Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 40 ವರ್ಷಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿರೋದು ಶೇ.3.75 ಮಾತ್ರ: ಬಿಳಿಮಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | 40 ವರ್ಷಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿರೋದು ಶೇ.3.75 ಮಾತ್ರ: ಬಿಳಿಮಲೆ

Karnataka

40 ವರ್ಷಗಳಲ್ಲಿ ಕನ್ನಡ ಭಾಷೆ ಬೆಳವಣಿಗೆಯಾಗಿರೋದು ಶೇ.3.75 ಮಾತ್ರ: ಬಿಳಿಮಲೆ

Public TV
Last updated: December 19, 2021 8:30 pm
Public TV
Share
2 Min Read
kodagu 1
SHARE

ಬೆಂಗಳೂರು: ರಾಷ್ಟ್ರೀಯ ಭಾಷಾ ನೀತಿ ರೂಪಿಸದಿದ್ದರೆ ಹಲವು ಮಾತೃ ಭಾಷೆಗಳಿಗೆ ದೊಡ್ಡ ಆಪತ್ತು ಎದುರಾಗಲಿದೆ ಎಂದು ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಚಿಂತಕ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ಪ್ರಜಾ ಪ್ರಕಾಶನ-ಬೆಂಗಳೂರು ವತಿಯಿಂದ ಇಂಡಿಯನ್ ಎಕ್ಸ್‌ಪ್ರೆಸ್ ಕಟ್ಟಡದ ಪರ್ಲ್ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಸಂಸತ್ತಿನಲ್ಲಿ ಮಾಡಿದ ಭಾಷಣಗಳ ಆಯ್ದು ಭಾಗ-1 `ತುಳು-ಕೊಡವ ಭಾಷೆಗಳ ಅಳಿವು-ಉಳಿವು` ಕೃತಿ ಲೋಕಾರ್ಪಣೆ ಮಾಡಿ ಭಾನುವಾರ ಅವರು ಮಾತನಾಡಿದರು. ಇದನ್ನೂ ಓದಿ: ಕನ್ನಡಿಗರಿಗೆ ಧಕ್ಕೆ ತರುವಂತಹ ಸನ್ನಿವೇಶ ಬಂದರೆ ನಾವೆಲ್ಲ ಹೋರಾಟ ಮಾಡಬೇಕು: ಹೆಚ್.ಡಿ.ರೇವಣ್ಣ

kodagu1

ಒಂದು ಭಾಷೆ ಸತ್ತರೆ ಆ ಭಾಷೆಯ ಹಿಂದಿರುವ ಶ್ರೀಮಂತ ಸಂಸ್ಕೃತಿ ಕೂಡ ಹಾಳಾಗುತ್ತದೆ. ಕೇವಲ ಕೊಡವ ಭಾಷೆಯ ಕಥೆಯಷ್ಟೇ ಅಲ್ಲ. 1971ರಿಂದ 2011ರ ವರೆಗಿನ ಅಂಕಿ ಅಂಶಗಳನ್ನು ತೆಗೆದುಕೊಂಡಾಗ ದೇಶದಲ್ಲಿ ಹಿಂದಿ ಮಾತನಾಡುವವರ ಸಂಖ್ಯೆ ಶೇ.56ರಷ್ಟು ಏರಿಕೆ ಆಗಿದೆ. ತೆಲುಗು, ತಮಿಳು ಶೇ.9ರಷ್ಟು ಬೆಳವಣಿಗೆ ಆಗಿದೆ. ಆದರೆ ಕನ್ನಡ ಭಾಷೆ ಬೆಳವಣಿಗೆ ಇಡೀ ದೇಶದಲ್ಲಿರುವ ಭಾಷೆಗಳಿಗಿಂತ ಕಡಿಮೆ ಅಂದರೆ 3.75 ರಷ್ಟು ಮಾತ್ರ. ಈ ಅಂಕಿ ಅಂಶ ಅತ್ಯಂತ ಆಘಾತಕಾರಿಯಾದುದು. ಭಾರತ ಬಹುತ್ವದ ದೇಶ. ಇಲ್ಲಿ ಹಲವು ಭಾಷೆ, ಸಂಸ್ಕೃತಿಗಳ ಸಮ್ಮಿಲನವಿದೆ. ಸುಮಾರು 19,569 ಭಾಷೆಗಳು ಭಾರತದಲ್ಲಿದ್ದು, ಆ ಎಲ್ಲಾ ಭಾಷೆಗಳನ್ನು ನಾವೆಲ್ಲರೂ ಜೋಪಾನವಾಗಿ ಕಾಪಾಡಿಕೊಳ್ಳಬೇಕಾಗಿದೆ. ಆ ಹಿನ್ನೆಲೆಯಲ್ಲಿ ಮಾತೃ ಭಾಷೆ ಉಳಿಸಿಕೊಳ್ಳಲು ರಾಷ್ಟ್ರೀಯ ಭಾಷಾ ನೀತಿ ಅಗತ್ಯವಾಗಿದೆ ಎಂದರು.

ಈ ಹಿಂದೆ 2003ರಲ್ಲಿ ತುಳು, ಕಾಶ್ಮೀರದ ಡೋಗ್ರಾ, ಬಿಹಾರ ಮೈಥಿಲಿ, ಸಂತಾಲಿ, ಬೋಡೋ ಭಾಷೆಗಳನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಪಟ್ಟಿಯಲ್ಲಿದ್ದವು. ಆದರೆ ತುಳು ಭಾಷೆಯನ್ನು ಬಿಟ್ಟು ಉಳಿದೆಲ್ಲ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲಾಯಿತು. 2008ರಲ್ಲಿ ಈ ಸಂಖ್ಯೆ 3ಕ್ಕೆ ಏರಿತು. ಈಗ ತುಳು ಸೇರಿದಂತೆ ಸುಮಾರು 99 ಭಾಷೆಗಳು 8ನೇ ಪರಿಚ್ಛೇದಕ್ಕೆ ಸೇರಲು ತುದಿಗಾಲಿನಲ್ಲಿವೆ ಎಂದು ಪುರುಷೋತ್ತಮ ಬಿಳಿಮಲೆ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಸಂವಿಧಾನದ ಮೇಲೆ ಆಗುತ್ತಿರುವ ಆಕ್ರಮಣವನ್ನು ತಡೆಯದಿದ್ದರೆ ಮುಂದೆ ಅಪಾಯ ಕಾದಿದೆ. ಸಂವಿಧಾನದಲ್ಲಿ ಎಲ್ಲಾ ರೀತಿಯ ಆಶಯಗಳಿವೆ. ಬಹುಸಂಸ್ಕೃತಿ, ಬಹುತ್ವದ ರಾಷ್ಟ್ರದಲ್ಲಿ ಎಲ್ಲರಿಗೂ ಸಹ ಸಮಾಜ ಅವಕಾಶಗಳು, ಸಮಾನ ಹಕ್ಕು ಇದೆ ಎಂಬುದನ್ನು ಸಂವಿಧಾನದ ಮೂಲಕ ನಮ್ಮ ಹಿರಿಯರು ನೀಡಿದ್ದಾರೆ. 2014ರ ನಂತರ ಆಕ್ರಮಣ ನಡೆಯುತ್ತಿದೆ. ಸಂವಿಧಾನ ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ. ಸಂವಿಧಾನ ಕಳಚಿಕೊಂಡು ಹೋಯಿತು ಎಂದರೆ ಎಲ್ಲವೂ ಹೋದಂತೆ. ಪಟೇಲರು, ಜಮೀನ್ದಾರರು, ಶಾನುಭೋಗರು ಇರುತ್ತಾರೆ. ನಾವೆಲ್ಲಾ ಕೂಲಿಕಾರರಾಗಿರುತ್ತೇವೆ. ಸಂವಿಧಾನ ನೀಡಿರುವುದು ಕಾಂಗ್ರೆಸ್ಸಿಗರು. ಹೀಗಾಗಿ ಸಂವಿಧಾನವನ್ನು ಕಾಪಾಡಿಕೊಳ್ಳಬೇಕಾದ್ದು ನಮ್ಮ ಜವಾಬ್ದಾರಿ. ಇದು ಆರ್‌ಎಸ್‌ಎಸ್‌ ಜವಾಬ್ದಾರಿಯಲ್ಲ. ಸಂವಿಧಾನವನ್ನು ಕಾಪಾಡದಿದ್ದರೆ ಮುಂದೆ ಅಪಾಯ ಕಾದಿದೆ’ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

KANNADA FLAG

ರಾಜ್ಯಸಭಾ ಸಂಸದ ಮತ್ತು ಸಾಹಿತಿ ಎಲ್.ಹನುಮಂತಯ್ಯ ಮಾತನಾಡಿ, ಕನ್ನಡ ಸೇರಿದಂತೆ ಭಾರತದ ಇತರ ಭಾಷೆಯ ರೀತಿಯಲ್ಲೆ ಹಿಂದಿ ಒಂದು ಭಾಷೆಯಾಗಿದೆ. ಅದನ್ನು ಒಂದು ಭಾಷೆಯಾಗಿ ಕಲಿಯಲಿ ನಮ್ಮ ಅಭ್ಯಂತರವಿಲ್ಲ. ಆದರೆ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ಮಾಡಿದರೆ ಅದನ್ನು ಸಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಲೇಖಕಿ ಬಿ.ಟಿ.ಲಲಿತಾನಾಯಕ್, ಕೃತಿ ಸಂಪಾದಕ ಆರ್. ಜಯಕುಮಾರ್, ಕಾಂಗ್ರೆಸ್ ಮುಖಂಡ ಯು.ಬಿ. ವೆಂಕಟೇಶ್, ಎನ್.ವಿ.ನಾಚಪ್ಪ ಮತ್ತಿತರರು ಉಪಸ್ಥಿತರಿದ್ದರು.

TAGGED:kannadapurushottam bilimaleಕನ್ನಡಪುರುಷೋತ್ತಮ್‌ ಬಿಳಿಮಲೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
5 minutes ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
39 minutes ago
Ashwini Vaishnaw
Latest

ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ 2.78 ಲಕ್ಷ ಕೋಟಿ ಮೀಸಲು: ಅಶ್ವಿನಿ ವೈಷ್ಣವ್‌

Public TV
By Public TV
44 minutes ago
Team India U19
Cricket

U19 World Cup | ಪಂದ್ಯ ಮುಗಿಯುವ ಮುನ್ನವೇ ಸೆಮಿಫೈನಲ್‌ಗೆ ಭಾರತ ಲಗ್ಗೆ – ಪಾಕಿಸ್ತಾನ ಮನೆಗೆ

Public TV
By Public TV
1 hour ago
mlc c t ravi has been elected as the president and dinesh hosur as the vice president of the chikkamagaluru district central cooperative bank
Chikkamagaluru

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Public TV
By Public TV
2 hours ago
Ayatollah Ali Khamenei 1
Latest

ಈ ಬಾರಿ ಪ್ರಾದೇಶಿಕ ಯುದ್ಧವಾಗಿರುತ್ತೆ – ಅಮೆರಿಕಕ್ಕೆ ಖಮೇನಿ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?