ಚಂಡೀಗಢ: ಪಂಜಾಬ್ನಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಂಡಾಯದ ಬಿಸಿ ತಾಗಿದ್ದು, ಆಮ್ ಆದ್ಮಿ ಪಾರ್ಟಿ (ಆಪ್) ಜೊತೆ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಕೈ ಜೋಡಿಸ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿವೆ. ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮೇಲೆ ಅಸಮಾಧಾನ ಹೊಂದಿರುವ ನವಜೋತ್ ಸಿಂಗ್ ಸಿಧು ಅವರನ್ನು ಸೆಳೆಯುವ ಪ್ರಯತ್ನವನ್ನು ಆಪ್ ನಾಯಕರು ಮಾಡುತ್ತಿದ್ದಾರೆ. ಬಹಿರಂಗವಾಗಿಯೇ ಸಿಧು ಅವರನ್ನು ಪಕ್ಷಕ್ಕೆ ಬರುವಂತೆ ಆಪ್ ನಾಯಕರು ಆಹ್ವಾನಿಸಿದ್ದಾರೆ.
ಈ ಕುರಿತು ಮಾತನಾಡಿರುವ ಆಪ್ ಶಾಸಕ ಅಮನ್ ಅರೋಡಾ, ಸಿಎಂ ಅಮರಿಂದರ್ ಸಿಂಗ್ ಸರ್ಕಾರದ ನಾಲ್ವರು ಕಾಂಗ್ರೆಸ್ ಶಾಸಕರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಸದ್ಯ ನಮಗೆ ಕಾಂಗ್ರೆಸ್ ನ 40 ಶಾಸಕರ ಬೆಂಬಲವಿದೆ. ಕಾಂಗ್ರೆಸ್ ಮತ್ತು ಆಪ್ (19) ಶಾಸಕರು ಸೇರಿದರೆ ಬಹುಮತ (59) ನಮ್ಮದಾಗತ್ತದೆ. ಹಾಗಾಗಿ ನವಜೋತ್ ಸಿಂಗ್ ಸಿಧು ಅವರಿಗೆ ಹೊಸ ಸರ್ಕಾರ ರಚಿಸಲು ಆಹ್ವಾನಿಸುತ್ತೇನೆ. ಈ ಸಂಬಂಧ ನಾವು ಕಾಂಗ್ರೆಸ್ ಶಾಸಕರೊಂದಿಗೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭಾ ಟಿಕೆಟ್ ನಿರಾಕರಿಸಿದ್ದಕ್ಕೆ ಸಿಧು ಪತ್ನಿ ಕಾಂಗ್ರೆಸ್ಗೆ ಗುಡ್ ಬೈ
2017ರ ಫಲಿತಾಂಶ: 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 117 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77, ಶಿರೋಮಣಿ ಅಕಾಲಿ ದಳ 15 ಮತ್ತು ಆಪ್ 20, ಬಿಜೆಪಿ 3 ಮತ್ತು ಎಲ್ಐಪಿ 2ರಲ್ಲಿ ಗೆಲುವು ದಾಖಲಿಸಿತ್ತು. ಮ್ಯಾಜಿಕ್ ನಂಬರ್ ಸಹಿತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾಂಗ್ರೆಸ್, ಸರ್ಕಾರ ರಚನೆ ಮಾಡಿತ್ತು. ರಾಜ್ಯದಲ್ಲಿ ಉಪಚುನಾವಣೆ ನಡೆದ ಹಿನ್ನೆಲೆಯಲ್ಲಿ ಆಪ್ ಶಾಸಕರ ಸಂಖ್ಯೆ 20ರಿಂದ 19ಕ್ಕೆ ಇಳಿಕೆಯಾಗಿದೆ. ಸದ್ಯ ಕಾಂಗ್ರೆಸ್ ಸರ್ಕಾರ 80 ಶಾಸಕರ ಬಲವನ್ನು ಹೊಂದಿದೆ. ಇದನ್ನೂ ಓದಿ: ಪಂಜಾಬಿನಲ್ಲಿ ಕೈ ಬಂಡಾಯ – ಸಚಿವ ಸ್ಥಾನಕ್ಕೆ ಸಿಧು ರಾಜೀನಾಮೆ
ಪಂಜಾಬ್ ನಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆದಾಗನಿಂದಲೂ ಸಿಎಂ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ಶೀತನ ಸಮರ ನಡೆದುಕೊಂಡು ಬಂದಿದೆ. ಸಿಎಂ ಮುನಿಸಿಕೊಂಡ ಸಿಧು ಹಲವು ಬಾರಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿ, ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಸದ್ಯ ಆಪ್ ನಾಯಕರ ಹೇಳಿಕೆ ಪಂಜಾಬ್ ರಾಜಕೀಯ ಅಂಗಳದಲ್ಲಿ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಕ್ಯಾಪ್ಟನ್ ವಿರುದ್ಧ ಕಮೆಂಟ್, ಸಿಧುಗೆ ಅಸಮಾಧಾನ ಇದ್ರೆ ಸಚಿವ ಸ್ಥಾನ ಬಿಡಲಿ – ಪಂಜಾಬ್ ಸಚಿವ