Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ – ಆರ್.ಅಶೋಕ್ ವಾಗ್ದಾಳಿ

Public TV
Last updated: November 17, 2024 3:36 pm
Public TV
Share
3 Min Read
R Ashoka
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ 40% ಕಮೀಷನ್ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಯವರಿಂದ ಸಿದ್ದರಾಮಯ್ಯ ಸಾಕ್ಷಿ ಕೇಳ್ತಾರೆ, ಅವರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ, ಡಿಕೆಶಿ, ಅಂಬಿಕಾಪತಿ ಈ ಸುಳ್ಳಿನ ಮಹಲ್ ಕಟ್ಟಿದ್ದರು ಅದು ಈಗ ಕುಸಿದು ಬಿದ್ದಿದೆ. ರಾಜ್ಯದ ಜನತೆಗೆ ಸುಳ್ಳು ಹೇಳಿ, ತಾವು ಸುಳ್ಳುರಾಮಯ್ಯ ಎಂದು ಖುದ್ದು ಸಿಎಂ ಸಾಬೀತು ಪಡಿಸಿದ್ದಾರೆ. ತಪ್ಪು ಮಾಡಿಲ್ಲ ಎಂದು ಸೈಟು ವಾಪಸ್ ಕೊಟ್ಟರು. ಈಗ ಅವರು ಮಾಡಿದ 40% ಕಮೀಷನ್ ಆರೋಪವೂ ಸುಳ್ಳಾಗಿದೆ. ಇನ್ಮುಂದೆ ಸಿದ್ದರಾಮಯ್ಯ ತಮ್ಮ ಹೆಸರನ್ನು ಸುಳ್ಳು ರಾಮಯ್ಯ ಎಂದು ಬದಲಾಯಿಸಿಕೊಳ್ಳಲಿ ಎಂದರು.ಇದನ್ನೂ ಓದಿ: ಹೆಚ್‌ಡಿಕೆ ಬಣ್ಣದ ಬಗ್ಗೆ ಜಮೀರ್ ಮಾತಾಡಿದ್ದು ಸರಿಯಲ್ಲ- ಪ್ರಿಯಾಂಕ್ ಖರ್ಗೆ

ನಾನು ಇವತ್ತಿಗೆ ಪ್ರತಿಪಕ್ಷ ನಾಯಕನಾಗಿ ಒಂದು ವರ್ಷವಾಗಿದೆ. ಹಾಗೇ ಇದೇ ಹೊತ್ತಿನಲ್ಲಿ ನಮ್ಮ ಸರ್ಕಾರದ ಮೇಲಿನ 40% ಕಮೀಷನ್ ಆರೋಪ ಸುಳ್ಳು ಎನ್ನುವುದು ಸಾಬೀತಾಗಿದೆ. ಕಮೀಷನ್ ಆರೋಪ ಮಾಡಿರುವುದು ಕಾಂಗ್ರೆಸ್‌ನ ಟೂಲ್‌ಕಿಟ್‌ನ ಭಾಗವಾಗಿದೆ. ಇದುವರೆಗೆ 40% ಕಮೀಷನ್ ಆರೋಪಕ್ಕೆ ಕಾಂಗೆಸ್‌ನವರು ದಾಖಲೆ ಕೊಟ್ಟಿಲ್ಲ. ಆಧಾರರಹಿತ, ಸುಳ್ಳು ಆರೋಪ ಮಾಡಿದ್ದರು. ನಮ್ಮ ಮೇಲಿನ ಆರೋಪ ಸುಳ್ಳು ಎಂದು ಲೋಕಾಯುಕ್ತ ತನಿಖೆಯಿಂದಲೇ ಗೊತ್ತಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರ 60% ಕಮೀಷನ್ ಸರ್ಕಾರ ಆಗಿದೆ ಎಂದು ಕಿಡಿಕಾರಿದ್ದಾರೆ.

ವಾಲ್ಮೀಕಿ ಹಗರಣ ವಿಚಾರ:
ವಾಲ್ಮೀಕಿ ಹಗರಣದಲ್ಲಿ ಸಾಕ್ಷಿ ಸಿಕ್ಕಿದೆ. ಇಡಿ ಇದನ್ನು ಅನುಮೋದನೆ ಮಾಡಿದೆ. ಬಳ್ಳಾರಿಯಲ್ಲಿ ಯಾರ್ಯಾರಿಗೆ ಹಣ ಹೋಗಿದೆ ಎಂದು ರಿಪೋರ್ಟ್ ಬಂದಿದೆ. ಸಿದ್ದರಾಮಯ್ಯ ತಮ್ಮ ಜೀವನ ತೆರೆದ ಪುಸ್ತಕ ಎಂದಿದ್ದಾರೆ. ತೆರೆದ ಪುಸ್ತಕ ನಾವು ನೋಡಿದರೆ ಕಪ್ಪು ಚುಕ್ಕೆ ಇಡುವುದಕ್ಕೆ ಜಾಗನೇ ಇಲ್ಲ. ಸಿದ್ದರಾಮಯ್ಯ ಅವರ ಕುಟುಂಬ ಲೂಟಿ ಮಾಡುತ್ತಿದೆ. ದಿನ ಒಬ್ಬೊಬ್ಬ ಮಂತ್ರಿ ದರೋಡೆಯ ಪುಸ್ತಕ ತೆರೆಯುತ್ತಿದ್ದಾರೆ. ರಾಜ್ಯದಲ್ಲಿ ಕನ್ನ ಹಾಕುವ ಮಂತ್ರಿಗಳು ಇದ್ದಾರೆ. ನನ್ನ ಮುಟ್ಟಿ ನೋಡಿ, ಕೇಸ್ ಹಾಕಿ ನೋಡಿ, ಸಿಎಂ ಪದವಿಯಿಂದ ಇಳಿಯುವುದಿಲ್ಲ ಎಂದು ಅವರ ಹೈಕಮಾಂಡ್‌ಗೆ ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಅಂದ ಮೇಲೆ ಯಾಕೆ ಹೀಗೆ ಹೇಳುತ್ತೀರಾ? 14 ಸೈಟ್‌ಗಳನ್ನು ಯಾಕೆ ವಾಪಸ್ಸು ಕೊಟ್ಟಿದೀರಿ? ಏಕವಚನದಲ್ಲಿ ಮಾತನಾಡುತ್ತಾರೆ, ಕೇಳಿದರೆ ಹಳ್ಳಿಯಿಂದ ಬಂದವನು ಎನ್ನುತ್ತಾರೆ. ನಾನು ಸೈಟ್ ವಾಪಸ್ಸು ಮಾಡಿಲ್ಲ. ನನ್ನ ಹೆಂಡ್ತಿ ನನಗೆ ಗೊತ್ತಿಲ್ಲದೇ ಕೊಟ್ಟಿದ್ದಾರೆ ಎಂದರು. ಅವರು ಅಹಿಂದ ನಾಯಕರಾಗಿಲ್ಲ ಈಗ ಅವರು ಅಲ್ಪಸಂಖ್ಯಾತರ ಚಾಂಪಿಯನ್ ಆಗಿದ್ದಾರೆ. ಮುಸ್ಲಿಮರ ಹೀರೋ ಆಗಲು ಹೊರಟಿದ್ದಾರೆ ಎಂದು ಹೇಳಿದರು.

ಬೆಳಗಾವಿ ಅಧಿವೇಶನ ಕರೆಯಲು ಸರ್ಕಾರ ಹೆದರುತ್ತಿದ್ದಾರೆ. ಸಾಕಷ್ಟು ಭ್ರಷ್ಟಾಚಾರ ಮಾಡಿ ಈಗ ಅಧಿವೇಶನ ಕರೆಯಲೂ ಹೆದರುತ್ತಿದ್ದಾರೆ. ಅದಕ್ಕೆ ಅಧಿವೇಶನದ ದಿನಾಂಕ ಸಹ ಪ್ರಕಟ ಮಾಡಲು ಹಿಂಜರಿಯುತ್ತಿದ್ದಾರೆ. ಅಧಿವೇಶನದಲ್ಲಿ ಸರ್ಕಾರದ ಎಲ್ಲ ಲೋಪಗಳ ಬಗ್ಗೆ ಚರ್ಚೆ, ಹೋರಾಟ ಮಾಡುತ್ತೇವೆ. ಈ ಸರ್ಕಾರ ಕಾಣೆಯಾಗಿದೆ, ಕೇವಲ ಗುರುವಾರ ಸಂಪುಟ ಸಭೆಯಲ್ಲಿ ಎಲ್ಲರೂ ಕಾಣಿಸಿಕೊಳುತ್ತಾರೆ. ಇದೊಂದು ಗುರುವಾರ ವೀರರ ಸರ್ಕಾರ. ಗುರುವಾರ ಬಳಿಕ ಎಲ್ಲರೂ ನಾಪತ್ತೆಯಾಗಿ ಹೋಗುತ್ತಾರೆ. ಇದು ಗುರುವಾರದ ಸರ್ಕಾರ. ಕ್ಯಾಬಿನೆಟ್ ದಿನ ಮಾತ್ರ ಈ ಸರ್ಕಾರ ಎದ್ದಿರುತ್ತದೆ. ಬಾಕಿ ದಿನ ಮಲಗಿರುತ್ತದೆ. ಅಬಕಾರಿ ಸಚಿವ ಒಂದೇ ದಿನ 18 ಕೋಟಿ ರೂ. ಲೂಟಿ ಹೊಡೆದು ಮಹಾರಾಷ್ಟ್ರಕ್ಕೆ ಕಳಿಸಿದ್ದಾರೆ. ಕಾಂಗ್ರೆಸ್ ಸಚಿವರು ಸಂಪುಟ ಸಭೆ ಮಾಡುವುದು ಸರ್ಕಾರದ ಬೊಕ್ಕಸಕ್ಕೆ ಹಣ ತರುವುದು ಹೇಗೆ ಎಂಬ ಕಾರಣಕ್ಕಲ್ಲ. ಹೇಗೆ ಲೂಟಿ ಮಾಡಬೇಕು? ಎಷ್ಟು ಕಮಿಷನ್ ತರಬಹುದು? ಎಂದು ಸಭೆ ಮಾಡುತ್ತಾರೆ ಎಂದು ಆರೋಪಿಸಿದರು.

ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾವಣೆ ವಿಚಾರ: 
ಬಿಪಿಎಲ್ ಕಾರ್ಡುಗಳನ್ನು (BPL Card) ಸರ್ಕಾರ ರದ್ದು ಮಾಡುತ್ತಿದೆ. ಎಪಿಎಲ್‌ಗೆ ಈಗಾಗಲೇ ಒಂದು ಲಕ್ಷ ಕಾರ್ಡ್‌ಗಳನ್ನು ಪರಿವರ್ತನೆ ಮಾಡಿದ್ದಾರೆ. ಇದು ಸರ್ಕಾರದ ಆರನೇ ಗ್ಯಾರಂಟಿಯಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲಾಗದೇ ಈ ಕೆಲಸ ಮಾಡುತ್ತಿದ್ದಾರೆ. ಉಚಿತ ಗ್ಯಾರಂಟಿಗಳಲ್ಲಿ ಪ್ರತೀ ವರ್ಷ 10% ಕಡಿತ ಮಾಡಲು ಅಧಿಕಾರಿಗಳಿಗೆ ಸರ್ಕಾರ ಟಾರ್ಗೆಟ್ ಕೊಟ್ಟಿದೆ. ಉಚಿತ ಗ್ಯಾರಂಟಿ ಕೊಡಲಾಗದೇ ಸರ್ಕಾರ ಆರ್ಥಿಕ ಹೊರೆಯಲ್ಲಿದೆ. ಹಣ ಹೊಂದಿಸಲು ಸರ್ಕಾರಕ್ಕೆ ಆಗುತ್ತಿಲ್ಲ. ಅದಕ್ಕಾಗಿ ಬಿಪಿಎಲ್ ಕಾರ್ಡ್‌ಗೆ ಕತ್ತರಿ ಹಾಕುವ ಮೂಲಕ ಕಾರ್ಡ್ಗಳನ್ನು ರದ್ದು ಮಾಡಿ, ಎಪಿಎಲ್‌ಗೆ (APL Card) ಪರಿವರ್ತನೆ ಮಾಡುತ್ತಿದ್ದಾರೆ ಎಂದರು.ಇದನ್ನೂ ಓದಿ: ವಕ್ಫ್ ಪ್ರಕರಣದಲ್ಲಿ ಶಾಂತಿ ಕದಡಲು ಬಿಡಲ್ಲ: ಪರಮೇಶ್ವರ್ ಎಚ್ಚರಿಕೆ

TAGGED:bjpcongressCongress Governmentkarnatakar ashokಅಶೋಕ್ಆರ್ಕರ್ನಾಟಕಕಾಂಗ್ರೆಸ್ಕಾಂಗ್ರೆಸ್ ಸರ್ಕಾರಬಿಜೆಪಿ
Share This Article
Facebook Whatsapp Whatsapp Telegram

Cinema Updates

vivek oberoi
ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?
9 minutes ago
prabhas tripti dimri
‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ
1 hour ago
karunya ram
ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ
2 hours ago
RAGINI 4
‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
4 hours ago

You Might Also Like

Narendra Modi 2
Latest

ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ 3ನೇ ವ್ಯಕ್ತಿಯ ಪಾತ್ರವಿಲ್ಲ – ಮೋದಿ

Public TV
By Public TV
8 minutes ago
CET SUMANTH 4TH RANK CET CREATIVE COLLEGE
Dakshina Kannada

ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4ನೇ ರ‍್ಯಾಂಕ್

Public TV
By Public TV
10 minutes ago
CSK 3
Cricket

ಚೆನ್ನೈ ಗುನ್ನಕ್ಕೆ ಗುಜರಾತ್‌ ಧೂಳಿಪಟ – CSKಗೆ 83 ರನ್‌ಗಳ ಭರ್ಜರಿ ಜಯ, ಆರ್‌ಸಿಬಿಗಿದೆಯಾ ನಂ.1 ಪಟ್ಟಕ್ಕೇರುವ ಚಾನ್ಸ್‌?

Public TV
By Public TV
44 minutes ago
School
Bengaluru City

ಕೋವಿಡ್ ಮಧ್ಯೆ ಶಾಲಾ ಕಾಲೇಜುಗಳು ಆರಂಭ – ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್!

Public TV
By Public TV
2 hours ago
Uttarakhand Rain Landslides Traffic 1
Latest

ಉತ್ತರಾಖಂಡ | ಭಾರೀ ಮಳೆಗೆ ಭೂಕುಸಿತ – ಹೆದ್ದಾರಿಯಲ್ಲಿ 6 ಕಿ.ಮೀ ಟ್ರಾಫಿಕ್‌

Public TV
By Public TV
2 hours ago
FASHION DRESS
Fashion

ಮಳೆಗಾಲದಲ್ಲೂ ಫ್ಯಾಷನೆಬಲ್ ಆಗಿ ಕಾಣಲು ಮಹಿಳೆಯರಿಗೆ ಯಾವ ಬಟ್ಟೆ ಸೂಕ್ತ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?