ಮತಾಂತರ ತಡೆಗೆ ಕಾನೂನು ಅಗತ್ಯ, ಅದು ದುರುಪಯೋಗವಾಗ್ಬಾರ್ದು: ಕೇಜ್ರಿವಾಲ್

Public TV
1 Min Read
Punjab Chandigarh Arvind Kejriwal 1

ಚಂಡೀಗಢ: ಮತಾಂತರದ ಕುರಿತು ಕಾನೂನು ರಚಿಸಬೇಕು. ಆದರೆ ಅದರ ಹೆಸರಿನಲ್ಲಿ ಯಾರಿಗೂ ಕಿರುಕುಳ ನೀಡಬಾರದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಧರ್ಮವು ಪ್ರತಿಯೊಬ್ಬರ ಖಾಸಗಿ ವಿಷಯವಾಗಿದೆ. ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಪೂಜಿಸುವ ಹಕ್ಕಿದೆ. ಆದರೆ ಒತ್ತಾಯಪೂರ್ವಕವಾಗಿ ಮತಾಂತರ ಮಾಡುವುದು ತಪ್ಪು. ಅಂತಹ ಮತಾಂತರ ತಡೆಗೆ ಕಾನೂನು ರಚಿಸುವುದು ಅತ್ಯವಶ್ಯವಾಗಿದೆ ಎಂದು ಹೇಳಿದರು.

Punjab Chandigarh Arvind Kejriwal 2

ಮತಾಂತರದ ಹೆಸರಲ್ಲಿ ಯಾರಿಗೂ ಕಿರುಕುಳ ನೀಡಬಾರದು. ಅವರನ್ನು ಹೆದರಿಸಿ ಮತಾಂತರ ಮಾಡುವುದು ತಪ್ಪು. ಇದರ ತಡೆಗೆ ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾನೂನು ಜಾರಿಯಲ್ಲಿದೆ ಎಂದರು. ಇದನ್ನೂ ಓದಿ: ಗಾಡಿ ಟೋಯಿಂಗ್ ಮಾಡ್ತಿದ್ದ ASIಗೆ ಕಲ್ಲೇಟು- ವಿಕಲಚೇತನ ಮಹಿಳೆಗೆ ಬೂಟಿನಿಂದ ಒದ್ದ ನಾರಾಯಣ್

arvind kejriwal

ಸರ್ಕಾರವು ಅಧಿಕಾರಕ್ಕೆ ಬಂದರೆ ಮನೆ ಬಾಗಿಲಿಗೆ ತಲುಪಿಸುವ ಸೇವೆ ಹಾಗೂ ಚಿಕಿತ್ಸಾಲಯಗಳನ್ನು ಪ್ರಾರಂಭಿಸುತ್ತೇವೆ. ಜೊತೆಗೆ ಪಂಜಾಬ್‍ನಲ್ಲಿ 16000 ಕ್ಲಿನಿಕ್‍ಗಳನ್ನು ನಿರ್ಮಿಸುತ್ತೇವೆ ಮತ್ತು ಆಸ್ಪತ್ರೆಗಳನ್ನು ನವೀಕರಿಸುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಜೇಬಿಗೆ ಕತ್ತರಿ ಹಾಕಿದ್ದು ಯಾರು?: ಹರ್ಸಿಮ್ರತ್ ಕೌರ್ ಬಾದಲ್

Share This Article
Leave a Comment

Leave a Reply

Your email address will not be published. Required fields are marked *