ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೆದ್ದರೇ ಸಿಎಂ ಆಗೋದಷ್ಟೆ ಅಲ್ಲದೇ, ಪ್ರಧಾನಿ ಮೋದಿಯನ್ನು (Narendra Modi) ಸೋಲಿಸುತ್ತಾರೆ ಎಂದು ಶಾಸಕ ಪುಟ್ಟರಂಗಶೆಟ್ಟಿ (Puttaranga Shetty) ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಅವರನ್ನು ಕಂಡರೆ ಬಿಜೆಪಿಗೆ (BJP) ಭಯ. ಏಕೆಂದರೆ ಇಡೀ ದೇಶದಲ್ಲೇ ಮೋದಿ ಅವರನ್ನು ನೇರವಾಗಿ ವಾಗ್ದಾಳಿ ನಡೆಸುವುದು ಸಿದ್ದರಾಮಯ್ಯರೊಬ್ಬರೇ ಆಗಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಎಂಎಲ್ಸಿ ಸಿ.ಪಿ. ಯೋಗೇಶ್ವರ್ (CP Yogeshwar) ಅವರ ವೈರಲ್ ಆದ ಆಡಿಯೋದಲ್ಲಿದ್ದ ಮೈಸೂರು ಭಾಗದ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನವರು ಬಿಜೆಪಿಗೆ ಸೇರುವುದಲ್ಲ, ಬಿಜೆಪಿ ಅವರೇ ಕಾಂಗ್ರೆಸ್ಗೆ ಬರುತ್ತಾರೆ ಎಂದು ಹೇಳಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ, ಕಾಂಗ್ರೆಸ್ಗೆ ಬಿಜೆಪಿಯವರು ಬರುತ್ತಾರೆ. ಬಿಜೆಪಿಯವರು ಕಾಂಗ್ರೆಸ್ಗೆ ಬರೋಕೆ ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ನಮ್ಮ ನಾಯಕರೇ ಅವರನ್ನು ಸೇರಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿ ಕೊಂದು ತಾನೂ ಆತ್ಮಹತ್ಯೆ
ಹೆಚ್. ವಿಶ್ವನಾಥ್ ಬಿಜೆಪಿಗೆ ಹೋಗಿದ್ರು, ಆದರೆ ಇದೀಗ ಮತ್ತೆ ಕಾಂಗ್ರೆಸ್ಗೆ ಬರುತ್ತಿಲ್ವಾ? ಅದೇ ರೀತಿ ಎಂಟಿಬಿ ನಾಗರಾಜ್ ಸೀಟು ಕೊಟ್ರೆ ಕಾಂಗ್ರೆಸ್ ಸೇರೋಕೆ ತುದಿಗಾಲಲ್ಲಿ ನಿಂತಿದ್ದಾರೆ. ಎಲ್ಲಾ ಕಾದು ನೋಡಿ ಎಷ್ಟೆಷ್ಟು ಜನ ಬರ್ತಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಾರೆ ಎಂಬ ಸಚಿವರ ಹೇಳಿಕೆಯನ್ನು ಅಲ್ಲಗಳೆದರು. ಇದನ್ನೂ ಓದಿ: ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕ ಸಮುದ್ರಪಾಲು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k