ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರದ ಬಗ್ಗೆ ಮೋದಿಗೆ ಗೌರವ ಇಲ್ಲ ಎಂಬ ಡಿಕೆಶಿ ಹೇಳಿಕೆಗೆ ಕಂದಾಯ ಸಚಿವ ಆರ್. ಅಶೋಕ್ (R Ashok) ತಿರುಗೇಟು ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ನಗರದಲ್ಲಿ ಬಿಜೆಪಿ ಯುವ ಮುಖಂಡ ಧೀರಜ್ ಮುನಿರಾಜು ಜನ್ಮದಿನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ (Narendra Modi) ಹಾಗೂ ಅಮಿತ್ ಶಾ (Amit Shah) ಕಂಡರೆ ಡಿ.ಕೆ. ಶಿವಕುಮಾರ್ಗೆ (DK Shivakumar) ಭಯ. ಮೋದಿಯವರಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕವೇ ಬಹಳ ಮುಖ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಕರ್ನಾಟಕವಾಗಿದ್ದು, ಕರ್ನಾಟಕದ ಬಗ್ಗೆ ಮೋದಿಯವರಿಗೆ ಹೆಚ್ಚು ಪ್ರೀತಿ ಅಭಿಮಾನ ಇದೆ ಎಂದರು.
ಅತಿವೃಷ್ಠಿ ಆದಾಗ ಅತಿ ಹೆಚ್ಚು ಪರಿಹಾರದ ಹಣ ಕೇಂದ್ರ ಸರ್ಕಾರ ನೀಡಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ 1 ವರ್ಷ ಕಾಯಿಸ್ತಿದ್ದರು. ಈಗ 1 ತಿಂಗಳಲ್ಲಿ ಪರಿಹಾರ ಕೊಡುತ್ತಿದ್ದಾರೆ. ಇದಕ್ಕೆ ಕಾರಣ ಮೋದಿಯಾಗಿದ್ದಾರೆ. ರೈಲ್ವೆ, ಹೈವೇ, ನೀರಾವರಿಗೆ ಅತಿ ಹೆಚ್ಚು ಅನುದಾನ ನೀಡಿದ್ದಾರೆ. ಕಳಸಾ ಬಂಡೂರಿ ಯೋಜನೆಗೆ ಕ್ಲಿಯರೆನ್ಸ್ ಕೂಡ ಕೊಟ್ಟಿದ್ದಾರೆ. ಕಾಂಗ್ರೆಸ್ ಇದ್ದಾಗ ಯಾಕೆ ಕೊಡಲಿಲ್ಲ ಪ್ರಶ್ನಿಸಿದ ಅವರು, ಮನಮೋಹನ್ ಸಿಂಗ್ ಪ್ರಧಾನಿ ಆದಾಗ ಮೇಕೆದಾಟು, ಮಹದಾಯಿ ಜ್ಞಾಪಕ ಬರಲಿಲ್ಲ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ವೈ.ಎಸ್.ವಿ. ದತ್ತಾ – ಜೆಡಿಎಸ್ ಕಿಡಿ
ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದು ಬಿಡುತ್ತೇವೆ ಎಂಬ ತಿರುಕನ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ನವರು ಅಧಿಕಾರಕ್ಕೆ ಬರಲು ಅಲ್ಲ ವಿರೋಧ ಪಕ್ಷದವರು ಸಹ ಆಗಲು ಲಾಯಕ್ಕಿಲ್ಲ. ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ಒಳ ಜಗಳವಿದೆ. ಪರಮೇಶ್ವರ್ ಸಹ ನಾನು ಸಿಎಂ ಅಂತಾರೆ, ಈಗ ಮಲ್ಲಿಕಾರ್ಜುನ ಖರ್ಗೆಯವರು ರೇಸ್ಗೆ ಬಂದಿದ್ದಾರೆ. ಸಿದ್ದರಾಮಯ್ಯ ಅವರು ಸಹ ನಾನೇ ಆಗ್ತೇನೆ ಅಂತಾರೆ. ಡಿಕೆಶಿ ಯವರು ಜ್ಯೋತಿಷಿಗಳು ಹೇಳಿದ್ದಾರೆ ನಾನು ಸಿಎಂ ಆಗ್ತೀನಿ ಅಂತಾರೆ. ಕಾಂಗ್ರೆಸ್ ಒಳಜಗಳದಲ್ಲಿ ಮುಳುಗಿರುವ ಪಕ್ಷ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ನವರಿಗೆ ಪಕ್ಷ ಮೊದಲು, ಆದರೆ ಬಿಜೆಪಿಗೆ ದೇಶ ಮೊದಲು ಎಂದು ಹೇಳಿದರು. ಇದನ್ನೂ ಓದಿ: ಮುಂಬೈ ದಾಳಿ ವೇಳೆ ನಾನೂ ಹೋಟೆಲ್ನಲ್ಲಿದ್ದೆ: ಪಾರಾದ ಥ್ರಿಲ್ಲಿಂಗ್ ಘಟನೆ ವಿವರಿಸಿದ ಅದಾನಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k