ಗದಗ: ನಗರಸಭೆ ಕಚೇರಿಯಲ್ಲೇ (Municipal Office) ಸದಸ್ಯರು ಕೈ ಕೈ ಮಿಲಾಯಿಸಿರುವ ಘಟನೆ ಗದಗ (Gadag) ಜಿಲ್ಲೆಯ ಬೆಟಗೇರಿ (Betageri) ನಗರ ಸಭೆಯಲ್ಲಿ ನಡೆದಿದೆ.
ಕಾಂಗ್ರೆಸ್ ಸದಸ್ಯ ಜೈನುಲಾದ್ದಿನ್ ನಮಾಜಿ ಹಾಗೂ ಬಿಜೆಪಿ ಸದಸ್ಯೆ ವಿಜಯಲಕ್ಷ್ಮಿ ದಿಂಡೂರ ಪತಿ ಶಶಿಧರ್ ನಡುವೆ ಜಗಳ ಏರ್ಪಟ್ಟಿದೆ. ಶಶಿಧರ್ ಅವರು ಸಚಿವ ಹೆಚ್ಕೆ ಪಾಟೀಲ್ಗೆ ಏಕವಚನದಲ್ಲಿ ಮಾತನಾಡಿದ್ದಾಗಿ ಆರೋಪಿಸಲಾಗಿದ್ದು, ಈ ಹಿನ್ನೆಲೆ ಜಗಳ ಪ್ರಾರಂಭವಾಗಿದೆ. ಇದನ್ನೂ ಓದಿ: ಅಘೋಷಿತ ಲೋಡ್ ಶೆಡ್ಡಿಂಗ್, ಅಕ್ಕಪಕ್ಕದ ರಾಜ್ಯದಿಂದ ವಿದ್ಯುತ್ ಖರೀದಿಸಿ ಕೊಡಲಿ: ಬಿವೈ ರಾಘವೇಂದ್ರ ಒತ್ತಾಯ
ಗದಗ ನಗರಸಭೆ ಆಯುಕ್ತರ ಕಚೇರಿಯಲ್ಲಿ ಸಾರ್ವಜನಿಕರ ಎದುರಲ್ಲೇ ಸದಸ್ಯರು ಜಗಳವಾಡಿದ್ದು, ಅಲ್ಲೇ ಇದ್ದ ಅಧಿಕಾರಿಗಳು ಹಾಗೂ ಇತರ ಸದಸ್ಯರು ಜಗಳ ಬಿಡಿಸಿ ಸಮಾಧಾನ ಮಾಡಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಬೇಜವಾಬ್ದಾರಿ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: Emergency Alert Test- ಮೊಬೈಲ್ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್
Web Stories