ರೈತರು ಕೃಷಿ ತ್ಯಾಜ್ಯ ಸುಡದಿದ್ದರೆ ಪ್ರತಿ ಎಕ್ರೆಗೆ 2,500 ರೂ. ನೀಡ್ತೇವೆ ಎಂದ ಸರ್ಕಾರ

Public TV
1 Min Read
farmers agriculture waste 1

ಚಂಡೀಗಢ: ಭಾರೀ ಪ್ರಮಾಣದಲ್ಲಿ ರೈತರು ತಮ್ಮ ಜಮೀನಿನಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದರ ಪರಿಣಾಮ ರಾಜ್ಯದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಪಂಜಾಬ್ ಸರ್ಕಾರ ಹೊಸ ಉಪಾಯ ಮಾಡಿದೆ. ಕೃಷಿ ತ್ಯಾಜ್ಯ ಸುಡದೇ ಇದ್ದರೆ ಆ ರೈತರ ಪ್ರತಿ ಎಕ್ರೆಗೆ 2,500 ರೂ. ಪರಿಹಾರ ಧನವನ್ನು ನೀಡಲು ಮುಂದಾಗಿದೆ.

ಮಾಯುಮಾಲಿನ್ಯದ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಉಸಿರಾಡಲು ಜನ ತೊಂದರೆ ಪಡುತ್ತಿದ್ದಾರೆ. ಹೀಗಾಗಿ ಪಂಜಾಬ್ ಸರ್ಕಾರ ರೈತರಿಗೆ ಪರಿಹಾರ ಧನ ಘೋಷಿಸಿ ಕೃಷಿ ತ್ಯಾಜ್ಯ ಸುಡದಂತೆ ಮನವಿ ಮಾಡಿಕೊಂಡಿದೆ. ಕೃಷಿ ತ್ಯಾಜ್ಯವನ್ನು ಸುಡದೇ ಇದ್ದರೆ ಪ್ರತಿ ಎಕ್ರೆಗೆ 2,500 ರೂಪಾಯಿ ರೈತರಿಗೆ ನೀಡುವುದಾಗಿ ಹೇಳಿದೆ.

farmers agriculture waste 2

ಈ ಬಗ್ಗೆ ಕೃಷಿ ಇಲಾಖೆಯ ಕಾರ್ಯದರ್ಶಿ ಕಹಾನ್ ಸಿಂಗ್ ಪನ್ನು ಮಾತನಾಡಿ, ಬಾಸ್‍ಮತಿ ಹಾಗೂ ಇತರೆ ಭತ್ತದ ಬೆಳೆಯನ್ನು ಬೆಳೆಯುವ ರೈತರು 5 ಎಕ್ರೆ ಜಮೀನು ಹೊಂದಿದ್ದರೆ. ಅಲ್ಲಿ ಅವರು ಕೃಷಿ ತ್ಯಾಜ್ಯ ಸುಡದಿದ್ದರೆ, ಅವರ ಪ್ರತಿ ಎಕ್ರೆಗೆ 2,500 ರೂ. ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈ ಪರಿಹಾರ ಧನವನ್ನು ಪಡೆಯಲು ರೈತರು ನ. 30ರ ಒಳಗೆ ಸಂಬಂಧಪಟ್ಟ ಪಂಚಾಯ್ತಿ ವ್ಯಾಪ್ತಿಯಲ್ಲಿ ಬೇಕಾದ ದಾಖಲೆಗಳನ್ನು ಒಪ್ಪಿಸಬೇಕಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿಯೇ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ದಾಖಲೆಗಳನ್ನು ನೀಡಿದ ಬಳಿಕ ಪರಿಹಾರ ಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ ಎಂದು ಪನ್ನು ಅವರು ತಿಳಿಸಿದ್ದಾರೆ.

farmers agriculture waste

ಅಷ್ಟೇ ಅಲ್ಲದೆ ಸರ್ಕಾರದ ಆದೇಶವನ್ನು ಮೀರಿ ರೈತರು ಕೃಷಿ ತ್ಯಾಜ್ಯವನ್ನು ಸುಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಕೂಡ ನೀಡಿಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *