Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:40 ವರ್ಷಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿರೋದು ಶೇ.3.75 ಮಾತ್ರ: ಬಿಳಿಮಲೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | 40 ವರ್ಷಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿರೋದು ಶೇ.3.75 ಮಾತ್ರ: ಬಿಳಿಮಲೆ

Karnataka

40 ವರ್ಷಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿರೋದು ಶೇ.3.75 ಮಾತ್ರ: ಬಿಳಿಮಲೆ

Public TV
Last updated: December 19, 2021 8:30 pm
Public TV
Share
2 Min Read
kodagu 1
SHARE

ಬೆಂಗಳೂರು: ರಾಷ್ಟ್ರೀಯ ಭಾಷಾ ನೀತಿ ರೂಪಿಸದಿದ್ದರೆ ಹಲವು ಮಾತೃ ಭಾಷೆಗಳಿಗೆ ದೊಡ್ಡ ಆಪತ್ತು ಎದುರಾಗಲಿದೆ ಎಂದು ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಚಿಂತಕ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ಪ್ರಜಾ ಪ್ರಕಾಶನ-ಬೆಂಗಳೂರು ವತಿಯಿಂದ ಇಂಡಿಯನ್ ಎಕ್ಸ್‌ಪ್ರೆಸ್ ಕಟ್ಟಡದ ಪರ್ಲ್ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಸಂಸತ್ತಿನಲ್ಲಿ ಮಾಡಿದ ಭಾಷಣಗಳ ಆಯ್ದು ಭಾಗ-1 `ತುಳು-ಕೊಡವ ಭಾಷೆಗಳ ಅಳಿವು-ಉಳಿವು` ಕೃತಿ ಲೋಕಾರ್ಪಣೆ ಮಾಡಿ ಭಾನುವಾರ ಅವರು ಮಾತನಾಡಿದರು. ಇದನ್ನೂ ಓದಿ: ಕನ್ನಡಿಗರಿಗೆ ಧಕ್ಕೆ ತರುವಂತಹ ಸನ್ನಿವೇಶ ಬಂದರೆ ನಾವೆಲ್ಲ ಹೋರಾಟ ಮಾಡಬೇಕು: ಹೆಚ್.ಡಿ.ರೇವಣ್ಣ

kodagu1

ಒಂದು ಭಾಷೆ ಸತ್ತರೆ ಆ ಭಾಷೆಯ ಹಿಂದಿರುವ ಶ್ರೀಮಂತ ಸಂಸ್ಕೃತಿ ಕೂಡ ಹಾಳಾಗುತ್ತದೆ. ಕೇವಲ ಕೊಡವ ಭಾಷೆಯ ಕಥೆಯಷ್ಟೇ ಅಲ್ಲ. 1971ರಿಂದ 2011ರ ವರೆಗಿನ ಅಂಕಿ ಅಂಶಗಳನ್ನು ತೆಗೆದುಕೊಂಡಾಗ ದೇಶದಲ್ಲಿ ಹಿಂದಿ ಮಾತನಾಡುವವರ ಸಂಖ್ಯೆ ಶೇ.56ರಷ್ಟು ಏರಿಕೆ ಆಗಿದೆ. ತೆಲುಗು, ತಮಿಳು ಶೇ.9ರಷ್ಟು ಬೆಳವಣಿಗೆ ಆಗಿದೆ. ಆದರೆ ಕನ್ನಡ ಭಾಷೆ ಬೆಳವಣಿಗೆ ಇಡೀ ದೇಶದಲ್ಲಿರುವ ಭಾಷೆಗಳಿಗಿಂತ ಕಡಿಮೆ ಅಂದರೆ 3.75 ರಷ್ಟು ಮಾತ್ರ. ಈ ಅಂಕಿ ಅಂಶ ಅತ್ಯಂತ ಆಘಾತಕಾರಿಯಾದುದು. ಭಾರತ ಬಹುತ್ವದ ದೇಶ. ಇಲ್ಲಿ ಹಲವು ಭಾಷೆ, ಸಂಸ್ಕೃತಿಗಳ ಸಮ್ಮಿಲನವಿದೆ. ಸುಮಾರು 19,569 ಭಾಷೆಗಳು ಭಾರತದಲ್ಲಿದ್ದು, ಆ ಎಲ್ಲಾ ಭಾಷೆಗಳನ್ನು ನಾವೆಲ್ಲರೂ ಜೋಪಾನವಾಗಿ ಕಾಪಾಡಿಕೊಳ್ಳಬೇಕಾಗಿದೆ. ಆ ಹಿನ್ನೆಲೆಯಲ್ಲಿ ಮಾತೃ ಭಾಷೆ ಉಳಿಸಿಕೊಳ್ಳಲು ರಾಷ್ಟ್ರೀಯ ಭಾಷಾ ನೀತಿ ಅಗತ್ಯವಾಗಿದೆ ಎಂದರು.

ಈ ಹಿಂದೆ 2003ರಲ್ಲಿ ತುಳು, ಕಾಶ್ಮೀರದ ಡೋಗ್ರಾ, ಬಿಹಾರ ಮೈಥಿಲಿ, ಸಂತಾಲಿ, ಬೋಡೋ ಭಾಷೆಗಳನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಪಟ್ಟಿಯಲ್ಲಿದ್ದವು. ಆದರೆ ತುಳು ಭಾಷೆಯನ್ನು ಬಿಟ್ಟು ಉಳಿದೆಲ್ಲ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲಾಯಿತು. 2008ರಲ್ಲಿ ಈ ಸಂಖ್ಯೆ 3ಕ್ಕೆ ಏರಿತು. ಈಗ ತುಳು ಸೇರಿದಂತೆ ಸುಮಾರು 99 ಭಾಷೆಗಳು 8ನೇ ಪರಿಚ್ಛೇದಕ್ಕೆ ಸೇರಲು ತುದಿಗಾಲಿನಲ್ಲಿವೆ ಎಂದು ಪುರುಷೋತ್ತಮ ಬಿಳಿಮಲೆ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಸಂವಿಧಾನದ ಮೇಲೆ ಆಗುತ್ತಿರುವ ಆಕ್ರಮಣವನ್ನು ತಡೆಯದಿದ್ದರೆ ಮುಂದೆ ಅಪಾಯ ಕಾದಿದೆ. ಸಂವಿಧಾನದಲ್ಲಿ ಎಲ್ಲಾ ರೀತಿಯ ಆಶಯಗಳಿವೆ. ಬಹುಸಂಸ್ಕೃತಿ, ಬಹುತ್ವದ ರಾಷ್ಟ್ರದಲ್ಲಿ ಎಲ್ಲರಿಗೂ ಸಹ ಸಮಾಜ ಅವಕಾಶಗಳು, ಸಮಾನ ಹಕ್ಕು ಇದೆ ಎಂಬುದನ್ನು ಸಂವಿಧಾನದ ಮೂಲಕ ನಮ್ಮ ಹಿರಿಯರು ನೀಡಿದ್ದಾರೆ. 2014ರ ನಂತರ ಆಕ್ರಮಣ ನಡೆಯುತ್ತಿದೆ. ಸಂವಿಧಾನ ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ. ಸಂವಿಧಾನ ಕಳಚಿಕೊಂಡು ಹೋಯಿತು ಎಂದರೆ ಎಲ್ಲವೂ ಹೋದಂತೆ. ಪಟೇಲರು, ಜಮೀನ್ದಾರರು, ಶಾನುಭೋಗರು ಇರುತ್ತಾರೆ. ನಾವೆಲ್ಲಾ ಕೂಲಿಕಾರರಾಗಿರುತ್ತೇವೆ. ಸಂವಿಧಾನ ನೀಡಿರುವುದು ಕಾಂಗ್ರೆಸ್ಸಿಗರು. ಹೀಗಾಗಿ ಸಂವಿಧಾನವನ್ನು ಕಾಪಾಡಿಕೊಳ್ಳಬೇಕಾದ್ದು ನಮ್ಮ ಜವಾಬ್ದಾರಿ. ಇದು ಆರ್‌ಎಸ್‌ಎಸ್‌ ಜವಾಬ್ದಾರಿಯಲ್ಲ. ಸಂವಿಧಾನವನ್ನು ಕಾಪಾಡದಿದ್ದರೆ ಮುಂದೆ ಅಪಾಯ ಕಾದಿದೆ’ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

KANNADA FLAG

ರಾಜ್ಯಸಭಾ ಸಂಸದ ಮತ್ತು ಸಾಹಿತಿ ಎಲ್.ಹನುಮಂತಯ್ಯ ಮಾತನಾಡಿ, ಕನ್ನಡ ಸೇರಿದಂತೆ ಭಾರತದ ಇತರ ಭಾಷೆಯ ರೀತಿಯಲ್ಲೆ ಹಿಂದಿ ಒಂದು ಭಾಷೆಯಾಗಿದೆ. ಅದನ್ನು ಒಂದು ಭಾಷೆಯಾಗಿ ಕಲಿಯಲಿ ನಮ್ಮ ಅಭ್ಯಂತರವಿಲ್ಲ. ಆದರೆ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ಮಾಡಿದರೆ ಅದನ್ನು ಸಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಲೇಖಕಿ ಬಿ.ಟಿ.ಲಲಿತಾನಾಯಕ್, ಕೃತಿ ಸಂಪಾದಕ ಆರ್. ಜಯಕುಮಾರ್, ಕಾಂಗ್ರೆಸ್ ಮುಖಂಡ ಯು.ಬಿ. ವೆಂಕಟೇಶ್, ಎನ್.ವಿ.ನಾಚಪ್ಪ ಮತ್ತಿತರರು ಉಪಸ್ಥಿತರಿದ್ದರು.

TAGGED:kannadapurushottam bilimaleಕನ್ನಡಪುರುಷೋತ್ತಮ್‌ ಬಿಳಿಮಲೆ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

CM Siddaramaiah
Bengaluru City

ಹಜ್ ಯಾತ್ರಿಕರು ರಾಜ್ಯದ ಒಳಿತಿಗಾಗಿಯೂ ಪ್ರಾರ್ಥಿಸಿ: ಸಿದ್ದರಾಮಯ್ಯ

Public TV
ByPublic TV
50 seconds ago
Modi 1
Latest

ಸಂಸತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
10 minutes ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
17 minutes ago
Pinarayi Vijayan
Latest

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

Public TV
ByPublic TV
57 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
1 hour ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?