Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

Public TV
Last updated: May 20, 2025 5:01 pm
Public TV
Share
2 Min Read
R Ashok
SHARE

– ಗ್ರೇಟರ್ ಬೆಂಗಳೂರು ಹೋಗಿ ವಾಟರ್ ಬೆಂಗಳೂರು ಆಗಿದೆ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ ಎಂದು ತಿಳಿಸಿ ಎಂದು ವಿಪಕ್ಷ ನಾಯಕ ಆರ್. ಅಶೋಕ್(R Ashok) ಕಿಡಿಕಾರಿದರು.

ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ(Bengaluru) ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ? ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ 5 ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಸ್ಕೀಂ ನಿಲ್ಲೋದಿಲ್ಲ: ಡಿಕೆಶಿ ಸ್ಪಷ್ಟನೆ

ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ ಶಿವಕುಮಾರ್(D K Shivakumar) ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್ ಬೋರ್ಡ್ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್(Congress) ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ. ಬೆಂಗಳೂರಿನ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ಗುಡುಗಿದರು. ಇದನ್ನೂ ಓದಿ: `ಆಪರೇಷನ್ ಸಿಂಧೂರ’ ಬೂಟಾಟಿಕೆ ಅಂದಿದ್ದ ಕೊತ್ತೂರು ಮಂಜುನಾಥ್ ವಿರುದ್ಧ ಪ್ರಕರಣ ದಾಖಲು

ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಯಾವ ಕೆಲಸವೂ ಆಗಿಲ್ಲ. ಏ. 15ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ(BBMP) ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ ಎಂದರು. ಇದನ್ನೂ ಓದಿ: ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ

ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರತಿ ವರ್ಷ ಏಳೆಂಟು ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ ನೀಡಿರುವ ಹಣವೆಲ್ಲವನ್ನೂ ಸುರಂಗ ನಿರ್ಮಿಸಲು ಬಳಸಲಾಗುತ್ತಿದೆ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್ ಬೆಂಗಳೂರು(Greater Bengaluru) ಹೋಗಿ ವಾಟರ್ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ ಎಂದು ದೂರಿದರು.

TAGGED:bengalurubengaluru raincongressr ashokಆರ್ ಅಶೋಕ್ಕಾಂಗ್ರೆಸ್ಬೆಂಗಳೂರುಬೆಂಗಳೂರು ಮಳೆ
Share This Article
Facebook Whatsapp Whatsapp Telegram

You Might Also Like

11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
8 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
18 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
31 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
1 hour ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
1 hour ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?