ರಸಗುಲ್ಲ ಖಾಲಿಯಾಗಿದ್ದಕ್ಕೆ ವಧು-ವರನ ಕುಟುಂಬದ ಮಧ್ಯೆ ಡಿಶುಂ ಡಿಶುಂ – ಯುವಕ ಸಾವು

Public TV
1 Min Read
MARRIAGE GARLAND

ಲಕ್ನೋ: ಊಟದಲ್ಲಿ ರಸಗುಲ್ಲ (Rasgulla) ಖಾಲಿ ಆಯ್ತು ಅಂತ ಮದುವೆ ಸಮಾರಂಭದಲ್ಲಿಯೇ (Marriage Function) ಗಲಾಟೆ (Quarrel) ನಡೆದು, ಯುವಕನೊಬ್ಬನ ಹತ್ಯೆಯಲ್ಲಿ ಹೊಡೆದಾಟ ಅಂತ್ಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ.

ವರದಿಗಳ ಪ್ರಕಾರ ಮದುವೆ ಸಮಾರಂಭದಲ್ಲಿ ರಸಗುಲ್ಲ ಖಾಲಿ ಆಯ್ತು ಅಂತ ವಧು ಹಾಗೂ ವರನ ಕಡೆಯವರ ನಡುವೆ ವಾಗ್ವಾದ ನಡೆದಿದೆ. ಬಳಿಕ ವಾಗ್ವಾದ ಹೊಡೆದಾಟಕ್ಕೆ ತಿರುಗಿ, ಅಲ್ಲೇ ಇದ್ದ ವ್ಯಕ್ತಿಯೊಬ್ಬ ಚಾಕುವಿನಿಂದ ಯುವಕ ಸನ್ನಿ (22) ಮೇಲೆ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್‍ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ

Rasgulla 2

ಗಂಭೀರವಾಗಿ ಗಾಯಗೊಂಡಿದ್ದ ಸನ್ನಿಯನ್ನು ಮೊದಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಯಿತು. ಬಳಿಕ ಆಗ್ರಾದ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಹಾಲಿನ ಪ್ಯಾಕೆಟ್‌ಗೆ ಹಣ ನೀಡದ್ದಕ್ಕೆ ಗ್ರಾಹಕನ ಮೇಲೆ ಮಾಲೀಕನಿಂದ ಹಲ್ಲೆ

ಘಟನೆಯಲ್ಲಿ ಇನ್ನೂ ಐವರಿಗೆ ಗಾಯಗಳಾಗಿದ್ದು, ಅವರನ್ನು ಎತ್ಮಾದ್‌ಪುರದ ಸಮದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತ ಯುವಕನ ಕುಟುಂಬದವರು ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *