Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಇದರಲ್ಲಿ ಸರ್ಕಾರವೇ ಅಪರಾಧಿ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಇದರಲ್ಲಿ ಸರ್ಕಾರವೇ ಅಪರಾಧಿ: ಆರ್.ಅಶೋಕ್

Bengaluru City

ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಇದರಲ್ಲಿ ಸರ್ಕಾರವೇ ಅಪರಾಧಿ: ಆರ್.ಅಶೋಕ್

Public TV
Last updated: June 6, 2025 4:32 pm
Public TV
Share
3 Min Read
R.ASHOK
SHARE

– ಇದು ಮುಡಾ, ವಾಲ್ಮೀಕಿ ನಿಗಮದ ಹಗರಣದಂತೆಯೇ ಮುಚ್ಚಿಹೋಗಲಿದೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಸುತ್ತಮುತ್ತ ನಡೆದ ಕಾಲ್ತುಳಿತದ (Stampede Case) ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ (R.Ashok) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಕಾನೂನನ್ನು ಕಗ್ಗತ್ತಲಿನಲ್ಲಿಟ್ಟಿದ್ದಾರೆ. ಗ್ರೇಟ್‌ ಸಮಾಜವಾದಿ, ಮಜಾವಾದಿ ಸಿದ್ದರಾಮಯ್ಯನವರಿಂದ (Siddaramaiah) ಹೀಗಾಗಿದೆ. ಆರ್‌ಸಿಬಿ ತಂಡ ಐಪಿಎಲ್‌ ಗೆದ್ದಿದ್ದರೆ, ಕೆಪಿಸಿಸಿ ತಂಡ ಫೋಟೋಗೆ ಫೋಸ್‌ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬ್ಯಾಟ್ಸ್‌ಮನ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರೇ ಬೌಲರ್‌ ಆಗಿದ್ದಾರೆ. ಸಿದ್ದರಾಮಯ್ಯನವರನ್ನು ಬೋಲ್ಡ್‌ ಮಾಡಬೇಕೆಂದು ಡಿ.ಕೆ.ಶಿವಕುಮಾರ್‌ ಪ್ರಯತ್ನ ಮಾಡುತ್ತಿದ್ದರೆ, ಐದು ವರ್ಷ ಸೆಂಚುರಿ ಹೊಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ರಾಜ್ಯದ ಜನರು ಹಿಟ್‌ ವಿಕೆಟ್‌ ಆಗಿದ್ದಾರೆ. 11 ಪ್ರತಿಭಾವಂತ ಯುವಜನರು ಬಲಿಯಾಗಿದ್ದಾರೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

ವೇದಿಕೆಯಲ್ಲಿ ಕಾಂಗ್ರೆಸ್‌ ನಾಯಕರ ಕೈಯಲ್ಲೇ ಟ್ರೋಫಿ ಇತ್ತು. ವರ್ಷಾನುಗಟ್ಟಲೆ ಶ್ರಮವಹಿಸಿ ಆಟವಾಡಿದ ಆಟಗಾರರನ್ನು ಮೂಲೆಗೆ ತಳ್ಳಿದ್ದರು. ಈ ಸಂಭ್ರಮಾಚರಣೆ ಆತುರದ ತೀರ್ಮಾನವೆಂದು ಕಾಂಗ್ರೆಸ್‌ನ ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಸಮರ್ಪಣಾ ಸಮಾವೇಶ ಮಾಡುವ ಮುನ್ನ, ಬೆಂಗಳೂರಿನಲ್ಲಿ ಪ್ರವಾಹ ಬಂದರೂ ಬಹಳಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಯುವಜನರಿಗೆ ಸಂಬಂಧಿಸಿದಂತೆ ಕ್ರೀಡಾ ಕಾರ್ಯಕ್ರಮ ಮಾಡುವಾಗ ಸಿದ್ಧತೆಯನ್ನೇ ಮಾಡಿಕೊಂಡಿಲ್ಲ. ಕಾಂಗ್ರೆಸ್‌ನ ಸಮಾವೇಶಕ್ಕೆ ಮಾಡಿದ್ದ ಸಿದ್ಧತೆಯ ಒಂದು ಪರ್ಸೆಂಟ್‌ನಷ್ಟು ಸಮಯವನ್ನು ಇಲ್ಲಿ ನೀಡಿದ್ದರೆ ಯುವಜನರ ಬದುಕು ಉಳಿಯುತ್ತಿತ್ತು ಎಂದರು.

ಆಯುಕ್ತರ ಅಮಾನತು
ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಪೊಲೀಸ್‌ ಆಯುಕ್ತರನ್ನು ಅಮಾನತು ಮಾಡಲಾಗಿದೆ. ಜನರು ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ಜೊತೆಗಿದ್ದೇವೆ ಎಂದು ಹೇಳುತ್ತಿದ್ದಾರೆ. ಕಾಲ್ತುಳಿತಕ್ಕೆ ಸಿಲುಕಿ ನಿತ್ರಾಣರಾಗಿದ್ದ ಯುವಕ ಯುವತಿಯರನ್ನು ಪೊಲೀಸರು ಕೈಯಲ್ಲಿ ಎತ್ತಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಯಾವುದೇ ಕಾಂಗ್ರೆಸ್‌ ಕಾರ್ಯಕರ್ತರು ಇರಲಿಲ್ಲ. ಆದರೆ ಈಗ ಪೊಲೀಸರನ್ನೇ ಅಮಾನತು ಮಾಡಲಾಗಿದೆ. ನಾವು ನ್ಯಾಯ ಸಿಗುವವರೆಗೂ ರಾಜಕಾರಣ ಮಾಡುತ್ತೇವೆ. ಯಾರನ್ನೋ ಹರಕೆಯ ಕುರಿ ಮಾಡುವುದರ ವಿರುದ್ಧ ನಾವು ರಾಜಕಾರಣ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

 

ಪೊಲೀಸ್‌ ಆಯುಕ್ತರಿಂದ ಅನುಮತಿ ನೀಡಲು ನಿರಾಕರಿಸಲಾಗಿತ್ತು, ಆದರೆ ಆರ್‌ಸಿಬಿ ಫ್ರಾಂಚೈಸಿಯವರು ಸಂಜೆ ಕಾರ್ಯಕ್ರಮ ಮಾಡಬೇಕೆಂದು ನಿರ್ಧರಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಬರೆಯಲಾಗಿದೆ. ಅಂದರೆ ಇದು ಅನಧಿಕೃತ ಕಾರ್ಯಕ್ರಮವಾಗಿದೆ. 144 ಸೆಕ್ಷನ್‌ ಹಾಕಿದ್ದರೆ ಕಾರ್ಯಕ್ರಮಕ್ಕೆ ಯಾರೂ ಬರುತ್ತಿರಲಿಲ್ಲ. ಇದು ಅನಧಿಕೃತ ಎಂದಮೇಲೆ ಆ ಸೆಕ್ಷನ್‌ ಹಾಕಿ ಕಾರ್ಯಕ್ರಮವನ್ನು ರದ್ದು ಮಾಡಬೇಕಿತ್ತು. ಸರ್ಕಾರಕ್ಕೆ ಮುಜುಗರವಾಗಿದ್ದರಿಂದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ನಾವೆಲ್ಲರೂ ಸರ್ಕಾರವೇ ಅಪರಾಧಿ, ತಪ್ಪಿತಸ್ಥರೇ ಸರ್ಕಾರದವರು ಎಂದು ಹೇಳುತ್ತಿದ್ದೇವೆ. ಪ್ರಾಂಚೈಸಿಯವರಿಗೆ ಕಾರ್ಯಕ್ರಮ ಮಾಡು ಎಂದು ಸೂಚನೆ ನೀಡಿದವರು ಯಾರು? ಕ್ರಿಕೆಟಿಗರನ್ನು ಕರೆದುಕೊಂಡು ಬಂದವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಎರಡು ಕಡೆ ಕಾರ್ಯಕ್ರಮ ನಡೆಸುವುದು ಬೇಡ ಎಂದು ಪೊಲೀಸರು ಹೇಳಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಘಟನೆ ನಡೆದಿಲ್ಲ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ ಎಂದು ಹೇಳಿದ್ದಾರೆ. ಈ ಎರಡೂ ಸ್ಥಳಗಳು ಅಕ್ಕಪಕ್ಕದಲ್ಲೇ ಇವೆ. ಪೊಲೀಸರು ಅನುಮತಿ ನೀಡದಿದ್ದರೂ, ಕಾಂಗ್ರೆಸ್‌ ಸರ್ಕಾರ ಕಾನೂನು ಕೈಗೆ ತೆಗೆದುಕೊಂಡು ಕಾರ್ಯಕ್ರಮ ನಡೆಸಿದೆ. ಎಲ್ಲರೂ ಫೋಟೋ ಶೂಟ್‌ನಲ್ಲಿ ನಿರತರಾಗಿದ್ದರೇ ಹೊರತು, ಜನರ ಬಗ್ಗೆ ಯಾರೂ ಯೋಚಿಸಲಿಲ್ಲ ಕಿಡಿಕಾರಿದ್ದಾರೆ.

ಸರ್ಕಾರವೇ ಅಪರಾಧಿ
ಮೊದಲು ಜಿಲ್ಲಾಧಿಕಾರಿಯಿಂದ ತನಿಖೆ ನಡೆಯಲಿದೆ ಎಂದು ಹೇಳಿದರು. ಮತ್ತೆ ಸಿಐಡಿಯಿಂದ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ. ಇದು ಕೂಡ ಮುಡಾ, ವಾಲ್ಮೀಕಿ ನಿಗಮದ ಹಗರಣದಂತೆಯೇ ಮುಚ್ಚಿಹೋಗಲಿದೆ. ಇಲ್ಲಿ ಸರ್ಕಾರವೇ ಅಪರಾಧಿಯಾಗಿರುವುದರಿಂದ, ಸರ್ಕಾರದಲ್ಲಿರುವ ಯಾರೂ ತನಿಖೆ ಮಾಡಬಾರದು. ಇದನ್ನು ನ್ಯಾಯಾಧೀಶರೇ ತನಿಖೆ ಮಾಡಬೇಕು. ಅನುಮತಿ ನೀಡಲು ಒತ್ತಡ ಹೇರಿದವರು ಯಾರು, ಕಾರ್ಯಕ್ರಮ ನಡೆಸಲು ಸೂಚನೆ ನೀಡಿದವರು ಯಾರು ಎಂಬುದು ಗೊತ್ತಾಗಬೇಕಿದೆ. ಅಲ್ಲಿಯವರೆಗೂ ಹೋರಾಟ ಮುಂದುವರಿಯಲಿದೆ ಎಂದು ಅಶೋಕ್ ತಿಳಿಸಿದರು. ಇದನ್ನೂ ಓದಿ: Chinnaswamy Stampede| ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

TAGGED:Bengaluru Stampede casechinnaswamy stadiumr ashokrcbsiddaramaiah
Share This Article
Facebook Whatsapp Whatsapp Telegram

Cinema news

Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories
katrina Kaif and vicky kaushal
ಪುತ್ರನಿಗೆ `ವಿಹಾನ್‌ʼ ಎಂದು ಹೆಸರಿಟ್ಟ ಕತ್ರೀನಾ-ವಿಕ್ಕಿ ಕೌಶಲ್ 
Bollywood Cinema Latest Top Stories
Koragajja Sudheer Atthavar
ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್: ನಿರ್ದೇಶಕ ಸುಧೀರ್ ಅತ್ತಾವರ್ ಸ್ಪಷ್ಟನೆ
Cinema Latest Sandalwood Top Stories

You Might Also Like

udp monkey fever 3
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಂಗನಕಾಯಿಲೆ ಪತ್ತೆ

Public TV
By Public TV
1 minute ago
Bike Wheeling Mysuru
Crime

Video Viral | ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್

Public TV
By Public TV
22 minutes ago
Kogilu Layout Demolition 20 officials of Rajiv Gandhi Housing Scheme visited site
Bengaluru City

ಕೋಗಿಲು ಲೇಔಟ್‌ ಒತ್ತುವರಿ ತೆರವು ಕೇಸ್;‌ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

Public TV
By Public TV
27 minutes ago
Janardhana Reddy
Bellary

ರಾಜಶೇಖರ್ ಸಾವು ಆಕಸ್ಮಿಕ ಅಲ್ಲ, ಉದ್ದೇಶಪೂರ್ವಕ ಕೊಲೆ: ಜನಾರ್ದನ ರೆಡ್ಡಿ

Public TV
By Public TV
1 hour ago
pm modi pejawar seer
Latest

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ ನಿಲ್ಲಿಸಲು ಕ್ರಮವಹಿಸಿ: ಮೋದಿಗೆ ಪೇಜಾವರ ಶ್ರೀ ಪತ್ರ

Public TV
By Public TV
2 hours ago
Haryana 11th baby
Latest

10 ಹೆಣ್ಣುಮಕ್ಕಳ ನಂತರ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ – ಮಕ್ಕಳ ಹೆಸ್ರು ಕೇಳಿದಾಗ ಹೆಣಗಾಡಿದ ತಂದೆ, ವಿಡಿಯೋ ವೈರಲ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?