ, ಸಿದ್ಧಾರ್ಥ್ ಅವರು ಸುರಕ್ಷಿತವಾಗಿ ವಾಪಸ್ ಬರುತ್ತಾರೆ ಎಂಬುದಾಗಿ ಹೇಳುತ್ತಾ ಬಿಎಸ್ವೈ ಅವರು ಕೃಷ್ಣ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.
ಎಸ್.ಎಂ ಕೃಷ್ಣ ಅವರ ಮನೆಗೆ ಕಟ್ಟಾ ಸುಬ್ರಮಣ್ಯ ನಾಯ್ಡು, ಡಿ.ಕೆ ಶಿವಕುಮಾರ್, ಎಂ.ಬಿ ಪಾಟೀಲ್, ಆರ್.ವಿ.ದೇಶಪಾಂಡೆ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಸಮಾಧಾನ ಮಾಡುತ್ತಿದ್ದಾರೆ.