Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ತಿರುಪತಿಯಂತೆ ಧರ್ಮಸ್ಥಳದಲ್ಲೂ ದರ್ಶನಕ್ಕೆ ಕ್ಯೂ ಕಾಂಪ್ಲೆಕ್ಸ್: ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ವಿವರ

Public TV
Last updated: January 7, 2025 8:34 am
Public TV
Share
3 Min Read
queue complex at Dharmasthala Temple Sri Sanidhya Queue Complex specialty new features 2
SHARE

– ಮಂಜುನಾಥ ಸ್ವಾಮಿಯ ದರ್ಶನಕ್ಕಿಲ್ಲ ಇನ್ನು ಕಷ್ಟ
– ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ಅತ್ಯಾಧುನಿಕ ಕ್ಯೂ ಕಾಂಪ್ಲೆಕ್ಸ್

ಮಂಗಳೂರು: ರಾಜ್ಯದ ಪುಣ್ಯ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಗಂಟೆಗಟ್ಟಲೆ ಸರತಿ ಸಾಲಿನಲ್ಲೇ ನಿಲ್ಲಬೇಕಿತ್ತು. ಅದರಲ್ಲೂ ವೀಕೆಂಡ್, ರಜಾ ದಿನ, ವಿಶೇಷ ಹಬ್ಬ ಬಂದರೆ ಸರತಿ ಸಾಲಿನಲ್ಲಿ ನಿಲ್ಲುವ ಕಷ್ಟ ಹೇಳ ತೀರದು. ಭಕ್ತರ ಈ ಕಷ್ಟವನ್ನರಿತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು (Veerendra Heggade) ಇದಕ್ಕೊಂದು ಬದಲಿ ಆರಾಮದಾಯಕ ವ್ಯವಸ್ಥೆಯನ್ನು ಮಾಡಿದ್ದಾರೆ. ಅವರ ಪರಿಕಲ್ಪನೆಯ ಈ ವ್ಯವಸ್ಥೆ ರಾಜ್ಯದಲ್ಲೇ ಪ್ರಥಮ ಎನಿಸಿಕೊಂಡಿದ್ದು ಇಂದು ಲೋಕಾರ್ಪಣೆಗೊಳ್ಳಲಿದೆ.

ತಿರುಪತಿ, ಶಿರಡಿ ಕ್ಷೇತ್ರಗಳಲ್ಲಿ ಕ್ಯೂ ಕಾಂಪ್ಲೆಕ್ಸ್ ಮೂಲಕ ನೀವು ತೆರಳಿ ದೇವರ ದರ್ಶನ ಪಡೆದಿರಬಹುದು. ಇದೀಗ ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಮೊದಲು ಎಂಬಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಕ್ಯೂ ಕಾಂಪ್ಲೆಕ್ಸ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ನಿಮಿಷಕ್ಕೆ 1,000 ಬುಲೆಟ್ ಸಿಡಿಸುತ್ತೆ ಮೇಡ್ ಇನ್ ಇಂಡಿಯಾ ಗನ್ – ಯುರೋಪ್ ದೇಶಗಳಿಂದ ಭಾರೀ ಬೇಡಿಕೆ

queue complex at Dharmasthala Temple Sri Sanidhya Queue Complex specialty new features 1

ಇಲ್ಲಿಯವರೆಗೆ ಮಕ್ಕಳು, ಮಹಿಳೆಯರು, ವಯಸ್ಸಾದವರು ಸೇರಿದಂತೆ ಎಲ್ಲರೂ ಸಣ್ಣದಾದ ಈ ಸರತಿ ಸಾಲಿನಲ್ಲಿ ನಿಂತುಕೊಂಡೇ ಸಾಗಬೇಕಾಗಿತ್ತು. ಭಕ್ತರ ಈ ಕಷ್ಟವನ್ನರಿತ ಶ್ರೀ ಕ್ಷೇತ್ರ ಈಗ ಆಕರ್ಷಕವಾದ ವಿನ್ಯಾಸದ ತನ್ನದೇ ಪರಿಕಲ್ಪನೆಯ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಿದೆ. ದೇವಸ್ಥಾನದ (Manjunatha Swamy Temple) ಹಿಂಭಾಗದಲ್ಲಿ ಬರೋಬ್ಬರಿ 2,75,177 ಚದರ ಅಡಿ ವಿಸ್ತೀರ್ಣದ ಎರಡು ಅಂತಸ್ತಿನ ಕ್ಯೂ ಕಾಂಪ್ಲೆಕ್ಸ್ ತಲೆ ಎತ್ತಿದೆ.

queue complex at Dharmasthala Temple Sri Sanidhya Queue Complex specialty new features 4

ಕಾಂಪ್ಲೆಕ್ಸ್‌ ವಿಶೇಷತೆ ಏನು?
ಶ್ರೀ ಸಾನ್ನಿಧ್ಯ ಹೆಸರಿನ ಈ ಕಾಂಪ್ಲೆಕ್ಸ್ ಬಹಳಷ್ಟು ವಿಶಿಷ್ಟತೆಯಿಂದ ಕೂಡಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಲ್ಲದೇ ವಿಶಾಲವಾದ ಭವನದಲ್ಲಿ ಕುರ್ಚಿಯಲ್ಲಿ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು. ಎರಡು ಅಂತಸ್ಥಿನಲ್ಲಿ ತಲಾ 8 ರಂತೆ ಒಟ್ಟು 16 ವಿಶಾಲ ಭವನಗಳಿದ್ದು ಪ್ರತಿ ಭವನದಲ್ಲಿ 800 ಮಂದಿಯಂತೆ ಸುಮಾರು 12ಸಾವಿರ ಮಂದಿ ತಂಗಲು ಅವಕಾಶವಿದೆ.

ಇಡೀ ಸಂಕೀರ್ಣ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಎಲ್ಲಾ ಸೌಲಭ್ಯಗಳನ್ನು ಹೊಂದಿದೆ. ಕ್ಯೂ ಕಾಂಪ್ಲೆಕ್ಸ್‌ ಪ್ರವೇಶಿಸುತ್ತಿದ್ದಂತೆ ಎ.ಐ ತಂತ್ರಜ್ಞಾನದ ಕ್ಯಾಮೆರಾ ಎಲ್ಲಾ ಭಕ್ತರ ಸಂಖ್ಯೆಗಳನ್ನು ಲೆಕ್ಕ ಹಾಕುತ್ತದೆ. ಆರಂಭದಲ್ಲೆ ಸೇವಾ ರಶೀದಿ ಕೌಂಟರ್ ಇದ್ದು ಬಳಿಕ ಕೊಠಡಿಗೆ ಎಂಟ್ರಿ ನೀಡಲಾಗುತ್ತದೆ. ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದ್ದು, ಸ್ಟೇನ್ಲೆಸ್ ಸ್ಟೀಲ್ ಕುರ್ಚಿಗಳಿವೆ.

queue complex at Dharmasthala Temple Sri Sanidhya Queue Complex specialty new features 3

ಭಕ್ತಾಧಿಗಳಿಗೆ ಮಾರ್ಗದರ್ಶನ ನೀಡಲು ಎಲ್ಲೆಡೆ ಡಿಜಿಟಲ್ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದ್ದು, ಭವನ ಸಂಖ್ಯೆ, ದರ್ಶನದ ಅವಧಿ, ದೇವಸ್ಥಾನದ ಇತಿಹಾಸ ಪ್ರಸಾರವಾಗುತ್ತಿರುತ್ತದೆ. ಪ್ರತಿ ಭವನದಲ್ಲಿಯೂ ಕ್ಯಾಂಟೀನ್, ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆರೈಕೆ ಕೊಠಡಿ ಇದೆ.

ವಿಶಾಲವಾದ ಭವನದಲ್ಲಿ ಕುರ್ಚಿ ಮೇಲೆ ಕುಳಿತು ನಿಗದಿತ ಸಮಯದಲ್ಲಿ ದೇವರ ದರ್ಶನಕ್ಕೆ ತೆರಳಬಹುದು. ಇದರಿಂದ 6-7 ಗಂಟೆ ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪುತ್ತದೆ. ಒಂದೂವರೆ ಗಂಟೆಯೊಳಗೆ ದರ್ಶನ ಪಡೆಯಬಹುದು.

ಸುಂದರ ಕಲಾಕೃತಿಗಳಿಂದ ಆಕರ್ಷಿಸುವ ಈ ಕ್ಯೂ ಕಾಂಪ್ಲೆಕ್ಸ್ ನ ಪ್ರತೀ ಕೊಠಡಿಯೊಳಗೂ ಸುಸಜ್ಜಿತ ಆಸನಗಳು, ಮಕ್ಕಳ ಆರೈಕೆ ಕೊಠಡಿ, ಟಿವಿ, ಉಚಿತ ಉಪಾಹಾರದ ವ್ಯವಸ್ಥೆ ಇದ್ದು ಇಡೀ ಕೊಠಡಿ 27 ಡಿಗ್ರಿ ಸೆಲ್ಸಿಯಸ್ ಕೂಲಿಂಗ್ ಸಿಸ್ಟಮ್‌ ಒಳಗೊಂಡಿರುವುದು ವಿಶೇಷ. ಇಂತಹ ಸುಸಜ್ಜಿತ ಆಧುನಿಕ ತಂತ್ರಜ್ಞಾನ ಕ್ಯೂ ಕಾಂಪ್ಲೆಕ್ಸ್ ಬೇರೆಲ್ಲೂ ಇಲ್ಲ ಅನ್ನೋ ಹೆಗ್ಗಳಿಕೆಗೂ ಪಾತ್ರವಾಗಿದೆ.

 

ಇಂದು ಲೋಕಾರ್ಪಣೆ:
ಕಳೆದ ಹಲವಾರು ವರ್ಷಗಳಿಂದ ಸರತಿ ಸಾಲಿನಲ್ಲೇ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆಯುತ್ತಿದ್ದ ಭಕ್ತರಿಗೆ, ಇನ್ನು ಮುಂದೆ ಉತ್ತಮ ರೀತಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಕ್ಯೂ ಕಾಂಪ್ಲೆಕ್ಸ್ ನ್ನು ಇಂದು ಮಧ್ಯಾಹ್ನ 2 ಗಂಟೆಗೆ ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ಉದ್ಘಾಟಿಸಲಿದ್ದು, ಕೆಲವೇ ದಿನಗಳಲ್ಲಿ ಭಕ್ತರ ಉಪಯೋಗಕ್ಕೆ ಸಿಗಲಿದೆ.

 

TAGGED:dharmasthalaManjunatha Swamy Templeveerendra heggadeಧರ್ಮಸ್ಥಳಮಂಜುನಾಥ ಸ್ವಾಮಿ ದೇವಸ್ಥಾನವೀರೇಂದ್ರ ಹೆಗ್ಗಡೆ
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
12 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
15 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
16 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
20 hours ago

You Might Also Like

Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
13 minutes ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
54 minutes ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
58 minutes ago
HS Venkata murty
Bengaluru City

ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

Public TV
By Public TV
2 hours ago
RCB 6
Belgaum

RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

Public TV
By Public TV
2 hours ago
AI ಚಿತ್ರ
Dakshina Kannada

ದ.ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ಇಂದು ರಜೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?