ಡೆಹ್ರಾಡೂನ್: ಉತ್ತರಾಖಂಡದ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಪುಷ್ಕರ್ ಸಿಂಗ್ ಧಾಮಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆದರೆ ಹೈಕಮಾಂಡ್ ಮತ್ತೆ ಅವರಿಗೆ ಸಿಎಂ ಪಟ್ಟವನ್ನು ಕಟ್ಟಿದೆ.
ಡೆಹ್ರಾಡೂನ್ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ದೆಹಲಿ ಪಾಲಿಕೆ ಚುನಾವಣೆ ನಡೆಸಿ ಬಿಜೆಪಿ ಗೆದ್ದರೆ ಎಎಪಿ ರಾಜಕೀಯ ತೊರೆಯಲಿದೆ: ಕೇಜ್ರಿವಾಲ್ ಸವಾಲು
ಪ್ರಮಾಣ ವಚನಕ್ಕೂ ಮುನ್ನ ಧಾಮಿ ಬುಧವಾರ ಮುಂಜಾನೆ ತಪಕೇಶ್ವರ ಮಹಾದೇವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಥಾಮಿ ಟನ್ಸ್ ನದಿಯ ದಡದಲ್ಲಿರುವ ಶಿವ ದೇವಾಲಯದಲ್ಲಿ ಜಲಾಭಿಷೇಕ ಅರ್ಪಿಸಿ, ರಾಜ್ಯದ ಕಲ್ಯಾಣ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು. ಇದನ್ನೂ ಓದಿ: ಮಾರ್ಚ್ 31ರ ಬಳಿಕ ಕೋವಿಡ್ ನಿರ್ಬಂಧಗಳು ರದ್ದು