ದಾವಣಗೆರೆ: ಕಾಂಗ್ರೆಸ್ ಅವರಿಗೆ ತಾಕತ್ ಇದ್ದರೆ ಟಿಪ್ಪು ಫೋಟೋವನ್ನು ನಿಮ್ಮ ಮನೆ, ಕಚೇರಿಗಳಲ್ಲಿ ಹಾಕಿಕೊಳ್ಳಿ ಎಂದು ಕಾಂಗ್ರೆಸ್ ಮುಖಂಡರಿಗೆ ಶಾಸಕ ರೇಣುಕಾಚಾರ್ಯ ಸವಾಲು ಹಾಕಿದರು.
ಹೊನ್ನಾಳಿಯ ನಿವಾಸದ ಮುಂಭಾಗದಲ್ಲಿ ಸಾವರ್ಕರ್ ಫೋಟೋವನ್ನು ಹಾಕಿಕೊಂಡು ನಂತರ ಮಾತನಾಡಿದ ಅವರು, ನಾವು ಸಾವರ್ಕರ್ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟಗಾರರ ಫೋಟೋವನ್ನು ನಮ್ಮ ಮನೆಗಳಲ್ಲಿ, ಕಚೇರಿಗಳಲ್ಲಿ ಹಾಕಿಕೊಳ್ಳುತ್ತೇವೆ. ಅದೇ ರೀತಿ ಕಾಂಗ್ರೆಸ್ನವರು ಟಿಪ್ಪು ಫೋಟೋವನ್ನು ಕಚೇರಿ, ಮನೆಗಳಲ್ಲಿ ಹಾಕಿಕೊಳ್ಳಿ ಎಂದ ಅವರು, ಸತ್ತವರ ಜಯಂತಿ ಮಾಡಲು ಇಸ್ಲಾಂ ಧರ್ಮದಲ್ಲಿ ಅವಕಾಶ ಇಲ್ಲ. ಸತ್ತವರ ಫೋಟೋಗಳನ್ನು ಅವರ ಮನೆಯಲ್ಲಿ ಹಾಕಿಕೊಳ್ಳುವುದಿಲ್ಲ ಎಂದು ತಿಳಿಸಿದರು.
ವೀರ ಸಾವರ್ಕರ್ ನಾವೆಲ್ಲಾ ಫೋಟೋಗಳನ್ನು ಮನೆಗಳಲ್ಲಿ ಹಾಕಿಕೊಳ್ಳತ್ತಿದ್ದೇವೆ. ಇದು ಹೆಮ್ಮೆಯ ಸಂಗತಿಯಾಗಿದ್ದು ಏರಿಯಾಗಳಲ್ಲಿ, ನಗರ ಪ್ರದೇಶಗಳಲ್ಲಿ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ಮಾಡುತ್ತೇವೆ. ವೀರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾನೀಯರಾಗಿದ್ದಾರೆ. ಸಾವರ್ಕರ್ ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಹೇಳುತ್ತಾರೆ. ಆದರೆ ಟಿಪ್ಪು ಯಾವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರೆ ಹೇಳಲಿ. ಅದೇ ರೀತಿ ಕಾಂಗ್ರೆಸ್ನವರು ನಾವು ಹಿಂದೂ ಎಂದು ಹೇಳಿಕೊಳ್ಳಿ ನೋಡೋಣ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಧ್ಯಾಹ್ನ ನಾಟಿ ಕೋಳಿ ಊಟ ಮಾಡಿ ಸಂಜೆ ದೇವಸ್ಥಾನಕ್ಕೆ ಭೇಟಿ ಕೊಟ್ರಾ ಸಿದ್ದರಾಮಯ್ಯ?
ಸಿದ್ದರಾಮಯ್ಯನವರ ಕಾರಿಗೆ ಕೊಡಗಿನಲ್ಲಿ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸದ ಅವರು, ಮೊಟ್ಟೆ ಎಸೆದವನು ಕಾಂಗ್ರೆಸ್ನಲ್ಲಿ ಇದ್ದರು ಎಂದು ಅವರೇ ಒಪ್ಪಿಕೊಂಡಿದ್ದಾರೆ. ಬಿಜೆಪಿ ನಾಯಕರು ಪ್ರವಾಸ ಮಾಡಲಿ ಪ್ರತಿಭಟನೆ ಮಾಡ್ತಿವಿ ಎಂದು ಡಿಕೆಶಿ ಹೇಳುತ್ತಾರೆ. ನಾವು ಕೂಡ ಸವಾಲ್ ಹಾಕ್ತಿವಿ ಬೇಕಿದ್ರೆ ಪ್ರತಿಭಟನೆ ಮಾಡಿಸಿ ನೋಡೋಣ ಎಂದರು.
ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತ ಅಲ್ಲ, ಕಾಂಗ್ರೆಸ್ನವರು. ಸಿದ್ದರಾಮಯ್ಯನವರ ಪ್ರವಾಸ ಮಾಡುವುದನ್ನು ಬಿಜೆಪಿ ಕಾರ್ಯಕರ್ತರು ತಡೆಯುವುದಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆಡಳಿತ ಪಕ್ಷಕ್ಕೆ ಹೇಗೆ ಅಧಿಕಾರ ಇದೆಯೋ ಹಾಗೇ ವಿರೋಧ ಪಕ್ಷಕ್ಕೆ ಇದೆ. ಧರ್ಮ ಧರ್ಮದ ನಡುವೆ ಬೆಂಕಿ ಇಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ನಮಗೆ ಸಂಘರ್ಷ ಬೇಕಾಗಿಲ್ಲ ಸಾಮರಸ್ಯಬೇಕು ಎಂದು ಹೇಳಿದರು. ಇದನ್ನೂ ಓದಿ: ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು