Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Ramanagara - ಶುದ್ಧ ಹಿಂದೂಗಳು ರಾಮಮಂದಿರಕ್ಕೆ ವಿರೋಧ ಮಾಡಲ್ಲ – ಸಿ.ಟಿ ರವಿ

Ramanagara

ಶುದ್ಧ ಹಿಂದೂಗಳು ರಾಮಮಂದಿರಕ್ಕೆ ವಿರೋಧ ಮಾಡಲ್ಲ – ಸಿ.ಟಿ ರವಿ

Public TV
Last updated: 2023/01/31 at 7:31 PM
Public TV
Share
2 Min Read
SHARE

ರಾಮನಗರ: ಶುದ್ಧ ಹಿಂದೂಗಳು (Hindu) ಯಾರೂ ರಾಮಮಂದಿರಕ್ಕೆ ವಿರೋಧ ಮಾಡಲ್ಲ. ಆದರೆ ಕೆಲವರು ವಿರೋಧ ಯಾಕೆ ಮಾಡ್ತಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಹೇಳಿದ್ದಾರೆ.

ರಾಮನಗರದ (Ramanagara) ಅಚಲು ಗ್ರಾಮದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ರಾಮದೇವರ ಬೆಟ್ಟ (Ramadevara Betta) ಅಭಿವೃದ್ಧಿ ಕೇವಲ ಚುನಾವಣಾ ಗಿಮಿಕ್’ ಎಂದಿದ್ದ ಜೆಡಿಎಸ್ (JDS) ನಾಯಕರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ: ಅಶ್ವಥ್ ನಾರಾಯಣ

ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ - ಸಿಎಂಗೆ ಅಶ್ವಥ್ ನಾರಾಯಣ ಪತ್ರ

ಶುದ್ಧ ಹಿಂದೂಗಳು ರಾಮಮಂದಿರಕ್ಕೆ ವಿರೋಧ ಮಾಡಲ್ಲ. ಇಲ್ಲಿಯವರೆಗೆ ರಾಮಮಂದಿರ (Rammandir) ಕಟ್ಟಬೇಡಿ ಅಂತಾ ಯಾರನ್ನಾದರೂ ಕಟ್ಟಿಹಾಕಿದ್ರಾ? ಇಲ್ಲಿ ಅಧಿಕಾರದಲ್ಲಿದ್ದವರು ರಾಮದೇವರ ಬೆಟ್ಟ ಅಭಿವೃದ್ಧಿ ಮಾಡಿ ತೋರಿಸಬೇಕಿತ್ತು. ನಾವೂ ಹಿಂದೂ ಅಂತಾ ಹೇಳಿಕೊಳ್ಳುವವರು ಇಷ್ಟು ದಿನ ಏನ್ಮಾಡ್ತಿದ್ರು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಹವಾ – ಬೃಹತ್ ಬೈಕ್ ರ್‍ಯಾಲಿ

ಸಿದ್ದರಾಮಯ್ಯಗೆ ಜಿಲೆಬಿ ಕಂಡ್ರೆ ಆಗಲ್ಲ: `ಕೋಮು ಸಂಘರ್ಷಕ್ಕೆ ಬಿಜೆಪಿ ಕಾರಣ’ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯಗೆ ಸುಳ್ಳು ಹೇಳುವುದು ಹುಟ್ಟು ಗುಣ, ಹಳೇ ಕಾಯಿಲೆ. ಅಧಿಕಾರಕ್ಕಾಗಿ ಅಹಿಂದ ರಾಜಕಾರಣ ಮಾಡಿದರು, ನಂತರ ದೂಡಿದರು. ಅವರು ಅಧಿಕಾರದಲ್ಲಿದ್ದಾಗ ಅವರಿಗೆ ಜಿಲೆಬಿ ಕಂಡರೆ ಆಗಲ್ಲ ಎಂಬ ಆರೋಪ ಇತ್ತು. ಅಂದರೆ ತಿನ್ನುವ ಜಿಲೆಬಿ ಅಲ್ಲ. ಗೌಡ, ಲಿಂಗಾಯತ, ಬ್ರಾಹ್ಮಣ ಅಂತಾ. ಆ ರಾಜಕಾರಣವನ್ನ ಸಿದ್ದರಾಮಯ್ಯ ಮಾಡ್ತಿದ್ದರು. ಈಗ ನಾನು ಕೂಡಾ ಹಿಂದೂ ಅಂತಾರೆ. ಆದರೆ ಹಿಂದೂ ಆದವರೂ ರಾಮಮಂದಿರ ಕಟ್ಟಲು ವಿರೋಧ ಮಾಡ್ತಾರಾ ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್ ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಹವಾ - ಬೃಹತ್ ಬೈಕ್ ರ್‍ಯಾಲಿ

ಹಿಂದೂ ಆದವರೂ ಟಿಪ್ಪು ಜಯಂತಿ ಆಚರಿಸಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಮಾಡ್ತಾರೆ. ಕುಂಕುಮ ಕಂಡರೆ ಆಗದವರು ಯಾವ ಸೀಮೆ ಹಿಂದೂ? ಕೇಸರಿ ಕಂಡರೆ ಅಲರ್ಜಿ ಇರೋರು ಎಲ್ಲರನ್ನ ಪ್ರೀತ್ಸೋ ಜನರಾ? ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಇದೇ. ಅದನ್ನು ದೂರ ಇಡ್ತಾರಾ? ನಮ್ಮ ಎಲ್ಲಾ ಸ್ವಾಮೀಜಿಗಳು ಧರಿಸುವ ಬಟ್ಟೆಯೂ ಕೇಸರಿ. ಇವರಿಗೆ ಅವರ ಆಶೀರ್ವಾದ ಮಾತ್ರ ಬೇಕು. ಆದ್ರೆ ಕೇಸರಿ ಕಂಡ್ರೆ ಆಗಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ – ಸಿಎಂಗೆ ಅಶ್ವಥ್ ನಾರಾಯಣ ಪತ್ರ

ಹೆಣಕ್ಕೆ ಮೂರು ಕಾಸಿನ ಬೆಲೆಯಿಲ್ಲ: `ನನ್ನ ಹೆಣ ಸಹ ಬಿಜೆಪಿಗೆ ಹೋಗಲ್ಲ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸಿ.ಟಿ.ರವಿ, ಮನುಷ್ಯನ ಹೆಣಕ್ಕೆ ಮೂರು ಕಾಸಿನ ಬೆಲೆಯಿಲ್ಲ ಎಂದು ಅವರಿಗೂ ಗೊತ್ತಿದೆ. ಹೆಣ ತಗೊಂಡು ರಾಜಕಾರಣ ಮಾಡಲು ಆಗಲ್ಲ. ಹೆಣ ಎದ್ದು ಬಂದು ವೋಟ್ ಹಾಕುತ್ತಾ? ಹೆಣವನ್ನ ಅವರ ಮನೆಯಲ್ಲೂ ಮೂರು ದಿನ ಇಟ್ಟುಕೊಳ್ಳಲ್ಲ. ಆದರೆ ಸಿದ್ದರಾಮಯ್ಯ ನೂರು ವರ್ಷ ಬದುಕಿರಲಿ. ನಮ್ಮ ಪಕ್ಷಕ್ಕೆ ಅವರ ಅವಶ್ಯಕತೆ ಇಲ್ಲ ಎಂದು ಕುಟುಕಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED: bjp, congress, CT Ravi, jds, Ramadevara Betta, ramanagara, Rammandir, siddaramaiah, ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ರಾಮದೇವರ ಬೆಟ್ಟ, ರಾಮನಗರ, ರಾಮಮಂದಿರ, ಸಿ.ಟಿ ರವಿ, ಸಿದ್ದರಾಮಯ್ಯ
Share this Article
Facebook Twitter Whatsapp Whatsapp Telegram
Share

Latest News

IPL 2023: ಮಾರ್ಕ್‌ ಮಾರಕ ಬೌಲಿಂಗ್‌, ಡೆಲ್ಲಿಗೆ ಡಿಚ್ಚಿ ಕೊಟ್ಟ ಲಕ್ನೋ – ರಾಹುಲ್‌ ಸೈನ್ಯಕ್ಕೆ 50 ರನ್‌ಗಳ ಭರ್ಜರಿ ಜಯ
By Public TV
ಸರ್ವಾಧಿಕಾರದ ವಿರುದ್ಧ ರಾಹುಲ್‌ ಗಾಂಧಿ ಕ್ರಾಂತಿ – ಜೈಲಿನಿಂದ ಬರ್ತಿದ್ದಂತೆ ಬಿಜೆಪಿ ವಿರುದ್ಧ ಸಿಧು ಕಿಡಿ
By Public TV
ಅಮೆರಿಕದಲ್ಲಿ ಭೀಕರ ಸುಂಟರಗಾಳಿಗೆ 7 ಬಲಿ
By Public TV
ಕೋಲಾರದಲ್ಲಿ ಮತ್ತೆ ʻಮುಂದಿನ ಸಿಎಂ ಸಿದ್ದರಾಮಯ್ಯʼ ಘೋಷಣೆ – ಕೈ ನಾಯಕರ ಭಾಷಣಕ್ಕೂ ಅಡ್ಡಿಪಡಿಸಿದ ಕಾರ್ಯಕರ್ತರು
By Public TV
Team India ಸೂಪರ್‌ ಪವರ್‌ ಆಗಿದೆ ಅಂತಾ BCCIಗೆ ದುರಹಂಕಾರ – ಇಮ್ರಾನ್‌ ಖಾನ್‌ ಕಿಡಿ
By Public TV
ಪ್ರಧಾನಿ ಮೋದಿ ಭೇಟಿ – ಏ.8, 9 ರಂದು ಸಾರ್ವಜನಿಕರಿಗೆ ಬಂಡೀಪುರ ಸಫಾರಿ ಬಂದ್
By Public TV

You Might Also Like

Sports

IPL 2023: ಮಾರ್ಕ್‌ ಮಾರಕ ಬೌಲಿಂಗ್‌, ಡೆಲ್ಲಿಗೆ ಡಿಚ್ಚಿ ಕೊಟ್ಟ ಲಕ್ನೋ – ರಾಹುಲ್‌ ಸೈನ್ಯಕ್ಕೆ 50 ರನ್‌ಗಳ ಭರ್ಜರಿ ಜಯ

Public TV By Public TV 2 hours ago
Latest

ಸರ್ವಾಧಿಕಾರದ ವಿರುದ್ಧ ರಾಹುಲ್‌ ಗಾಂಧಿ ಕ್ರಾಂತಿ – ಜೈಲಿನಿಂದ ಬರ್ತಿದ್ದಂತೆ ಬಿಜೆಪಿ ವಿರುದ್ಧ ಸಿಧು ಕಿಡಿ

Public TV By Public TV 3 hours ago
Latest

ಅಮೆರಿಕದಲ್ಲಿ ಭೀಕರ ಸುಂಟರಗಾಳಿಗೆ 7 ಬಲಿ

Public TV By Public TV 3 hours ago
Kolar

ಕೋಲಾರದಲ್ಲಿ ಮತ್ತೆ ʻಮುಂದಿನ ಸಿಎಂ ಸಿದ್ದರಾಮಯ್ಯʼ ಘೋಷಣೆ – ಕೈ ನಾಯಕರ ಭಾಷಣಕ್ಕೂ ಅಡ್ಡಿಪಡಿಸಿದ ಕಾರ್ಯಕರ್ತರು

Public TV By Public TV 4 hours ago
Follow US
Go to mobile version
Welcome Back!

Sign in to your account

Lost your password?