ಶುದ್ಧ ಹಿಂದೂಗಳು ರಾಮಮಂದಿರಕ್ಕೆ ವಿರೋಧ ಮಾಡಲ್ಲ – ಸಿ.ಟಿ ರವಿ

Public TV
2 Min Read
CT RAVI

ರಾಮನಗರ: ಶುದ್ಧ ಹಿಂದೂಗಳು (Hindu) ಯಾರೂ ರಾಮಮಂದಿರಕ್ಕೆ ವಿರೋಧ ಮಾಡಲ್ಲ. ಆದರೆ ಕೆಲವರು ವಿರೋಧ ಯಾಕೆ ಮಾಡ್ತಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಹೇಳಿದ್ದಾರೆ.

ರಾಮನಗರದ (Ramanagara) ಅಚಲು ಗ್ರಾಮದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ರಾಮದೇವರ ಬೆಟ್ಟ (Ramadevara Betta) ಅಭಿವೃದ್ಧಿ ಕೇವಲ ಚುನಾವಣಾ ಗಿಮಿಕ್’ ಎಂದಿದ್ದ ಜೆಡಿಎಸ್ (JDS) ನಾಯಕರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ: ಅಶ್ವಥ್ ನಾರಾಯಣ

ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ - ಸಿಎಂಗೆ ಅಶ್ವಥ್ ನಾರಾಯಣ ಪತ್ರ

ಶುದ್ಧ ಹಿಂದೂಗಳು ರಾಮಮಂದಿರಕ್ಕೆ ವಿರೋಧ ಮಾಡಲ್ಲ. ಇಲ್ಲಿಯವರೆಗೆ ರಾಮಮಂದಿರ (Rammandir) ಕಟ್ಟಬೇಡಿ ಅಂತಾ ಯಾರನ್ನಾದರೂ ಕಟ್ಟಿಹಾಕಿದ್ರಾ? ಇಲ್ಲಿ ಅಧಿಕಾರದಲ್ಲಿದ್ದವರು ರಾಮದೇವರ ಬೆಟ್ಟ ಅಭಿವೃದ್ಧಿ ಮಾಡಿ ತೋರಿಸಬೇಕಿತ್ತು. ನಾವೂ ಹಿಂದೂ ಅಂತಾ ಹೇಳಿಕೊಳ್ಳುವವರು ಇಷ್ಟು ದಿನ ಏನ್ಮಾಡ್ತಿದ್ರು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಹವಾ – ಬೃಹತ್ ಬೈಕ್ ರ್‍ಯಾಲಿ

CT Ravi Siddaramaiah

ಸಿದ್ದರಾಮಯ್ಯಗೆ ಜಿಲೆಬಿ ಕಂಡ್ರೆ ಆಗಲ್ಲ: `ಕೋಮು ಸಂಘರ್ಷಕ್ಕೆ ಬಿಜೆಪಿ ಕಾರಣ’ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯಗೆ ಸುಳ್ಳು ಹೇಳುವುದು ಹುಟ್ಟು ಗುಣ, ಹಳೇ ಕಾಯಿಲೆ. ಅಧಿಕಾರಕ್ಕಾಗಿ ಅಹಿಂದ ರಾಜಕಾರಣ ಮಾಡಿದರು, ನಂತರ ದೂಡಿದರು. ಅವರು ಅಧಿಕಾರದಲ್ಲಿದ್ದಾಗ ಅವರಿಗೆ ಜಿಲೆಬಿ ಕಂಡರೆ ಆಗಲ್ಲ ಎಂಬ ಆರೋಪ ಇತ್ತು. ಅಂದರೆ ತಿನ್ನುವ ಜಿಲೆಬಿ ಅಲ್ಲ. ಗೌಡ, ಲಿಂಗಾಯತ, ಬ್ರಾಹ್ಮಣ ಅಂತಾ. ಆ ರಾಜಕಾರಣವನ್ನ ಸಿದ್ದರಾಮಯ್ಯ ಮಾಡ್ತಿದ್ದರು. ಈಗ ನಾನು ಕೂಡಾ ಹಿಂದೂ ಅಂತಾರೆ. ಆದರೆ ಹಿಂದೂ ಆದವರೂ ರಾಮಮಂದಿರ ಕಟ್ಟಲು ವಿರೋಧ ಮಾಡ್ತಾರಾ ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್ ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಹವಾ - ಬೃಹತ್ ಬೈಕ್ ರ್‍ಯಾಲಿ

ಹಿಂದೂ ಆದವರೂ ಟಿಪ್ಪು ಜಯಂತಿ ಆಚರಿಸಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಮಾಡ್ತಾರೆ. ಕುಂಕುಮ ಕಂಡರೆ ಆಗದವರು ಯಾವ ಸೀಮೆ ಹಿಂದೂ? ಕೇಸರಿ ಕಂಡರೆ ಅಲರ್ಜಿ ಇರೋರು ಎಲ್ಲರನ್ನ ಪ್ರೀತ್ಸೋ ಜನರಾ? ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಇದೇ. ಅದನ್ನು ದೂರ ಇಡ್ತಾರಾ? ನಮ್ಮ ಎಲ್ಲಾ ಸ್ವಾಮೀಜಿಗಳು ಧರಿಸುವ ಬಟ್ಟೆಯೂ ಕೇಸರಿ. ಇವರಿಗೆ ಅವರ ಆಶೀರ್ವಾದ ಮಾತ್ರ ಬೇಕು. ಆದ್ರೆ ಕೇಸರಿ ಕಂಡ್ರೆ ಆಗಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ – ಸಿಎಂಗೆ ಅಶ್ವಥ್ ನಾರಾಯಣ ಪತ್ರ

ಹೆಣಕ್ಕೆ ಮೂರು ಕಾಸಿನ ಬೆಲೆಯಿಲ್ಲ: `ನನ್ನ ಹೆಣ ಸಹ ಬಿಜೆಪಿಗೆ ಹೋಗಲ್ಲ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸಿ.ಟಿ.ರವಿ, ಮನುಷ್ಯನ ಹೆಣಕ್ಕೆ ಮೂರು ಕಾಸಿನ ಬೆಲೆಯಿಲ್ಲ ಎಂದು ಅವರಿಗೂ ಗೊತ್ತಿದೆ. ಹೆಣ ತಗೊಂಡು ರಾಜಕಾರಣ ಮಾಡಲು ಆಗಲ್ಲ. ಹೆಣ ಎದ್ದು ಬಂದು ವೋಟ್ ಹಾಕುತ್ತಾ? ಹೆಣವನ್ನ ಅವರ ಮನೆಯಲ್ಲೂ ಮೂರು ದಿನ ಇಟ್ಟುಕೊಳ್ಳಲ್ಲ. ಆದರೆ ಸಿದ್ದರಾಮಯ್ಯ ನೂರು ವರ್ಷ ಬದುಕಿರಲಿ. ನಮ್ಮ ಪಕ್ಷಕ್ಕೆ ಅವರ ಅವಶ್ಯಕತೆ ಇಲ್ಲ ಎಂದು ಕುಟುಕಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *