Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಜರಿಗೂ, ಮುಡಾ ಸೈಟ್ ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು: ಆರ್.ಅಶೋಕ್ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾರಾಜರಿಗೂ, ಮುಡಾ ಸೈಟ್ ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು: ಆರ್.ಅಶೋಕ್ ಲೇವಡಿ

Bengaluru City

ಮಹಾರಾಜರಿಗೂ, ಮುಡಾ ಸೈಟ್ ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು: ಆರ್.ಅಶೋಕ್ ಲೇವಡಿ

Public TV
Last updated: July 26, 2025 7:39 pm
Public TV
Share
3 Min Read
R Ashok 1
SHARE

– ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್; ವಿಪಕ್ಷ ನಾಯಕ ಕಿಡಿ

ಬೆಂಗಳೂರು: ಚಿನ್ನಾಭರಣ ಅಡವಿಟ್ಟು ಜಲಾಶಯ ನಿರ್ಮಿಸಿದವರಿಗೂ, ಮುಡಾದಲ್ಲಿ 14 ಸೈಟುಗಳನ್ನು ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ (Nalwadi Krishnaraja Wadiyar) ಅವರು ಹಳೆ ಮೈಸೂರು ಭಾಗಕ್ಕೆ ನೀಡಿದ ಕೊಡುಗೆಯನ್ನು ನಾವು ಸ್ಮರಿಸಬೇಕು. ಕೆಆರ್‌ಎಸ್ ಜಲಾಶಯದಿಂದಾಗಿ ಜನರಿಗೆ ಜೀವಜಲ ದೊರೆತಿದೆ. ಅವರ ಸಾಧನೆಗಳಿಂದಾಗಿ ಜನರು ಅನ್ನ ತಿನ್ನುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ಉರುಳಿದ ಬೃಹತ್ ಮರ – ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ತೆರವು

ಸೋಪ್ ಫ್ಯಾಕ್ಟರಿ, ವಿಶ್ವವಿದ್ಯಾಲಯಗಳ ನಿರ್ಮಾಣ, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದವರೇ ಅವರು. ಚಿನ್ನಾಭರಣ ಅಡವಿಟ್ಟು ಜಲಾಶಯ ನಿರ್ಮಿಸಿದವರಿಗೂ, ಮುಡಾದಲ್ಲಿ 14 ಸೈಟುಗಳನ್ನು ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮಹಾರಾಜರ ಕುಟುಂಬಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೇ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಾವು ಬಿಜೆಪಿಯವರಿಗಿಂತ ಜಾಸ್ತಿ ಕೆಲಸ ಮಾಡಿದ್ದೇವೆ – ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಿಬಿಎಂಪಿ (BBMP) ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ. ಬೆಂಗಳೂರನ್ನು ಅತಂತ್ರವಾಗಿ 5 ಭಾಗ ಮಾಡಲಾಗಿದೆ. ರಾಜಕೀಯ ದೃಷ್ಟಿಯಿಂದ ಹಾಗೂ ಕಾಂಗ್ರೆಸ್ ಗೆಲ್ಲಬೇಕೆಂಬ ಗುರಿಯಿಂದ ವಿಭಜನೆ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 10 ವರ್ಷ ಸಿಎಂ ಆಗ್ಬಿಟ್ರೆ ತಾಯಿ ಚಾಮುಂಡಿಗಿಂತ ದೊಡ್ಡವರಾಗಿಬಿಡ್ತಾರೆ: ಪ್ರತಾಪ್‌ ಸಿಂಹ ಕಿಡಿ

ಐದು ಪಾಲಿಕೆಗಳ ನಡುವೆ ತಾರತಮ್ಯ ಉಂಟಾಗಲಿದೆ. ಇದರ ವಿರುದ್ಧ ಕೋರ್ಟ್ ಮೊರೆ ಹೋಗಿ ಹೋರಾಟ ಮಾಡಲಾಗುವುದು. ಬೆಂಗಳೂರನ್ನು ಒಡೆಯಿರಿ ಎಂದು ಜನರು ಕೇಳಿಲ್ಲ. ಈಗಾಗಲೇ ನಗರದಲ್ಲಿ ತೆರಿಗೆ, ಸೆಸ್, ಇ-ಖಾತಾದಿಂದ ಸಮಸ್ಯೆ ಉಂಟುಮಾಡಿದ್ದಾರೆ. ಇಂತಹ ಸಮಯದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಖಚಿತವಾಗಿದೆ. ಅದನ್ನು ತಪ್ಪಿಸಲು ಹೀಗೆ ಭಾಗ ಮಾಡಿದ್ದಾರೆ ವಾಗ್ದಾಳಿ ನಡೆಸಿದ್ದಾರೆ.

ಕಪ್ಪು ಪಟ್ಟಿಯಲ್ಲಿರುವ ಗುತ್ತಿಗೆದಾರರಿಗೆ ಸುರಂಗ ರಸ್ತೆ ಯೋಜನೆಯನ್ನು ನೀಡಲಾಗುತ್ತಿದೆ. ಸುರಂಗ ರಸ್ತೆಗೆ ಟೋಲ್ ಕೂಡ ಇರುವುದರಿಂದ ಶ್ರೀಮಂತರು ಮಾತ್ರ ಇದನ್ನು ಬಳಸಬಹುದು. ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಿಲ್ಲ. ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಆದರೆ ದುಡ್ಡು ಕೊಳ್ಳೆ ಹೊಡೆಯುವ ಯೋಜನೆಗಳನ್ನು ವಿರೋಧಿಸುತ್ತೇವೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

ಹೆಬ್ಬಾಳ ಮೇಲ್ಸೇತುವೆ ಬಳಿಯ ಜಂಕ್ಷನ್‌ಗೆ ಎಲ್ಲ ಕಡೆಯಿಂದ ವಾಹನಗಳು ಬರುತ್ತವೆ. ಅಂತಹ ಜಾಗವನ್ನು ಖಾಸಗಿ ಭೂ ಮಾಲೀಕರಿಗೆ ನೀಡಲು ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಸದನದಲ್ಲಿ ಚರ್ಚಿಸಲಾಗುವುದು. ಇ-ಖಾತಾ ವಿಚಾರದಲ್ಲಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಹಣ ಲೂಟಿ ಮಾಡಲು ಬೆಂಗಳೂರನ್ನು ಬಳಸಬಾರದು ಎಂದಿದ್ದಾರೆ.

ಕಾಂಗ್ರೆಸ್ (Congress) ಸರ್ಕಾರ ಬೆಂಗಳೂರನ್ನು ಹೋಳು ಮಾಡುತ್ತಿದೆ. ಎಲ್ಲೆಡೆ ಟ್ರಾಫಿಕ್ ಹಾಗೂ ಕಸದ ಸಮಸ್ಯೆ ಕಾಣುತ್ತಿದೆ. ಹೋಳು ಮಾಡುವುದರಿಂದ ಅಭಿವೃದ್ಧಿಯಾಗುವುದಿಲ್ಲ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಅನುದಾನವಿಲ್ಲದೆ ಅಭಿವೃದ್ಧಿ ಶೂನ್ಯವಾಗಿದೆ. ಹೊಸ ಪಾಲಿಕೆಗಳ ರಚನೆಯಿಂದ ಬೆಂಗಳೂರು ಜನರ ಹೃದಯ ಚೂರಾಗಲಿದೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕ್‌ ಉಗ್ರವಾದಕ್ಕೆ ಆಪರೇಷನ್ ಸಿಂಧೂರ ನೇರ ಸಂದೇಶ ರವಾನಿಸಿದೆ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ಹುಲಿಗಳು ಸಾಯುವುದನ್ನು ನೋಡಿದರೆ ಅರಣ್ಯ ಇಲಾಖೆ ಸತ್ತು ಹೋಗಿದೆ ಎಂದೆನಿಸುತ್ತದೆ. ಈ ನಡುವೆ ಗೋವುಗಳನ್ನು ಅರಣ್ಯದಲ್ಲಿ ಮೇಯಿಸುವಂತಿಲ್ಲ ಎಂಬ ಆದೇಶ ನೀಡಲಾಗಿದೆ. ಇಂತಹ ಕ್ರಮ ಒಳ್ಳೆಯದಲ್ಲ ಎಂದಿದ್ದಾರೆ.

136 ಸೀಟುಗಳನ್ನು ಗೆದ್ದಿರುವ ಬಗ್ಗೆ ನಮಗೂ ಅನುಮಾನವಿದೆ ಎಂದು ನಾವು ಹೇಳಬಹುದು. ಚುನಾವಣೆಯಲ್ಲಿ ಸೋತಾಗ ಸಾಕ್ಷಿ ಕೇಳುತ್ತಾರೆ. ಭಯೋತ್ಪಾದಕರ ಮೇಲೆ ದಾಳಿ ಮಾಡಿದಾಗಲೂ ಹೀಗೆ ಸಾಕ್ಷಿ ಕೇಳಿದ್ದರು ಎಂದು ಕಿಡಿಕಾರಿದ್ದಾರೆ.

TAGGED:bengalurubjpr ashoksiddaramaiahYathindra siddaramaiahಆರ್‌ ಅಸೋಕ್‌ಬೆಂಗಳೂರುಯತೀಂದ್ರ ಸಿದ್ದರಾಮಯ್ಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Pulwama Attack
Latest

ಪುಲ್ವಾಮಾ ದಾಳಿಗೆ 7 ವರ್ಷ – 2019ರ ಫೆ.14 ರಂದು ನಡೆದಿದ್ದು ಏನು?

Public TV
By Public TV
9 minutes ago
asia cup india pakistan toss
Cricket

ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

Public TV
By Public TV
8 hours ago
Bengaluru Car Seize
Bengaluru City

ಬೆಂಗ್ಳೂರಿನಲ್ಲಿ ಮನಸೋ ಇಚ್ಛೆ ಮಾರ್ಪಡಿಸಿದ ಐಷಾರಾಮಿ ಕಾರು ಸೀಜ್‌

Public TV
By Public TV
9 hours ago
USA Cricket Team
Cricket

ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

Public TV
By Public TV
9 hours ago
Siddaramaiah 15
Bengaluru City

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Public TV
By Public TV
9 hours ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?